Don't Miss!
- News ಮೋದಿ, ಅಮಿತ್ ಶಾ ಯಾವ ಮುಖ ಇಟ್ಟುಕೊಂಡು ಕರ್ನಾಟಕಕ್ಕೆ ಬರುತ್ತಾರೆ: ಸಿದ್ದರಾಮಯ್ಯ ಗರಂ
- Lifestyle ಚಪಾತಿ, ಅನ್ನಕ್ಕೆ ಟೊಮೆಟೋ ಬೇಳೆ ಸಾರು ಸಖತ್ ರುಚಿ..! ಮಾಡೋದು ಸುಲಭ..!
- Automobiles ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Sports ಟಿ20 ವಿಶ್ವಕಪ್-2024: "ಬಾಗಿಲು ಮುಚ್ಚಿದ್ದೇನೆ" ಎಂದಿದ್ದೇಕೆ ಸ್ಪಿನ್ ಮಾಂತ್ರಿಕ ನರೈನ್
- Technology Google: ಗೂಗಲ್ ಪಿಕ್ಸೆಲ್ 8a ಬೆಲೆ ಮಾಹಿತಿ ಲೀಕ್! ಈ ಫೋನ್ ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮರಳಿ ಮಣ್ಣಿಗೆ ಇರ್ಫಾನ್ ಖಾನ್: ಅಂತಿಮ ವಿಧಿವಿಧಾನ ನಡೆಸಿದ ಪುತ್ರರು
ಬುಧವಾರ ಬೆಳಿಗ್ಗೆ ಇಹಲೋಕ ತ್ಯಜಿಸಿದ ಇರ್ಫಾನ್ ಖಾನ್ ಅವರ ಅಂತ್ಯಕ್ರಿಯೆಯನ್ನು ಮಧ್ಯಾಹ್ನ ನೆರವೇರಿಸಲಾಯಿತು. ಕೊರೊನಾ ವೈರಸ್ ಲಾಕ್ಡೌನ್ ಕಾರಣದಿಂದ ಅಭಿಮಾನಿಗಳು, ಚಿತ್ರರಂಗದ ಗಣ್ಯರು, ಅಂತಿಮ ದರ್ಶನ ಪಡೆಯಲು, ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಅವಕಾಶ ಇರಲಿಲ್ಲ. ಹೀಗಾಗಿ ಕುಟುಂಬದ ಕೆಲವೇ ಆಪ್ತರು, ಹಿತೈಷಿಗಳ ಸಮ್ಮುಖದಲ್ಲಿ ಅಂತಿಮ ವಿಧಿ ವಿಧಾನ ನಡೆಸಲಾಯಿತು.
Recommended Video
ಮುಂಬೈನ ವೆರ್ಸೋವಾ ರುದ್ರಭೂಮಿಯಲ್ಲಿ ಮಧ್ಯಾಹ್ನ 3 ಗಂಟೆಗೆ ಇರ್ಫಾನ್ ಅವರ ಮಕ್ಕಳಾದ ಬಾಬಿಲ್ ಮತ್ತು ಅಯಾನ್ ಅಂತಿಮ ಕ್ರಿಯಾ ವಿಧಿಗಳನ್ನು ಪೂರೈಸಿದರು. ಅವರ ಕುಟುಂಬದ ಕೇವಲ ಐದು ಮಂದಿ ಈ ವೇಳೆ ಹಾಜರಿದ್ದರು.
ಆರೋಗ್ಯ ಸರಿ ಇದ್ದಿದ್ದರೆ ಕನ್ನಡದಲ್ಲಿಯೂ ನಟಿಸುತ್ತಿದ್ದರು ಇರ್ಫಾನ್ ಖಾನ್
ಅದಕ್ಕೂ ಮುನ್ನ ಕುಟುಂಬದ ಹತ್ತಿರದ ಸಂಬಂಧಿಕರು ಮತ್ತು ಸ್ನೇಹಿತರು ಅಂತಿಮ ದರ್ಶನ ಪಡೆದರು. ಇರ್ಫಾನ್ ಖಾನ್ ಅವರ ಪಾರ್ಥಿವ ಶರೀರದ ಮೆರವಣಿಗೆ ಮತ್ತು ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ರುದ್ರಭೂಮಿಗೆ ತೆರಳಲು ಅವಕಾಶ ನೀಡಲಿಲ್ಲ. ಆದರೆ ನಿರ್ದೇಶಕ ವಿಶಾಲ್ ಭಾರದ್ವಾಜ್ ರುದ್ರಭೂಮಿಯಲ್ಲಿ ಹಾಜರಿದ್ದು ಅಂತಿಮ ನಮನ ಸಲ್ಲಿಸಿದರು.
ಚಿತ್ರರಂಗಕ್ಕೆ ಆಘಾತ: ಸಾವಿನಲ್ಲಿ ಅಮ್ಮನನ್ನು ಹಿಂಬಾಲಿಸಿದ ಖ್ಯಾತ ನಟ ಇರ್ಫಾನ್ ಖಾನ್
ಖಬರಿಸ್ತಾನ ಪ್ರವೇಶದ್ವಾರದಲ್ಲಿ ಭಾರಿ ಭದ್ರತೆ ನಿಯೋಜಿಸಲಾಗಿತ್ತು. ಹೆಚ್ಚಿನ ಜನಜಂಗುಳಿ ಸೇರುವ ಸಾಧ್ಯತೆ ಇದ್ದಿದ್ದರಿಂದ ಇತರರಿಗೆ ಒಳಗೆ ಪ್ರವೇಶ ನೀಡಲಿಲ್ಲ.