Don't Miss!
- News Heavy Rain: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು: ಸಿಡಿಲು ಬಡಿದು 25 ಮೇಕೆಗಳ ಸಾವು
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Lifestyle ಹೊಟ್ಟೆಯೇ ಇಲ್ಲದೆ ಬದುಕಿದ್ದ ನತಾಶಾ ದಿಡ್ಡಿ ನಿಧನ...! ಈಕೆ ಯಾರು ಗೊತ್ತಾ?
- Finance ಸುಗಮ, ಸುರಕ್ಷಿತ ಸಂಚಾರಕ್ಕಾಗಿ ವಿಶೇಷ ಅಭಿಯಾನ ಆರಂಭಿಸಿದ ಬೆಂಗಳೂರು ಸಂಚಾರಿ ಪೊಲೀಸ್
- Automobiles ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
- Sports ಟಿ20 ವಿಶ್ವಕಪ್ 2024: ಟೀಮ್ ಇಂಡಿಯಾಗೆ ದೊಡ್ಡ ಚಿಂತೆಯಾದ ಈ ಆರಂಭಿಕನ ಫಾರ್ಮ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಎನ್ಕೌಂಟರ್ನಲ್ಲಿ ಹತ್ಯೆಯಾದ ವಿಕಾಸ್ ದುಬೆ ಕುರಿತು ಸಿನಿಮಾ
ಉತ್ತರ ಪ್ರದೇಶದಲ್ಲಿ ಪೊಲೀಸ್ ಎನ್ಕೌಂಟರ್ನಲ್ಲಿ ಹತ್ಯೆಯಾದ ರೌಡಿ ಶೀಟರ್ ವಿಕಾಸ್ ದುಬೆ ಕುರಿತು ವೆಬ್ ಸಿರೀಸ್ ನಿರ್ದೇಶನ ಮಾಡಲು ಬಾಲಿವುಡ್ ನಿರ್ದೇಶಕರೊಬ್ಬರು ಮುಂದಾಗಿದ್ದಾರೆ.
Recommended Video
ಹಿಂದಿ ಹಿರಿಯ ನಿರ್ದೇಶಕ ಹನ್ಸಲ್ ಮೆಹ್ತಾ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ ಎಂಬ ಸುದ್ದಿ ಚರ್ಚೆಯಲ್ಲಿದೆ. ಶಾಹಿದ್ ಮತ್ತು ಒಮೆರ್ಟಾ ಚಿತ್ರಗಳ ಖ್ಯಾತಿಯ ಹನ್ಸಲ್ ಮೆಹ್ತಾ ಈಗಾಗಲೇ ಸ್ಕ್ರಿಪ್ಟ್ ಸಿದ್ದಪಡಿಸುತ್ತಿದ್ದು, ಶೈಲೇಶ್ ಸಿಂಗ್ ನಿರ್ಮಿಸುತ್ತಿದ್ದಾರೆ ಎಂದು ಹೇಳಲಾಗಿದೆ.
ಪತ್ರಕರ್ತ ರಾಹುಲ್ ರೌತ್ ಈ ಕುರಿತು ಮಾಹಿತಿ ನೀಡಿದ್ದು, ಮುಂದಿನ ವರ್ಷ ಶೂಟಿಂಗ್ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ. ಜರ್ನಲಿಸ್ಟ್ ಟ್ವೀಟ್ ಗೆ ಸ್ಪಷ್ಟನೆ ನೀಡಿರುವ ಹನ್ಸಲ್ ಮೆಹ್ತಾ ಕೆಲಸ ಪ್ರಗತಿಯಲ್ಲಿದೆ ಎಂದು ಖಚಿತಪಡಿಸಿದ್ದಾರೆ.
'ಇದು ಬಹಳ ಪ್ರಮುಖ ಕಥೆಯಾಗಿದ್ದು, ರಾಜಕೀಯ, ಅಪರಾಧ ಮತ್ತು ಶಾಸಕರು ಕುತೂಹಲಕಾರಿ ಸಂಬಂಧದ ಪ್ರತಿಬಿಂಬವಾಗಿದೆ. ಹಾಗಾಗಿ, ರಾಜಕೀಯ ಥ್ರಿಲ್ಲರ್ ರೋಚಕವಾಗಿರಲಿದೆ. ಸದ್ಯಕ್ಕೆ ಪಾತ್ರಗಳ ಕುರಿತು ಏನೂ ನಿರ್ಧಾರವಾಗಿಲ್ಲ' ಎಂದು ಹನ್ಸಲ್ ಮೆಹ್ತಾ ಮಾಹಿತಿ ನೀಡಿದ್ದಾರೆ.
ಉತ್ತರ ಪ್ರದೇಶದಲ್ಲಿ ಹಲವು ಪ್ರಮುಖ ಕೇಸ್ಗಳಲ್ಲಿ ಮುಖ್ಯ ಆರೋಪಿಯಾಗಿದ್ದ ವಿಕಾಸ್ ದುಬೆ ಆರು ಜನ ಪೊಲೀಸರನ್ನು ಕೊಂದು ಎಸ್ಕೇಪ್ ಆಗಿದ್ದ. ಬಳಿಕ, ಈತನನ್ನು ಜುಲೈ 10 ರಂದು ಬಂಧಿಸಿ ಕಾನ್ಪುರಕ್ಕೆ ಕರೆತರುವ ವೇಳೆ ಎನ್ಕೌಂಟರ್ ಮಾಡಲಾಗಿದೆ.
ಇದು ನಕಲಿ ಎನ್ಕೌಂಟರ್, ಉದ್ದೇಶಪೂರ್ವವಾಗಿ, ಪೂರ್ವನಿಯೋಜಿತವಾಗಿ ಪೊಲೀಸರು ಎನ್ಕೌಂಟರ್ ಮಾಡಿದ್ದಾರೆ ಎಂದು ಆರೋಪಿಸಿ ನ್ಯಾಯಾಲಯದಲ್ಲಿ ಅರ್ಜಿ ಸಹ ದಾಖಲಾಗಿದೆ.