Don't Miss!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- News ಅರವಿಂದ್ ಕೇಜ್ರಿವಾಲ್ ಹತ್ಯೆ ಮಾಡಲು ಸಂಚು ನಡೆಯುತ್ತಿದೆ: ಎಎಪಿ ಗಂಭೀರ ಆರೋಪ
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಲ್ಮಾನ್ ಜೊತೆ ರಾಜಮೌಳಿ ತಂದೆ ಸಿನಿಮಾ; ಇಂಟ್ರೆಸ್ಟಿಂಗ್ ವಿಚಾರ ಬಿಚ್ಚಿಟ್ಟ ವಿಜಯೇಂದ್ರ ಪ್ರಸಾದ್
ಖ್ಯಾತ ಬರಹಗಾರ, ರಾಜಮೌಳಿ ತಂದೆ ಕೆ.ವಿ ವಿಜಯೇಂದ್ರ ಪ್ರಸಾದ್ ಕಥೆ ಬರೆಯುತ್ತಾರೆ ಅಂದರೆ ಆ ಸಿನಿಮಾದ ಮೇಲೆ ಎಲ್ಲಿಲ್ಲದ ನಿರೀಕ್ಷೆ, ಕುತೂಹಲ ಹುಟ್ಟಿಕೊಳ್ಳುತ್ತದೆ. ಇದೀಗ ಸಲ್ಮಾನ್ ಜೊತೆ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಮತ್ತೆ ಸಿನಿಮಾ ಮಾಡುವ ಪ್ಲಾನ್ ಮಾಡಿದ್ದಾರೆ ಎನ್ನುವ ಇಂಟ್ರೆಸ್ಟಿಂಗ್ ವಿಚಾರ ಬಹಿರಂಗವಾಗಿದೆ.
ಅಂದಹಾಗೆ ವಿಜಯೇಂದ್ರ ಪ್ರಸಾದ್ ಮತ್ತು ಸಲ್ಮಾನ್ ಕಾಂಬಿನೇಷನ್ನಲ್ಲಿ ಬಂದ 'ಭಜರಂಗಿ ಭೈಜಾನ್' ಸಿನಿಮಾ ನೆನಪಿದೆ ತಾನೆ. ಈ ಸೂಪರ್ ಹಿಟ್ ಚಿತ್ರವನ್ನು ಮರೆಯಲು ಸಾಧ್ಯವಿಲ್ಲ. ಭಾರತೀಯ ಚಿತ್ರರಂಗದ ಅತ್ಯುತ್ತಮ ಚಿತ್ರಗಳಲ್ಲಿ ಒಂದು ಎಂದು ಪರಿಗಣಿಸಲಾಗಿದೆ. 2015ರಲ್ಲಿ ಬಂದ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು. ಬಾಕ್ಸ್ ಆಫೀಸ್ನಲ್ಲೂ ದಾಖಲೆಯ ಕಮಾಯಿ ಮಾಡಿತ್ತು.
ಈ ಸಿನಿಮಾ ಬಿಡುಗಡೆಯಾಗಿ 6 ವರ್ಷಗಳು ಕಳೆದಿವೆ. ಇದೀಗ ಸೂಪರ್ ಹಿಟ್ ಸಿನಿಮಾದ ಸೀಕ್ವೆಲ್ ಮಾಡಲು ಕೆ.ವಿ ವಿಜಯೇಂದ್ರ ಪ್ರಸಾದ್ ನಿರ್ಧರಿಸಿದ್ದಾರೆ ಎನ್ನುವ ಕುತೂಹಲಕಾರಿ ಸಂಗತಿ ಬಹಿರಂಗವಾಗಿದೆ. ಈ ಬಗ್ಗೆ ಸ್ವತಃ ವಿಜಯೇಂದ್ರ ಪ್ರಸಾದ್ ಅವರೇ ಬಹಿರಂಗಪಡಿಸಿದ್ದಾರೆ. ಪಿಂಕ್ವಿಲ್ಲಾ ವೆಬ್ ಪೋರ್ಟಲ್ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ವಿಜಯೇಂದ್ರ ಪ್ರಸಾದ್ ಭಜರಂಗಿ ಭೈಜಾನ್ ಸೀಕ್ವೆಲ್ ಬಗ್ಗೆ ಬಹಿರಂಗ ಪಡಿಸಿದ್ದಾರೆ.
