Don't Miss!
- Sports Hardik Pandya: ಸ್ವತಃ ಮುಂಬೈ ಇಂಡಿಯನ್ಸ್ ಫ್ಯಾನ್ಸ್ನಿಂದಲೂ ಹಾರ್ದಿಕ್ ಪಾಂಡ್ಯ ಟ್ರೋಲ್!
- News ಬಿಜೆಪಿ ಯುವಕರಿಗೆ ಪಕೋಡಾ ಮಾರಿ ಎಂದು ಹೇಳಿ ಅವಮಾನ ಮಾಡಿದೆ- ಡಿ ಕೆ ಶಿವಕುಮಾರ್ ಕಿಡಿ
- Finance ಐತಿಹಾಸಿಕ ಹರಾಜು: ಭಾರತ ಮೂಲದ ನೆಲ್ಲೂರು ಹಸು ಬ್ರೆಜಿಲ್ ನಲ್ಲಿ 40 ಕೋಟಿ ರೂ.ಗೆ ಮಾರಾಟ!
- Technology ಅಗ್ಗದ ಬೆಲೆಯಲ್ಲಿ 5G ಫೋನ್ ಬೇಕೆ?..ಹಾಗಿದ್ರೆ ಈ ಆಫರ್ ನಿಮಗೆ ಸೂಪರ್!
- Automobiles ಪ್ರತಿ ಕಿ.ಮೀ ಚಲಿಸಲು ಕೇವಲ 60 ಪೈಸೆ ವೆಚ್ಚ: ಟಾಟಾ ಟಿಯಾಗೋ ಇವಿ EMI, ಆನ್ ರೋಡ್ ಬೆಲೆ ಎಷ್ಟು?
- Lifestyle ಒಂದು ಸೌತೆಕಾಯಿ ಹಾಕಿ ಮಾಡಿ ಮೊಸರು ಹುಳಿ..! ಸಿಕ್ಕಾಪಟ್ಟೆ ರುಚಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಿಲ್ಪಾ ಶೆಟ್ಟಿ, ಸಲ್ಮಾನ್ ಖಾನ್ ವಿರುದ್ಧ ಎಫ್ಐಆರ್
ಬಾಲಿವುಡ್ ನಟ ಸಲ್ಮಾನ್ ಖಾನ್ ಮತ್ತು ಕತ್ರಿನಾ ಕೈಫ್ ಅಭಿನಯದ 'ಟೈಗರ್ ಜಿಂದಾ ಹೈ' ಚಿತ್ರ ಶುಕ್ರವಾರವಷ್ಟೇ (ಡಿಸೆಂಬರ್ 22) ಬಿಡುಗಡೆಯಾಗಿದೆ. ಇದೀಗ, ಚಿತ್ರದ ವಿರುದ್ಧ ಮತ್ತು ನಾಯಕ ನಟ ಸಲ್ಮಾನ್ ಖಾನ್ ವಿರುದ್ಧ ಕೆಲವು ಸಮುದಾಯಗಳು ಆಕ್ರೋಶ ವ್ಯಕ್ತಪಡಿಸುತ್ತಿದೆ.
'ಟೈಗರ್ ಜಿಂದಾ ಹೈ' ಚಿತ್ರದ ಪ್ರಮೋಷನ್ ವೇಳೆ ಸಲ್ಮಾನ್ 'ಭಾಂಗಿ' ಎಂಬ ಪದವನ್ನ ಬಳಿಸಿದ್ದಾರೆ. ಟಿವಿ ವಾಹಿನಿಯಲ್ಲಿ ತಮ್ಮ ನೃತ್ಯದ ಬಗ್ಗೆ ವಿವರಿಸುವಾಗ ಈ ಪದ ಬಳಕೆ ಮಾಡಿದ್ದು, ಇದರಿಂದ ವಾಲ್ಮಿಕಿ ಸಮುದಾಯದವರಿಗೆ ಅವಹೇಳನ ಮಾಡಲಾಗಿದೆ ಎಂದು ಆರೋಪಿಸಿ ಸಲ್ಲು ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ. ಕೇವಲ ಸಲ್ಮಾನ್ ಖಾನ್ ಮಾತ್ರವಲ್ಲ, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕೂಡ 'ಭಾಂಗಿ' ಪದ ಬಳಿಕೆ ಮಾಡಿದ್ದು, ಅವರ ಮೇಲೆ ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಸಲ್ಮಾನ್ ಹಾಗೂ ನಟಿ ಶಿಲ್ಪಾ ಶೆಟ್ಟಿ ವಿರುದ್ಧ ರಾಜಸ್ತಾನದಲ್ಲಿ ಎಫ್ಐಆರ್ ದಾಖಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಾಯಿದೆ 153A ಅಡಿಯಲ್ಲಿ ದೂರು ದಾಖಲಾಗಿದೆ. (SC/ST-153A: ಧರ್ಮ, ಜನಾಂಗ, ಹುಟ್ಟಿದ ಸ್ಥಳ, ನಿವಾಸ, ಭಾಷೆ, ಇತ್ಯಾದಿಗಳ ಆಧಾರದ ಮೇಲೆ ವಿಭಿನ್ನ ಗುಂಪುಗಳ ನಡುವೆ ವೈರತ್ವವನ್ನು ಉತ್ತೇಜಿಸುವುದು ಮತ್ತು ಸೌಹಾರ್ದತೆಯ ನಿರ್ವಹಣೆಗೆ ಪೂರ್ವಾಗ್ರಹವನ್ನು ಮಾಡುವುದು) ರಾಜಸ್ತಾನದ ನಹರ್ ಗಡ್ ನಲ್ಲೂ ಕೂಡ ಇಬ್ಬರ ಮೇಲೆ ದೂರು ದಾಖಲಾಗಿದೆ.
ಮೂಲಗಳ ಪ್ರಕಾರ ''ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗವೂ ಮಾಹಿತಿ ಮತ್ತು ಪ್ರಸಾರ ಇಲಾಖೆ ಹಾಗೂ ದೆಹಲಿ, ಮುಂಬೈ ಪೊಲೀಸ್ ಆಯುಕ್ತರಿಂದ ವರದಿ ಕೇಳಿದೆ. 7 ದಿನಗಳಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ವರದಿ ನೀಡಬೇಕೆಂದು ಸೂಚಿಸಿದೆಯಂತೆ.
ಮತ್ತೊಂದೆಡೆ ವಾಲ್ಮಿಕಿ ಸಮುದಾಯದವರು 'ಟೈಗರ್ ಜಿಂದಾ ಹೈ' ಚಿತ್ರದ ಪ್ರದರ್ಶನದ ವೇಳೆ ಚಿತ್ರವನ್ನ ವಿರೋಧಿಸಿ ಚಿತ್ರಮಂದಿರ ಬಳಿ ಪ್ರತಿಭಟನೆ ಮಾಡುತ್ತಿದ್ದಾರೆ. ಈ ಕೂಡಲೇ ಸಲ್ಲು ಹಾಗೂ ಶಿಲ್ಪಾ ಶೆಟ್ಟಿ ಇಬ್ಬರು ಸಮುದಾಯದವರನ್ನ ಕ್ಷಮೆ ಕೇಳಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದ್ದಾರೆ.