Don't Miss!
- Lifestyle ಗಾಯ ಗುಣವಾಗಲು, ದೃಷ್ಟಿ ಸುಧಾರಣೆ ಸೇರಿ ಕೀವಿ ಹಣ್ಣಿನ ಲಾಭ ಎಷ್ಟಿದೆ ಗೊತ್ತಾ?
- News ಕುಡಿಯುವ ನೀರಿಲ್ಲದೇ ಜನ ಬೆಂಗಳೂರಿಗೆ ಬಾಯ್ ಹೇಳುತ್ತಿದ್ದಾರೆ: ಆರ್.ಅಶೋಕ್
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇರ್ಫಾನ್ ಖಾನ್, ರಿಷಿ ಕಪೂರ್ ಅವಹೇಳನೆ: ಕೆಆರ್ಕೆ ವಿರುದ್ಧ ಎಫ್ಐಆರ್
ವಿವಾದಾತ್ಮಕ ಹೇಳಿಕೆಗಳಿಂದ ಸದಾ ಸುದ್ದಿಯಲ್ಲಿರುವ ಸ್ವಯಂ ಘೋಷಿತ ಚಿತ್ರ ವಿಮರ್ಶಕ ಕಮಾಲ್ ಆರ್ ಖಾನ್ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂಬೈನ ಬಾಂದ್ರಾದಲ್ಲಿನ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
Recommended Video
ಕಳೆದ ತಿಂಗಳು ಮೃತಪಟ್ಟ ಬಾಲಿವುಡ್ ದಿಗ್ಗಜರಾದ ಇರ್ಫಾನ್ ಖಾನ್ ಮತ್ತು ರಿಷಿ ಕಪೂರ್ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ ಆರೋಪದಡಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕೆಆರ್ಕೆ ಅವಮಾನಕಾರಿಯಾದ ಟ್ವೀಟ್ಗಳನ್ನು ಮಾಡಿದ್ದಾರೆ ಎಂದು ಯುವ ಸೇನಾ ಎಂಬ ಸಂಘಟನೆಯ ಸದಸ್ಯ ರಾಹುಲ್ ಕನಾಲ್ ದೂರು ನೀಡಿದ್ದರು.
ಅಪ್ಪನಿಗೆ ವೈಜಯಂತಿಮಾಲಾ ಜತೆ ಇದ್ದ ಅಫೇರ್ ಬಗ್ಗೆ ರಿಷಿ ಕಪೂರ್ ಹೀಗೆ ಹೇಳಿದ್ದರು...
ದೇಶದಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಈಗ ಲಿಕ್ಕರ್ ಅಂಗಡಿಗಳು ತೆರೆಯುವುದಿಲ್ಲ ಎಂಬ ಕಾರಣಕ್ಕೆ ರಿಷಿ ಕಪೂರ್ ಸಾಯಬಾರದಿತ್ತು ಎಂಬುದಾಗಿ ಏ. 30ರಂದು ಕೆಆರ್ಕೆ ಟ್ವೀಟ್ ಮಾಡಿದ್ದರು ಎನ್ನಲಾಗಿದೆ. ಹಾಗೆಯೇ ಇರ್ಫಾನ್ ಕುರಿತೂ ಅವರು ಕೆಟ್ಟದಾಗಿ ಕಾಮೆಂಟ್ ಮಾಡಿದ್ದರು ಎಂದು ಆರೋಪಿಸಲಾಗಿದೆ.
ರಿಷಿ ಕಪೂರ್ರನ್ನು ನೋಡಲು ಅಮಿತಾಬ್ ಒಮ್ಮೆಯೂ ಆಸ್ಪತ್ರೆಗೆ ಹೋಗಲಿಲ್ಲ: ಕಾರಣ ಇದು
ಇತ್ತೀಚೆಗೆ ನಿಧನರಾದ ಇಬ್ಬರು ನಟರ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿದ್ದಕ್ಕಾಗಿ ಕಮಾಲ್ ಆರ್ ಖಾನ್ ವಿರುದ್ಧ ಐಪಿಸಿ ಸೆಕ್ಷನ್ 294 (ಸಾರ್ವಜನಿಕವಾಗಿ ಅಶ್ಲೀಲ ಕೃತ್ಯ ಅಥವಾ ಪದ ಬಳಕೆ) ಮತ್ತು ಇತರೆ ನಿಯಮಗಳ ಅಡಿ ಪ್ರಕರಣ ದಾಖಲಿಸಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.