Don't Miss!
- News ಬಂಡೀಪುರ: ಹುಲಿ ದಾಳಿಯಿಂದ ಮರಿಯಾನೆ ಸಾವು, ನಡುರಸ್ತೆಯಲ್ಲೇ ಮುಗಿಲು ಮುಟ್ಟಿದ ತಾಯಿಯ ಆಕ್ರಂದನ, ವಿಡಿಯೋ ವೈರಲ್
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Automobiles ಭಾರತದ ರಸ್ತೆಯಲ್ಲಿ ಘರ್ಜಿಸುತ್ತಿರುವ ಪವರ್ಫುಲ್ ಎಪ್ರಿಲಿಯಾ ಬೈಕ್ಗಾಗಿ ಅಕ್ಸೆಸರೀಸ್ ಬಿಡುಗಡೆ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೋವಿಡ್ ಪೀಡಿತರ ಸಹಾಯಕ್ಕೆ ಸಾಮಾಜಿಕ ಜಾಲತಾಣ ಖಾತೆ ಬಿಟ್ಟುಕೊಟ್ಟ ಜಾನ್ ಅಬ್ರಹಾಂ!
ಕೋರೊನಾ ಪೀಡಿತರ ಸಹಾಯಕ್ಕೆ ಹಲವು ನಟರು ಆಮ್ಲಜನಕ ಸಿಲಿಂಡರ್ಗಳು, ಬೆಡ್ಗಳನ್ನು ನೀಡುತ್ತಿದ್ದರೆ ನಟ ಜಾನ್ ಅಬ್ರಹಾಂ ಭಿನ್ನ ದೇಣಿಗೆ ನೀಡಿದ್ದಾರೆ.
ಕೊರೊನಾ ರೋಗಿಗಳ ಸಂಕಷ್ಟಕ್ಕೆ ಭಿನ್ನವಾಗಿ ಸಹಾಯ ಮಾಡಲು ಮುಂದಾಗಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣ ಖಾತೆಗಳನ್ನು ಅವರು ತಾತ್ಕಾಲಿಕವಾಗಿ ದೇಣಿಗೆ ನೀಡಿದ್ದಾರೆ.
ಕೊರೊನಾ ರೋಗಿಗಳಿಗೆ ಅವರ ಕುಟುಂಬದವರಿಗೆ ಸಹಾಯವಾಗಲೆಂದು ತಮ್ಮ ಸಾಮಾಜಿಕ ಜಾಲತಾಣ ಖಾತೆಯನ್ನು ಎನ್ಜಿಓಗಳಿಗೆ ಬಿಟ್ಟುಕೊಟ್ಟಿದ್ದಾರೆ. ಈ ಬಗ್ಗೆ ಪೋಸ್ಟ್ ಬರೆದಿರುವ ಜಾನ್, 'ಇದು ಬಹಳ ಸಂಕಷ್ಟದ ಸಮಯ. ನಾವೆಲ್ಲರೂ ಕೊರೊನಾದ ವಿರುದ್ಧ ಶಕ್ತಿಮೀರಿ ಹೋರಾಡಬೇಕಿದೆ'' ಎಂದಿದ್ದಾರೆ.
''ಕೊರೊನಾ ರೋಗಿಗಳಿಗೆ ಅವರ ಕುಟುಂಬದವರಿಗೆ ಶೀಘ್ರವಾಗಿ ನೆರವು ಒದಗಿಸಲು ಮಾಹಿತಿ ತಲುಪಿಸುವ ಕಾರಣದಿಂದ ನನ್ನ ಸಾಮಾಜಿಕ ಜಾಲತಾಣವನ್ನು ಕೆಲವು ಎನ್ಜಿಓಗಳಿಗೆ ಬಿಟ್ಟುಕೊಡುತ್ತಿದ್ದೇನೆ. ನನ್ನ ಸಾಮಾಜಿಕ ಜಾಲತಾಣವು ಕೊರೊನಾ ರೋಗಿಗಳ ಹಾಗೂ ಅವರ ಕುಟುಂಬಕ್ಕೆ ಸಹಾಯ ಮಾಡುವ ಪೋಸ್ಟ್ಗಳಿಗೆ ಸೀಮಿತವಾಗಿರಲಿದೆ'' ಎಂದಿದ್ದಾರೆ ಜಾನ್ ಅಬ್ರಹಾಂ.
ಕೊರೊನಾ ರೋಗಿಗಳ ಸಹಾಯಕ್ಕಾಗಿ ಸಾಮಾಜಿಕ ಜಾಲತಾಣಕ್ಕೆ ಸಂದೇಶ ಕಳುಹಿಸಬಹುದು ಎಂದು ಸಹ ಜಾನ್ ಹೇಳಿದ್ದಾರೆ. ಇದು ಕೇವಲ ಆರಂಭವಷ್ಟೆ ಎಂದಿರುವ ಜಾನ್ ಇನ್ನೂ ಹಲವು ರೀತಿಯಲ್ಲಿ ತಾನು ಹಾಗೂ ತನ್ನ ಎನ್ಜಿಓ ಕೊರೊನಾ ಸಂಕಷ್ಟಕ್ಕೆ ನೆರವಾಗಲಿದ್ದೇವೆ ಎಂದಿದ್ದಾರೆ.
Recommended Video
ಬಾಲಿವುಡ್ನ ಹಲವು ನಟರು ಕೊರೊನಾ ಸಂಕಷ್ಟದ ಸಮಯದಲ್ಲಿ ನೆರವಿಗೆ ಧಾವಿಸಿದ್ದಾರೆ, ಅಕ್ಷಯ್ ಕುಮಾರ್, ಸಲ್ಮಾನ್ ಖಾನ್, ಸುನಿಲ್ ಶೆಟ್ಟಿ, ಸೋನು ಸೂದ್ ಇನ್ನೂ ಕೆಲವರು ಆಮ್ಲಜನಕ ಸಿಲಿಂಡರ್ ವ್ಯವಸ್ಥೆ, ಆಸ್ಪತ್ರೆ ಬೆಡ್ ವ್ಯವಸ್ಥೆ, ಹಣ ಸಹಾಯಗಳನ್ನು ಮಾಡಿದ್ದಾರೆ.