Don't Miss!
- Sports PBKS vs MI IPL 2024: ಸೂರ್ಯಕುಮಾರ್ ಶೈನಿಂಗ್; ಪಂಜಾಬ್ಗೆ ಸವಾಲಿನ ಗುರಿ ನೀಡಿದ ಮುಂಬೈ
- News ಒಳರೋಗಿಗಳು ಆಸ್ಪತ್ರೆಯಲ್ಲಿನ ಆಹಾರವನ್ನೇ ಏಕೆ ಸೇವಿಸಬೇಕು? ಇದಕ್ಕೆ ಕಾರಣವೇನು?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Lifestyle ಊಟದ ರುಚಿ ಹೆಚ್ಚಿಸುತ್ತೆ ಚೌಳಿಕಾಯಿ ಪಲ್ಯ..! ಹೀಗೆ ಮಾಡಿ
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇರ್ಫಾನ್ ಖಾನ್, ರಿಷಿ ಕಪೂರ್ ಅವಹೇಳನೆ: ಕೆಆರ್ಕೆ ವಿರುದ್ಧ ಎಫ್ಐಆರ್
ವಿವಾದಾತ್ಮಕ ಹೇಳಿಕೆಗಳಿಂದ ಸದಾ ಸುದ್ದಿಯಲ್ಲಿರುವ ಸ್ವಯಂ ಘೋಷಿತ ಚಿತ್ರ ವಿಮರ್ಶಕ ಕಮಾಲ್ ಆರ್ ಖಾನ್ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂಬೈನ ಬಾಂದ್ರಾದಲ್ಲಿನ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
Recommended Video
ಕಳೆದ ತಿಂಗಳು ಮೃತಪಟ್ಟ ಬಾಲಿವುಡ್ ದಿಗ್ಗಜರಾದ ಇರ್ಫಾನ್ ಖಾನ್ ಮತ್ತು ರಿಷಿ ಕಪೂರ್ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ ಆರೋಪದಡಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕೆಆರ್ಕೆ ಅವಮಾನಕಾರಿಯಾದ ಟ್ವೀಟ್ಗಳನ್ನು ಮಾಡಿದ್ದಾರೆ ಎಂದು ಯುವ ಸೇನಾ ಎಂಬ ಸಂಘಟನೆಯ ಸದಸ್ಯ ರಾಹುಲ್ ಕನಾಲ್ ದೂರು ನೀಡಿದ್ದರು.
ಅಪ್ಪನಿಗೆ ವೈಜಯಂತಿಮಾಲಾ ಜತೆ ಇದ್ದ ಅಫೇರ್ ಬಗ್ಗೆ ರಿಷಿ ಕಪೂರ್ ಹೀಗೆ ಹೇಳಿದ್ದರು...
ದೇಶದಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಈಗ ಲಿಕ್ಕರ್ ಅಂಗಡಿಗಳು ತೆರೆಯುವುದಿಲ್ಲ ಎಂಬ ಕಾರಣಕ್ಕೆ ರಿಷಿ ಕಪೂರ್ ಸಾಯಬಾರದಿತ್ತು ಎಂಬುದಾಗಿ ಏ. 30ರಂದು ಕೆಆರ್ಕೆ ಟ್ವೀಟ್ ಮಾಡಿದ್ದರು ಎನ್ನಲಾಗಿದೆ. ಹಾಗೆಯೇ ಇರ್ಫಾನ್ ಕುರಿತೂ ಅವರು ಕೆಟ್ಟದಾಗಿ ಕಾಮೆಂಟ್ ಮಾಡಿದ್ದರು ಎಂದು ಆರೋಪಿಸಲಾಗಿದೆ.
ರಿಷಿ ಕಪೂರ್ರನ್ನು ನೋಡಲು ಅಮಿತಾಬ್ ಒಮ್ಮೆಯೂ ಆಸ್ಪತ್ರೆಗೆ ಹೋಗಲಿಲ್ಲ: ಕಾರಣ ಇದು
ಇತ್ತೀಚೆಗೆ ನಿಧನರಾದ ಇಬ್ಬರು ನಟರ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿದ್ದಕ್ಕಾಗಿ ಕಮಾಲ್ ಆರ್ ಖಾನ್ ವಿರುದ್ಧ ಐಪಿಸಿ ಸೆಕ್ಷನ್ 294 (ಸಾರ್ವಜನಿಕವಾಗಿ ಅಶ್ಲೀಲ ಕೃತ್ಯ ಅಥವಾ ಪದ ಬಳಕೆ) ಮತ್ತು ಇತರೆ ನಿಯಮಗಳ ಅಡಿ ಪ್ರಕರಣ ದಾಖಲಿಸಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.