Don't Miss!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Lifestyle ಇದು ಮಾಮೂಲಿ ರೈಸ್ ಅಲ್ಲ..ತೆಂಗಿನಕಾಯಿ ರೈಸ್..! ಮಾಡೋದು ಸುಲಭ.!
- Sports T20 World Cup: ಆರಂಭಿಕ ಸ್ಥಾನಕ್ಕಾಗಿ ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್ ಪೈಪೋಟಿ
- News Tejasvi Surya V/s Sowmya Reddy: ಬೆಂಗಳೂರು ದಕ್ಷಿಣವೆಂಬ ಬ್ರಾಹ್ಮಣ ಸಾಮ್ರಾಜ್ಯದಲ್ಲಿ ಹೊಸ ದಾಖಲೆ ಬರೆಯುತ್ತಾರಾ ಸೌಮ್ಯ ರೆಡ್ಡಿ
- Automobiles 150KM ರೇಂಜ್, ಸುರಕ್ಷತೆಯ ಮೆಟಲ್ ಬಾಡಿಯ ಮಹಿಂದ್ರಾ ಎಲೆಕ್ಟ್ರಿಕ್ ಆಟೋ ಬಿಡುಗಡೆ: ಹೆಚ್ಚು ಲಾಭ
- Finance ದೀಪಿಕಾ ಪಡುಕೋಣೆಯೊಂದಿಗೆ ಅಂಬಾನಿ ಮಗಳು ಒಪ್ಪಂದ, ಇಲ್ಲಿದೆ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಂಗನಾ ರಣೌತ್ಗೆ ಮುಂಬೈ ಪೊಲೀಸರಿಂದ ಸಮನ್ಸ್: ಶುರುವಾಯ್ತು ಆತಂಕ
ನಟಿ ಕಂಗನಾ ರಣೌತ್ ಹಾಗೂ ಸಹೋದರಿ ರಂಗೋಲಿ ಗೆ ಮುಂಬೈ ಪೊಲೀಸರು ಮತ್ತೊಮ್ಮೆ ಸಮನ್ಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ತಮ್ಮ ಬಿಡು ಬೀಸು ಮಾತುಗಳಿಂದ ಮಹಾರಾಷ್ಟ್ರ ಸರ್ಕಾರವನ್ನು ಎದುರು ಹಾಕಿಕೊಂಡಿರುವ ಕಂಗನಾ ಗೆ ಮೇಲಿಂದ ಮೇಲೆ ಸಮಸ್ಯೆಗಳು ಎದುರಾಗುತ್ತಲೇ ಇವೆ. ಈ ಸಮಸ್ಯೆಗಳು ರಾಜಕೀಯ ಪ್ರೇರಿತವೇ ಅಥವಾ ಕಾನೂನುಬದ್ಧವೇ ಎಂಬುದರ ಬಗ್ಗೆ ಚರ್ಚೆ ಆಗಬೇಕಿದೆ.
ಪ್ರಸ್ತುತ ನಟಿ ಕಂಗನಾ ರಣೌತ್ ಹಾಗೂ ಅವರ ಸಹೋದರಿ ರಂಗೋಲಿಗೆ ಮುಂಬೈ ಪೊಲೀಸರು ಸಮನ್ಸ್ ಜಾರಿ ಮಾಡಿದ್ದು, ದ್ವೇಷ ಹರಡುವ ಟ್ವೀಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 10 ರ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಎಫ್ಐಆರ್ ದಾಖಲಿಸುವಂತೆ ನ್ಯಾಯಾಲಯ ಸೂಚನೆ
ವಕೀಲರೊಬ್ಬರು ಕಂಗನಾ ರಣೌತ್ ಹಾಗೂ ರಂಗೋಲಿ ಅವರ ಟ್ವೀಟ್ಗಳು ದ್ವೇಷಗಳನ್ನು ಹರಡುತ್ತಿರುವ ಬಗ್ಗೆ, ಉದ್ರೇಕಕಾರಿ ಟ್ವೀಟ್ಗಳನ್ನು ಮಾಡುತ್ತಿರುವ ಬಗ್ಗೆ ಮುಂಬೈನ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯವು, ಇಬ್ಬರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಪೊಲೀಸರಿಗೆ ಸೂಚಿಸಿತ್ತು.
ಅಕ್ಟೋಬರ್ನಲ್ಲಿಯೇ ಸಮನ್ಸ್ ಜಾರಿ ಮಾಡಲಾಗಿತ್ತು
ನ್ಯಾಯಾಲಯದ ಸೂಚನೆಯಂತೆ ಮುಂಬೈ ಪೊಲೀಸರು ಕಂಗನಾ ರಣೌತ್ ಹಾಗೂ ರಂಗೋಲಿ ವಿರುದ್ಧ ಎಫ್ಐಆರ್ ದಾಖಲಿಸಿ ಸಮನ್ಸ್ ಸಹ ಜಾರಿ ಮಾಡಿದ್ದರು. ಮೊದಲ ಸಮನ್ಸ್ಗೆ ಪ್ರತಿಕ್ರಿಯಿಸಿ ಕಾಲಾವಕಾಶ ಕೋರಿದ್ದ ಕಾರಣ ಈಗ ಮತ್ತೆ ಸಮನ್ಸ್ ಜಾರಿ ಮಾಡಲಾಗಿದೆ.
ಸಮಯ ಕೇಳಿದ್ದ ಕಂಗನಾ-ರಂಗೋಲಿ
ಈ ಮೊದಲೂ ಸಹ ಮುಂಬೈ ಪೊಲೀಸರು ಕಂಗನಾ ಹಾಗೂ ರಂಗೋಲಿಗೆ ಸಮನ್ಸ್ ಜಾರಿ ಮಾಡಿದ್ದರು. ಅಕ್ಟೋಬರ್ 25-26ರ ಒಳಗೆ ವಿಚಾರಣೆಗೆ ಬರುವಂತೆ ಸೂಚಿಸಿದ್ದರು. ಆದರೆ ಇಬ್ಬರೂ ಸಹೋದರಿಯರು ತಮಗೆ ಇನ್ನಷ್ಟು ಸಮಯ ನೀಡುವಂತೆ ಮನವಿ ಮಾಡಿದ್ದರು, ಅಂತೆಯೇ ಈಗ ನವೆಂಬರ್ 10 ರ ವರೆಗೆ ಸಮಯ ನೀಡಲಾಗಿದೆ.
Recommended Video
ತುಮಕೂರಿನಲ್ಲಿ ಸಹ ಪ್ರಕರಣ ದಾಖಲು
ಕಂಗನಾ ರಣೌತ್ ಅವರು ರೈತರನ್ನು ಭಯೋತ್ಪಾದಕರು ಎಂದು ಕರೆದಿದ್ದಾರೆಂದು ತುಮಕೂರಿನಲ್ಲಿ ಸಹ ನ್ಯಾಯಾಲಯಕ್ಕೆ ವಕೀಲರೊಬ್ಬರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅಂತೆಯೇ ನ್ಯಾಯಾಲಯದ ಸೂಚನೆಯಂತೆ ತುಮಕೂರಿನಲ್ಲಿ ಸಹ ಕಂಗನಾ ವಿರುದ್ಧ ಪ್ರಕರಣ ದಾಖಲಾಗಿದೆ.