"ನಾನು 'ಭಜರಂಗಿ ಭೈಜಾನ್-2' ಭೇದಿಸಲು ಪ್ರಯತ್ನಿಸುತ್ತಿದ್ದೇನೆ. ಸ್ವಲ್ಪ ಸಮಯದ ಹಿಂದೆ ನಾನು ಈ ವಿಚಾರವನ್ನು ಸಲ್ಮಾನ್ ಖಾನ್ ಗೆ ಹೇಳಿದ್ದೆ. ಈ ವಿಚಾರ ಕೇಳಿ ಉತ್ಸುಕರಾಗಿದ್ದಾರೆ. ಆದರೆ ಆದನ್ನು ಮುಂದೆ ಸಾಗಿಸಲು ಸರಿಯಾದ ವಾಹನ ಹುಡುಕುತ್ತಿದ್ದೇನೆ. ಸದ್ಯದಲ್ಲೇ ಕಾರ್ಯರೂಪಕ್ಕೆ ಬರಲಿದೆ ಎಂದು ನಾನು ಭಾವಿಸುತ್ತೇನೆ" ಎಂದು ಹೇಳಿದ್ದಾರೆ.
"ನಾನು ಆಕಸ್ಮಿಕವಾಗಿ ಸಲ್ಮಾನ್ ಖಾನ್ ಅವರನ್ನು ಭೇಟಿಯಾದಾಗ ಭಜರಂಗಿ ಭೈಜಾನ್ ಸೀಕ್ವೆಲ್ ಬಗ್ಗೆ ಹೇಳಿದೆ. ಒಳ್ಳೆಯ ಐಡಿಯಾ ಎಂದು ಹೇಳಿದರು. ನನ್ನ ಪ್ಲಾನ್ ಅನ್ನು ಬ್ಲಾಕ್ ಬಸ್ಟರ ಖಾನ್ ಗೆ ವಿವರಿಸಿದೆ" ಎಂದು ಹೇಳಿದ್ದಾರೆ. ವಿಜಯೇಂದ್ರ ಪ್ರಸಾದ್ ರಚನೆಯಲ್ಲಿ ಸಲ್ಮಾನ್ ಖಾನ್ ಹೀರೋ ಆಗಿ ಮಿಂಚುತ್ತಾರೆ ಎನ್ನುವುದನ್ನೇ ಕೇಳಿದ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಇನ್ನೇನಾದ್ರು ಸಿನಿಮಾ ಬಿಡುಗಡೆಯಾದ್ರೆ ಹೇಗಿರಬಹುದು ಕ್ರೇಜ್ ಎಂದು ಊಹಿಸಿಕೊಳ್ಳಲು ಸಾಧ್ಯವಿಲ್ಲ.
Recommended Video
'ಭಜರಂಗಿ ಭೈಜಾನ್' ಮೊದಲ ಭಾಗದಲ್ಲಿ ಮೋಡಿ ಮಾಡಿದ್ದ ಸಲ್ಮಾನ್ ಖಾನ್, ಕರೀನಾ ಕಪೂರ್, ಹರ್ಷಾಲಿ ಮಲ್ಹೋತ್ರ, ನವಾಜುದ್ದೀನ್ ಸಿದ್ದಿಕಿ ಎರಡನೇ ಭಾಗದಲ್ಲೂ ಇರ್ತಾರಾ ಎಂದು ಕಾದುನೋಡಬೇಕು.