Don't Miss!
- Technology Google: ಗೂಗಲ್ ಪಿಕ್ಸೆಲ್ 8a ಬೆಲೆ ಮಾಹಿತಿ ಲೀಕ್! ಈ ಫೋನ್ ಫೀಚರ್ಸ್ ಏನು?
- Automobiles ಯುವಕರಿಗೆ ಸಿಹಿಸುದ್ದಿ: ಕೈಗೆಟುಕುವ ಬೆಲೆ, ಮಾಸ್ ಲುಕ್ನಲ್ಲಿ ಬರುತ್ತಿದೆ ಹೊಸ ಬಜಾಜ್ ಪಲ್ಸರ್ 400 ಬೈಕ್
- Finance ಇನ್ಮುಂದೆ ನಿಮ್ಮ ಜಮೀನಿನಲ್ಲಿ ನೀವು ಮನೆ ಕಟ್ಟೋದಕ್ಕೂ ಸರ್ಕಾರದ ಅನುಮತಿ ಅಗತ್ಯ, ಏನಿದು ಹೋಸ ನಿಯಮ?
- News ಬಿಜೆಪಿ ಭದ್ರಕೋಟೆಯಲ್ಲಿ ಶೋಭಾ ಕರಂದ್ಲಾಜೆಗೆ ಕಠಿಣ ಸವಾಲು!
- Lifestyle ಉಪ್ಪು ನೀರಿನಿಂದ ಮುಖ ತೊಳೆದರೆ ಆಗುವ ಲಾಭವೇನು.? ಇದರ ಅನಾನುಕೂಲವೇನು ಗೊತ್ತಾ?
- Sports IPL 2024: ಆರ್ಸಿಬಿ ಕಪ್ ಗೆಲ್ಲದಿರಲು ಅತಿಯಾದ ಪಾರ್ಟಿ ಕಾರಣವೇ?; ರೈನಾ ಬಿಚ್ಚಿಟ್ಟ ಸತ್ಯ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸದಾ ಬಡವರಿಗಾಗಿ ಮಿಡಿಯುತ್ತದೆ ಅಕ್ಷಯ್ ಕುಮಾರ್ ಹೃದಯ
ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ತುಂಬಾ ವಿಶಾಲ ಹೃದಯವನ್ನು ಹೊಂದಿದ್ದಾರೆ ಅನ್ನೋದಕ್ಕೆ ಈ ಘಟನೆಯೇ ಸಾಕ್ಷಿ. ಈ ಮೊದಲು ಬರ ಪೀಡಿತ ಪ್ರದೇಶದ ರೈತರಿಗೆ ಸಹಾಯ ಮಾಡಲು ಧಾವಿಸಿದ್ದ ನಟ ಅಕ್ಷಯ್ ಕುಮಾರ್ ಮತ್ತೆ ರೈತರಿಗೆ ಸಹಾಯ ಹಸ್ತ ಚಾಚಿದ್ದಾರೆ.
ಕಳೆದ ವರ್ಷ ಬರದಿಂದ ತತ್ತರಿಸಿ ಹೋಗಿದ್ದ ರೈತರಿಗೆ ಒಟ್ಟು 90 ಲಕ್ಷ ರೂಪಾಯಿಗಳ ನೆರವು ನೀಡಿ ಸಹಾಯ ಮಾಡಿದ್ದ ನಟ ಅಕ್ಷಯ್ ಕುಮಾರ್ ಅವರು ಈ ಬಾರಿ ರೈತರಿಗೋಸ್ಕರ ತಾವು ಪಡೆಯುತ್ತಿರುವ ಸಂಭಾವನೆಯಲ್ಲಿಯೇ ಅರ್ಧದಷ್ಟು ಅಂದರೆ 5 ಕೋಟಿ ರೂಪಾಯಿ ಕಡಿಮೆ ಮಾಡಿಕೊಂಡಿದ್ದಾರೆ.[ಚೆನ್ನೈ ಮಹಾನಗರಿಗೆ ಅಕ್ಷಯ್ ಕುಮಾರ್ ಮಹಾ ದೇಣಿಗೆ]
ಬಾಲಿವುಡ್ ನಟ ಅಕ್ಕಿ ಅಲಿಯಾಸ್ ಅಕ್ಷಯ್ ಕುಮಾರ್ ಅವರು 'ಡ್ರಿಂಕ್ಸ್ ಮಿಕ್ಸ್ ಮೇಕರ್'ನ ರಾಯಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಂಪೆನಿ ಜೊತೆ ಒಪ್ಪಂದ ಮಾಡಿಕೊಂಡ ಪ್ರಕಾರ ಈ ವರ್ಷ ಅವರ ಸಂಭಾವನೆಯಲ್ಲಿ ಏರಿಕೆಯಾಗಬೇಕಿತ್ತು.
ರೈತರು ಬರದಿಂದ ತತ್ತರಿಸಿ ಹೋಗಿದ್ದಾರೆ ಹಾಗಾಗಿ ಸಾಕಷ್ಟು ಪ್ರಮಾಣದ ಹಣ್ಣು ದೊರೆಯುತ್ತಿಲ್ಲ, ಆದ್ದರಿಂದ ರೈತ ಹಾಗೂ ಕಂಪೆನಿ ಸಂಕಷ್ಟ ಪರಿಸ್ಥಿತಿಯಲ್ಲಿ ಇರುವುದಾಗಿ ಖುದ್ದು ಕಂಪೆನಿಯವರು ಹೇಳಿಕೊಂಡಿದ್ದಾರೆ.[ಚಿತ್ರಗಳು: ಉದ್ಯಮಿ ಜೊತೆ ಸಪ್ತಪದಿ ತುಳಿದ ನಟಿ ಅಸಿನ್]
ಈ ಕಾರಣಕ್ಕಾಗಿ 'ಖಿಲಾಡಿ' ನಟ ಅಕ್ಷಯ್ ಕುಮಾರ್ ಅವರು ಒಪ್ಪಂದದ ಪ್ರಕಾರ ಈ ಬಾರಿ 10 ಕೋಟಿ ಸಂಭಾವನೆ ಪಡೆಯಬೇಕಾಗಿದ್ದವರು ರೈತರಿಗೋಸ್ಕರ ಅರ್ಧ ಸಂಭಾವನೆಯನ್ನು ಇಳಿಸಿಕೊಂಡು ಬರೇ 5 ಕೋಟಿ ರೂಪಾಯಿ ಪಡೆದಿದ್ದಾರೆ.
ಒಟ್ನಲ್ಲಿ ತೆರೆಯ ಮೇಲೆ ವಿಭಿನ್ನ ರೀತಿಯ ಸಾಮಾಜಿಕ ಕಾರ್ಯಗಳ ಪಾತ್ರಗಳನ್ನು ಮಾಡುವ ಅಕ್ಷಯ್ ಕುಮಾರ್ ಅವರು ನಿಜ ಜೀವನದಲ್ಲಿ ಕೂಡ ಅದನ್ನೇ ಪಾಲಿಸುತ್ತಿರುವುದು ಪ್ರಶಂಸನೀಯ ಸಂಗತಿಯಾಗಿದೆ.