Don't Miss!
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Automobiles 20 ವರ್ಷದ ಬಳಿಕ ಲ್ಯಾಂಬೋರ್ಗಿನಿ ಲೋಗೋಗೆ ಹೊಸ ಟಚ್: ಈ ಕಂಪನಿಯ ಕಾರುಗಳು ಯಾಕೆ ಫೇಮಸ್?
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Sports RCB vs KKR: ಗೇಮ್ ಚೇಂಜರ್ ಆಗಬಹುದು ಈ ಪ್ಲೇಯರ್ಸ್; ಈ ಆಟಗಾರರ ಮೇಲೆ ಕಣ್ಣು
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಕಂಗನಾ ರಣೌತ್
ಮುಂಬೈ ಪೊಲೀಸ್ v/s ಕಂಗನಾ ರಣೌತ್ ಶೀಥಲ ಯುದ್ಧ ಶೀಘ್ರದಲ್ಲಿ ಮುಗಿಯುವ ಯಾವ ಲಕ್ಷಣವೂ ಕಾಣುತ್ತಿಲ್ಲ.
ಸಮಾಜದಲ್ಲಿ ಬಿರುಕು ಮೂಡಿಸುವ, ದ್ವೇಷ ಹುಟ್ಟಿಸುವ ಯತ್ನ ಆರೋಪದ ಮೇಲೆ ಕಂಗನಾ ರಣೌತ್ ಹಾಗೂ ಅವರ ಸಹೋದರಿ ರಂಗೋಲಿ ವಿರುದ್ಧ ಮುಂಬೈ ಪೊಲೀಸರು ಎಫ್ಐಆರ್ ದಾಖಲಿಸಿ ವಿಚಾರಣೆಗೆ ಹಾಜರಾಗುವಂತೆ ಈಗಾಗಲೇ ಮೂರು ಬಾರಿ ಸಮನ್ಸ್ ಜಾರಿ ಮಾಡಿದ್ದಾರೆ.
ಪೊಲೀಸರ ಸಮನ್ಸ್ಗೆ ಕೇರ್ ಮಾಡ್ತಿಲ್ಲ, ಶೂಟಿಂಗ್ಗೆ ಹಾಜರಾದ ಕಂಗನಾ
ಬಾಂದ್ರಾ ಮ್ಯಾಜಿಸ್ಟ್ರೇಟ್ ಕೋರ್ಟ್ ಸಹ ಕಂಗನಾ ಹಾಗೂ ಸಹೋದರಿ ರಂಗೋಲಿಯನ್ನು ವಿಚಾರಣೆಗೆ ಒಳಪಡಿಸುವಂತೆ ಮುಂಬೈ ಪೊಲೀಸರಿಗೆ ಆದೇಶ ಹೊರಡಿಸಿತ್ತು.
ಕಂಗನಾಗೆ ಮೂರನೇ ಬಾರಿ ಸಮನ್ಸ್ ನೀಡಿದ ಮುಂಬೈ ಪೊಲೀಸರು
ಆದರೆ ವಿಚಾರಣೆಗೆ ಈ ವರೆಗೆ ಹಾಜರಾಗದ ಕಂಗನಾ, ಮುಂಬೈ ಪೊಲೀಸರ ವಿರುದ್ಧ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಮುಂಬೈ ಪೊಲೀಸರು ದಾಖಲಿಸುರುವ ಎಫ್ಐಆರ್ ಅನ್ನು ರದ್ದು ಮಾಡಬೇಕು ಎಂದು ಕಂಗನಾ ಹಾಗೂ ರಂಗೋಲಿ ಬಾಂಬೆ ಹೈಕೋರ್ಟ್ಗೆ ಮನವಿ ಮಾಡಿದ್ದಾರೆ. ಜೊತೆಗೆ ಬಾಂದ್ರಾ ಮ್ಯಾಜಿಸ್ಟ್ರೇಟ್ ಕೋರ್ಟ್ನ ಆದೇಶವನ್ನೂ ಸಹ ರದ್ದು ಮಾಡಬೇಕು ಎಂದು ಕೋರ್ಟ್ಗೆ ಮನವಿ ಮಾಡಿದೆ.
ಪಟಾಕಿ ಕಿಡಿ: ಐಪಿಎಸ್ ಅಧಿಕಾರಿ ಡಿ. ರೂಪಾ ವಿರುದ್ಧ ಸಿಡಿದೆದ್ದ ನಟಿ ಕಂಗನಾ
Recommended Video
ಕಂಗನಾ ರಣೌತ್ ಹಾಗೂ ಅವರ ಸಹೋದರಿ ರಂಗೋಲಿ ಅವರು ಸಮಾಜದಲ್ಲಿ ದ್ವೇಷ ಬಿತ್ತುವ ಟ್ವೀಟ್ಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿ ಅಲಿ ಸೈಯ್ಯದ್ ಎಂಬುವರು ಮುಂಬೈ ಪೊಲೀಸರಿಗೆ ದೂರು ನೀಡಿದ್ದರು.