Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಿಮಾಚಲ ಪ್ರದೇಶ ಸರ್ಕಾರದಿಂದ ನಟಿ ಕಂಗನಾಗೆ ಭದ್ರತೆ: ಸಿಎಂ ಜೈರಾಮ್ ಠಾಕೂರ್
ಬಾಲಿವುಡ್ ನಟಿ ಕಂಗನಾ ರಣಾವತ್ ಮುಂಬೈ ಭೇಟಿಗೆ ರಾಜ್ಯ ಸರ್ಕಾರ ಭದ್ರತೆ ನೀಡಲಿದೆ ಎಂದು ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಹೇಳಿದ್ದಾರೆ.
"ಕಂಗನಾ ಹಿಮಾಚಲ ಪ್ರದೇಶದ ಮಗಳು ಮತ್ತು ಸೆಲೆಬ್ರಿಟಿ ಕೂಡ ಹೌದು. ಅವರಿಗೆ ಭದ್ರತೆ ನೀಡುವುದು ನಮ್ಮ ಕರ್ತವ್ಯ. ಆ ಬಗ್ಗೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪೊಲೀಸ್ ಮಹಾ ನಿರ್ದೇಶಕರಿಗೆ ತಿಳಿಸಿದ್ದೇನೆ" ಎಂದು ಹೇಳಿದ್ದಾರೆ.
ಸೆಪ್ಟಂಬರ್ 9ರಂದು ಕಂಗನಾ ಮುಂಬೈಗೆ ಪ್ರಯಾಣ ಬೆಳೆಸಲಿದ್ದಾರೆ. ಅಗತ್ಯವಿದ್ದಲ್ಲಿ ಭದ್ರತೆಯನ್ನು ಮುಂಬೈವರೆಗೂ ವಿಸ್ತರಿಸುವುದಾಗಿ ಸಿಎಂ ತಿಳಿದ್ದಾರೆ.
ನಾನು ಬಂದೇ ಬರ್ತೀನಿ, ತಾಕತ್ ಇದ್ದರೆ ತಡೆಯಿರಿ: ನಟಿ ಕಂಗನಾ ಸವಾಲ್
ಕಂಗನಾ ಸಹೋದರಿ ರಂಗೋಲಿ, ಶನಿವಾರ ಕರೆ ಮಾಡಿ ಭದ್ರತೆ ನೀಡಬೇಕೆಂದು ಕೇಳಿಕೊಂಡಿದ್ದಾರೆ. ಜೊತೆ ಅವರ ತಂದೆ ಕೂಡ ಮಗಳಿಗೆ ಭದ್ರತೆ ನೀಡಬೇಕೆಂದು ಕೇಳಿ ಪೊಲೀಸರಿಗೆ ಪತ್ರ ಬರೆದಿದ್ದಾರೆ ಎಂದು ಸಿಎಂ ಹೇಳಿದ್ದಾರೆ.
ಕಂಗನಾ ಹೇಳಿಕೆಗಳ ಬಗ್ಗೆ ಮತ್ತು ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಕಂಗನಾ ನಡೆಯ ಬಗ್ಗೆ ಮಾತನಾಡಲು ಸಿಎಂ ಜೈರಾಮ್ ಠಾಕೂರ್ ಮಾತನಾಡಲು ನಿರಾಕಸಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿರುವುದಾಗಿ ಹೇಳಿದ್ದಾರೆ.
ನಟಿ ಕಂಗನಾ ರಣಾವತ್ ಮುಂಬೈ ಪೊಲೀಸರ ಭದ್ರತೆ ನಿರಾಕರಿಸಿ, 'ಮುಂಬೈ ಪೊಲೀಸರು, ಮಾಫಿಯಾ ಗೂಂಡಾಗಳಿಗಿಂತಲೂ ಭಯ ಹುಟ್ಟಿಸುತ್ತಾರೆ' ಎಂದು ಹೇಳಿದ್ದರು. ಇದರಿಂದ ರೊಚ್ಚಿಗೆದ್ದ ಶಿವಸೇನಾ ಮುಖ್ಯಸ್ಥ ಸಂಜಯ್ ರಾವತ್ 'ಮುಂಬೈ ಬರಬೇಡಿ' ಎಂದು ಪ್ರತಿಕ್ರಿಯೆ ನೀಡಿದ್ದರು.
Recommended Video
ಸಂಜಯ್ ರಾವತ್ ಗೆ ತಿರುಗೇಟು ನೀಡಿದ್ದ ಕಂಗನಾ 'ಮುಂಬೈ ಪಾಕ್ ಆಕ್ರಮಿತ ಪಾಕಿಸ್ತಾನದಂತೆ ಕಾಣುತ್ತಿದೆ' ಎಂದು ಹೇಳಿ ವಿವಾದದ ಕಿಡಿ ಹೊತ್ತಿಸಿದ್ದರು. ಕಂಗನಾ ಹೇಳಿಕೆಗೆ ಅನೇಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದರೂ ಕಂಗನಾ 'ಮುಂಬೈಗೆ ಬಂದೆ ಬರ್ತೀನಿ, ಧೈರ್ಯ ಇದ್ದರೆ ತಡೀರಿ' ಎಂದು ಸವಾಲ್ ಹಾಕಿದ್ದಾರೆ. ಸೆಪ್ಟಂಬರ್ 9ರಂದು ಕಂಗನಾ ಮುಂಬೈಗೆ ಆಗಮಿಸುತ್ತಿದ್ದಾರೆ.