Don't Miss!
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅತ್ಯಾಚಾರಿಗಳ ಮರ್ಮಾಂಗವನ್ನು ಕತ್ತರಿಸಿ: ಗುಟುರು ಹಾಕಿದ ರಾಖಿ ಸಾವಂತ್
''ಅತ್ಯಾಚಾರ ಮಾಡುವವರನ್ನು ಗಲ್ಲಿಗೇರಿಸಿ.. ಇಲ್ಲಾಂದ್ರೆ, ಗಲ್ಫ್ ದೇಶಗಳಲ್ಲಿ ಶಿಕ್ಷೆ ಕೊಡುವ ಹಾಗೆ ನಪುಂಸಕನನ್ನಾಗಿ ಮಾಡಿ. ರೇಪಿಸ್ಟ್ ಗಳ ಮರ್ಮಾಂಗ ಕತ್ತರಿಸಿ'' - ಹೀಗಂತ ಹೇಳುತ್ತಾ ರಾಖಿ ಸಾವಂತ್ ಗುಟುರು ಹಾಕಿದ್ದಾರೆ.
ಇಷ್ಟು ದಿನ ಸೋಷಿಯಲ್ ಮೀಡಿಯಾದಲ್ಲಿ ಏನಾದರೂ ಒಂದು ಕಿರಿಕ್ ಮಾಡುತ್ತಿದ್ದ ರಾಖಿ ಸಾವಂತ್ ಇದೀಗ ಗಂಭೀರ ವಿಷಯದ ಕುರಿತು ಮಾತನಾಡಿದ್ದಾರೆ. ಹೈದರಾಬಾದ್ ನಲ್ಲಿ ನಡೆದ ಪಶು ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಕುರಿತು ರಾಖಿ ಸಾವಂತ್ ಆಕ್ರೋಶಗೊಂಡಿದ್ದಾರೆ.
ಇನ್ಸ್ಟಾಗ್ರಾಮ್ ನಲ್ಲಿ ವಿಡಿಯೋ ಪೋಸ್ಟ್ ಮಾಡಿರುವ ರಾಖಿ ಸಾವಂತ್, ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಅಂತ ಒತ್ತಾಯಿಸಿದ್ದಾರೆ. ಮುಂದೆ ಓದಿರಿ...
ನಿಮ್ಮ ಮಾನವನ್ನು ನೀವೇ ಕಾಪಾಡಿಕೊಳ್ಳಿ..
''ನಾನು ತುಂಬಾ ದುಃಖದಲ್ಲಿದ್ದೇನೆ. ಹೈದರಾಬಾದ್ ನ ಪಶು ವೈದ್ಯೆ ಮೇಲಿನ ಅತ್ಯಾಚಾರ ಪ್ರಕರಣ ತುಂಬಾ ಬೇಸರ ತಂದಿದೆ. ಮಹಿಳೆಯರು ರಾತ್ರಿ ಹೊತ್ತು ಹೊರಗೆ ಹೋಗುವಾಗ ವಾಹನದ ಪೆಟ್ರೋಲ್, ಟೈರ್ ನ ಗಾಳಿ.. ಎಲ್ಲವನ್ನೂ ಚೆಕ್ ಮಾಡಿಕೊಳ್ಳಬೇಕು. ನಿಮ್ಮ ಮಾನವನ್ನು ನೀವೇ ಉಳಿಸಿಕೊಳ್ಳಬೇಕು. ನಿಮ್ಮ ಮಾನವನ್ನು ಕಾಪಾಡಲು ಬೇರೆ ಯಾರೂ ಬರುವುದಿಲ್ಲ'' ಎಂದಿದ್ದಾರೆ ರಾಖಿ ಸಾವಂತ್
ಹೈದರಾಬಾದ್ ರೇಪ್ ಕೇಸ್: ಹಳೇಕಾಲದ ಯೋಚನೆಗಳೇ ಸರಿ ಎಂದ ಶ್ರುತಿ ನಾಯ್ಡು
ಭಯ ಇರಬೇಕು.!
''ಅತ್ಯಾಚಾರ ಮಾಡುವವರನ್ನು ಗಲ್ಲಿಗೇರಿಸಿ. ಇಲ್ಲಾಂದರೆ, ತಾಲಿಬಾನ್ ಅಥವಾ ಗಲ್ಫ್ ದೇಶಗಳಲ್ಲಿ ಶಿಕ್ಷೆ ನೀಡುವ ಹಾಗೆ ನಪುಂಸಕನನ್ನಾಗಿ ಮಾಡಿ. ರೇಪಿಸ್ಟ್ ಗಳ ಮರ್ಮಾಂಗ ಕತ್ತರಿಸಿ. ಅತ್ಯಾಚಾರ ಮಾಡಿದರೆ ಏನಾಗುತ್ತೆ ಅನ್ನೋ ಭಯ ಇರಬೇಕು'' - ರಾಖಿ ಸಾವಂತ್
ಪಶು ವೈದ್ಯೆ ಅತ್ಯಾಚಾರ, ಹತ್ಯೆ ಪ್ರಕರಣ: ಮರಣದಂಡನೆ ವಿಧಿಸಿ ಎಂದ ಮಹೇಶ್ ಬಾಬು
ಕಠಿಣ ಶಿಕ್ಷೆ ಆಗಲೇಬೇಕು
''ಕಾನೂನು ಬದಲಾಗುವವರೆಗೂ ಅತ್ಯಾಚಾರ ನಿಲ್ಲುವುದಿಲ್ಲ. ಹೈದರಾಬಾದ್ ಹುಡುಗಿಗಾಗಿ ನಾನು ನ್ಯಾಯ ಕೇಳುತ್ತಿದ್ದೇನೆ. ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ಆಗಲೇಬೇಕು ಎಂದು ಮೋದಿಜಿ ಬಳಿ ಮನವಿ ಮಾಡುತ್ತೇನೆ'' ಎಂದು ವಿಡಿಯೋದಲ್ಲಿ ರಾಖಿ ಸಾವಂತ್ ಹೇಳಿದ್ದಾರೆ.
ಅತ್ಯಾಚಾರಿಗಳನ್ನು ಸಾರ್ವಜನಿಕವಾಗಿ ಥಳಿಸಿ, ನೇಣಿಗೇರಿಸಿ: ರಾಜ್ಯಸಭೆಯಲ್ಲಿ ಜಯಾ ಬಚ್ಚನ್ ಗುಡುಗು
ಎಲ್ಲರದ್ದೂ ಒಂದೇ ಮಾತು.!
ಹೈದರಾಬಾದ್ ನ ಪಶು ವೈದ್ಯೆ ಮೇಲಿನ ಅತ್ಯಾಚಾರ ಪ್ರಕರಣದ ಕುರಿತು ಬಾಲಿವುಡ್ ನಟ ಸಲ್ಮಾನ್ ಖಾನ್, ಸಂಸದೆ ಜಯಾ ಬಚ್ಚನ್, ನಟ ಚಿರಂಜೀವಿ, ನಟ ಮಹೇಶ್ ಬಾಬು, ನಟ ಸುದೀಪ್, ನಟಿ ಅನುಷ್ಕಾ ಶೆಟ್ಟಿ, ನಟ ಜಗ್ಗೇಶ್ ಸೇರಿದಂತೆ ಹಲವರು ದನಿಯೆತ್ತಿದ್ದಾರೆ. ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸಿ ಎಂಬ ಕೂಗು ದೇಶದ ಮೂಲೆ ಮೂಲೆಯಲ್ಲೂ ಕೇಳಿಬರುತ್ತಿದೆ.