Don't Miss!
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- News Kotak Mahindra Bank: ಕೋಟಕ್ ಮಹಿಂದ್ರಾ ಬ್ಯಾಂಕ್ ಮೇಲೆ ಆರ್ಬಿಐ ನಿರ್ಬಂಧ: ಗ್ರಾಹಕರ ಮೇಲೆ ಪರಿಣಾಮಗಳೇನು?
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅರ್ನಬ್ ಬಂಧನ: ಸೋನಿಯಾ ಸೇನೆ, ಪಪ್ಪು ಸೇನೆ ಎಂದು ಕಂಗನಾ ಟೀಕೆ
ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಅವರನ್ನು ಮುಂಬೈ ಪೊಲೀಸರು ಬುಧವಾರ ಬೆಳಗ್ಗೆ ಬಂಧಿಸಿದ್ದಾರೆ. ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿದ ಪೊಲೀಸರು ತನ್ನ ಮೇಲೆ ಹಲ್ಲೆ ಮಾಡಿ ಬಲವಂತವಾಗಿ ಎಳೆದೊಯ್ದಿದ್ದಾರೆ ಎಂದು ಅರ್ನಬ್ ಆರೋಪಿಸಿದ್ದಾರೆ.
ಈ ಕಡೆ ಪತ್ರಕರ್ತ ಅರ್ನಬ್ ಗೋಸ್ವಾಮಿ ಬಂಧನ ಖಂಡಿಸಿರುವ ನಟಿ ಕಂಗನಾ ರಣಾವತ್, ಮಹಾರಾಷ್ಟ್ರ ಸರ್ಕಾರದ ವಿರುದ್ಧ ಟೀಕೆ ಮಾಡಿದ್ದಾರೆ.
ಮುಂಬೈನಲ್ಲಿ ಬೆಳ್ಳಂಬೆಳಿಗ್ಗೆ ಹೈಡ್ರಾಮಾ: ಅರ್ನಬ್ ಗೋಸ್ವಾಮಿ ಬಂಧನ
''ಅರ್ನಬ್ ಗೋಸ್ವಾಮಿ ಮನೆಗೆ ನುಗ್ಗಿ ಆತನ ಮೇಲೆ ದಾಳಿ ನಡೆಸಿರುವ ಮಹಾರಾಷ್ಟ್ರ ಸರ್ಕಾರಕ್ಕೆ ನಾನು ಕೇಳಲು ಬಯಸುತ್ತೇನೆ, ನೀವು ಇನ್ನು ಎಷ್ಟು ಮನೆಗಳ ಮೇಲೆ ದಾಳಿ ಮಾಡ್ತೀರಾ? ಇನ್ನು ಎಷ್ಟು ಧ್ವನಿಗಳನ್ನು ಮುಚ್ಚಿಸುತ್ತೀರಾ? ಸೋನಿಯಾ ಸೇನೆ, ಪಪ್ಪು ಸೇನೆ ಇನ್ನು ಎಷ್ಟು ದಿನ ಇಂತಹ ಕೆಲಸಗಳನ್ನು ಮಾಡುತ್ತೇ'' ಎಂದು ಪ್ರಶ್ನಿಸಿದ್ದಾರೆ.
ಈ ಘಟನೆ ಬಗ್ಗೆ ವಿಡಿಯೋ ಮಾಡಿ ಟ್ವಿಟ್ಟರ್ನಲ್ಲಿ ಹಂಚಿಕೊಂಡಿರುವ ಕಂಗನಾ ರಣಾವತ್, ''ಅನ್ಯಾಯ, ಅಕ್ರಮಗಳ ವಿರುದ್ಧ ದನಿ ಎತ್ತುವವರ ಬಾಯಿ ಮುಚ್ಚಿಸಲಾಗುತ್ತಿದೆ, ಒಂದು ದನಿ ಮುಚ್ಚಿಸಿದರೆ ಮತ್ತಷ್ಟು ದನಿಗಳು ಎದ್ದೇಳುತ್ತದೆ'' ಎಂದು ಕಂಗನಾ ಕಿಡಿ ಕಾರಿದ್ದಾರೆ.
''ಇದಕ್ಕೂ ಮುಂಚೆ ಎಷ್ಟು ಜನ ದೇಶಭಕ್ತರ ಬಾಯಿಗಳನ್ನು ಮುಚ್ಚಿಸಿದ್ದೀರಾ ಎಂದು ಗೊತ್ತಿದೆ. ಆದರೂ ನಾವು ಯಾವುದಕ್ಕೂ ಅಂಜುವುದಿಲ್ಲ, ಒಂದು ದನಿ ನಿಲ್ಲಿಸಿದರೆ ಮತ್ತಷ್ಟು ದನಿ ಬರುತ್ತದೆ'' ಎಂದು ಕಾಂಗ್ರೆಸ್ ಹಾಗೂ ಶಿವಸೇನಾ ಸರ್ಕಾರದ ವಿರುದ್ಧ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ.
ಒಳಾಂಗಣ ವಿನ್ಯಾಸಗಾರ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ ನಾಯಕ್ ಅವರು 2018ರ ಮೇ ತಿಂಗಳಲ್ಲಿ ಅಲಿಬಾಗ್ನ ತಮ್ಮ ನಿವಾಸದಲ್ಲಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ರಿಪಬ್ಲಿಕ್ ಟಿವಿ ತನ್ನ ಕೆಲಸಕ್ಕೆ ಹಣ ಪಾವತಿಸದೆ ಬಾಕಿ ಉಳಿಸಿಕೊಂಡಿದ್ದೇ ತಂದೆ ಹಾಗೂ ಅಜ್ಜಿಯ ಆತ್ಮಹತ್ಯೆಗೆ ಕಾರಣ ಎಂದು ಅನ್ವಯ್ ಅವರ ಮಗಳು ಆದ್ನ್ಯಾ ನಾಯಕ್ ಆರೋಪಿಸಿದ್ದರು.
ಈ ಕೇಸ್ನಲ್ಲಿ ಮುಂಬೈ ಪೊಲೀಸರು ಅರ್ನಬ್ ಗೋಸ್ವಾಮಿಯನ್ನು ಬಂಧಿಸಿದ್ದಾರೆ.