Don't Miss!
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Lifestyle ಗ್ರಹಣ ಕಾಲದಲ್ಲಿ ಆಹಾರ ಸೇವಿಸಬಾರದೇಕೆ.? ಹಿರಿಯರ ವಾದವೇನು..?
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ನನಗೆ ಹಲವು ಬಾರಿ ಲೈಂಗಿಕ ಕಿರುಕುಳ ಆಗಿದೆ': ನಿರ್ಮಾಪಕಿ ತ್ರಿಷಾ ದಾಸ್
''ಆರಂಭದ ದಿನಗಳಲ್ಲಿ ನಾನು ಹಲವು ಬಾರಿ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೇನೆ'' ಎಂದು ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಸಾಕ್ಷ್ಯಚಿತ್ರ ನಿರ್ಮಾಪಕಿ ತ್ರಿಷಾ ದಾಸ್ ಬಹಿರಂಗಪಡಿಸಿದ್ದಾರೆ.
ಕಳೆದ ಐದು ವರ್ಷಗಳಲ್ಲಿ ದೇಶದಲ್ಲಿ ಅನೇಕ ರೀತಿಯ ಬದಲಾವಣೆಗಳು ಆಗಿವೆ. ಮೀಟೂ ಅಂತಹ ಕ್ರಾಂತಿಕಾರಿ ಅಭಿಯಾನಗಳು ನಡೆದಿದೆ. ಇದು ಸಮಾಜದಲ್ಲಿ ಜಾಗೃತಿ ಮೂಡಿಸಿದೆ ಎಂದು ಹೇಳಿದ ತ್ರಿಷಾ, ಕೆಲಸ ಮಾಡುವ ಸ್ಥಳದಲ್ಲಿ ಅನೇಕ ರೀತಿ ಕಿರುಕುಳ ಅನುಭವಿಸಿರುವ ಘಟನೆ ಹಂಚಿಕೊಂಡರು.
ಕೋಣೆಯಲ್ಲಿ ನನ್ನೊಂದಿಗೆ ಅಸಭ್ಯವಾಗಿ ನಡೆದುಕೊಂಡ: ನಟಿ ಬಿಚ್ಚಿಟ್ಟ ಕರಾಳ ಅನುಭವ
"ನಾನು ಸಾಕ್ಷ್ಯಚಿತ್ರ ನಿರ್ಮಾಪಕಿಯಾಗಿ ಕೆಲಸ ಮಾಡುತ್ತಿದ್ದ ದಿನದಲ್ಲಿ ಅನೇಕ ಬಾರಿ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೆ. ಕೆಲಸ ಮಾಡುವ ಸ್ಥಳಗಳಲ್ಲಿ ಇದು ಸಾಮಾನ್ಯವಾಗಿಬಿಟ್ಟಿತ್ತು. ಇಂತಹ ಸಂದರ್ಭದಲ್ಲಿ ಮಹಿಳೆಯರು ಇತರೆ ಮಹಿಳೆಯರನ್ನು ಪರಸ್ಪರ ಸಾಂತ್ವನಗೊಳಿಸುವುದು, ಪರಸ್ಪರ ರಕ್ಷಿಸಿಕೊಳ್ಳುವ ಕೆಲಸ ಮಾಡುತ್ತಿದ್ದರು'' ಎಂದು ತ್ರಿಷಾ ಹೇಳಿದ್ದಾರೆ.
"ತಮ್ಮ ನೋವಿನ ಕಥೆಯನ್ನು ಹಂಚಿಕೊಳ್ಳುವ ಆಗ ಯಾವುದೇ ಸಾಮಾಜಿಕ ಜಾಲತಾಣ ಇರಲಿಲ್ಲ. ಹಾಗಾಗಿ, ಇದರ ಹೊಣೆಗಾರಿಕೆ ಕೂಡ ಇರಲಿಲ್ಲ. ಅಂತಹ ಕಿರುಕುಳವನ್ನು ಎದುರಿಸಿದ ನಂತರ ಮೌನವಾಗಿರುವುದು ಸಾಮಾನ್ಯವಾಗಿತ್ತು. ಪುರುಷರಿಗೆ ಪರಿಣಾಮದ ಭಯವಿರಲಿಲ್ಲ. ಮೀಟೂ ಅಭಿಯಾನ ಬಂದ ಮೇಲೆ ಲೈಂಗಿಕ ಕಿರುಕುಳದ ಬಗ್ಗೆ ಗಟ್ಟಿಯಾಗಿ ಮಾತನಾಡುವಂತಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಚರ್ಚಿಸುವಂತಾಗಿದೆ'' ಎಂದಿದ್ದಾರೆ.
ಇನ್ನು ತಮಗೆ ಕಿರುಕುಳ ನೀಡಿದವರ ಬಗ್ಗೆ ಬಹಿರಂಗಪಡಿಸಬಹುದು ಅಲ್ಲವೇ ಎಂದು ಪ್ರಶ್ನಿಸಿದ್ದಕ್ಕೆ, ''ಅವರು ಪ್ರಸಿದ್ಧತೆ ಪಡೆದವರಾಗಿಲಿಲ್ಲ, ಯಾರೊಂದಿಗೂ ನಾನು ಸಂಪರ್ಕದಲ್ಲಿಲ್ಲ, ಈಗ ಅವರು ಎಲ್ಲಿದ್ದಾರೆ ಎಂದು ನನಗೆ ತಿಳಿದಿಲ್ಲ. ಆ ಸಂದರ್ಭದಲ್ಲಿ ಅವರನ್ನು ಹುಡುಕಲು ಸಾಮಾಜಿಕ ಮಾಧ್ಯಮಗಳು ಅಥವಾ ವಾಟ್ಸಾಪ್ ಇರಲಿಲ್ಲ'' ಎಂದು ತಿಳಿಸಿದ್ದಾರೆ.
''ಮೀಟೂ ಅಭಿಯಾನದಿಂದ ಮಹಿಳೆಯರ ಸಬಲೀಕರಣ ಆಗುತ್ತಿರಬಹುದು. ಆದರೆ, ಈ ಅಭಿಯಾನ ರಾಜಕೀಯವಾಗಿರುವುದಿಲ್ಲ ಎಂದು ಭಾವಿಸುತ್ತೇನೆ'' ಎಂದು ಅಭಿಪ್ರಾಯ ಪಟ್ಟರು.
ತ್ರಿಷಾ ದಾಸ್ ಹಲವು ಪುಸ್ತಕಗಳನ್ನು ಬರೆದಿದ್ದು, 'ದ್ರೌಪದಿ ಕುರು: ಅಫ್ಟರ್ ದಿ ಕೌರವಸ್', 'ಕಾಮಾಸ್ ಲಾಸ್ಟ ಸೂತ್ರ', 'ಮಿಸ್ಟರ್ಸ್ ಕುರು: ಎ ರಿಟರ್ನ್ ಟು ಮಹಾಭಾರತ' ಖ್ಯಾತಿ ಗಳಿಸಿದೆ.