Don't Miss!
- News ನಾಲ್ಕು ಗೋಡೆಗಳ ಮಧ್ಯೆ ಆಗಿರುವ ಚರ್ಚೆ ಬಹಿರಂಗವಾಗಿ ಹೇಳೋದಕ್ಕೆ ಆಗಲ್ಲ: ಎಂ.ಪಿ.ರೇಣುಕಾಚಾರ್ಯ ಹೀಗೆ ಹೇಳಿದ್ಯಾಕೆ?
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Automobiles Hyundai Creta: ಜನಪ್ರಿಯ ಹ್ಯುಂಡೈ ಕ್ರೆಟಾ ಕಾರನ್ನು ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು? EMI ಏನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಾನನಷ್ಟ ಮೊಕದ್ದಮೆಯಲ್ಲಿ ಕಂಗನಾ ರನೌತ್ಗೆ ಜಾಮೀನು
ಖ್ಯಾತ ಚಿತ್ರ ಸಾಹಿತಿ ಜಾವೇದ್ ಅಖ್ತರ್ ಅವರು ಕಂಗನಾ ರನೌತ್ ವಿರುದ್ಧ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ನಟಿ ಕಂಗನಾ ರನೌತ್ಗೆ ಜಾಮೀನು ದೊರಕಿದೆ.
ಕಳೆದ ವರ್ಷ ನಟಿ ಕಂಗನಾ ರನೌತ್ ಅವರು ಚಿತ್ರ ಸಾಹಿತಿ ಜಾವೇದ್ ಅಖ್ತರ್ ಅವರ ಬಗ್ಗೆ ಆಧಾರ ರಹಿತ ಹೇಳಿಕೆ ನೀಡಿದ್ದರು. ಇದರಿಂದ ತಮ್ಮ ಮಾನನಷ್ಟವಾಗಿದೆ ಎಂದು ಆರೋಪಿಸಿ ಜಾವೇದ್ ಅಖ್ತರ್ ಅವರು ಪ್ರಕರಣ ದಾಖಲಿಸಿದ್ದರು.
ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಟ್ವೀಟ್: ರಾಜ್ಯ ಹೈಕೋರ್ಟ್ನಲ್ಲಿ ಕಂಗನಾ ನಿರಾಳ
ಮಾರ್ಚ್ 1 ರಂದು ಮುಂಬೈನ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಕಂಗನಾ ವಿರುದ್ಧ ವಾರೆಂಟ್ ಹೊರಡಿಸಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು.
ಮ್ಯಾಜಿಸ್ಟ್ರೇಟ್ ಕೋರ್ಟ್ಗೆ ಹಾಜರಾದ ಕಂಗನಾ ಜಾಮೀನಿಗೆ ಮನವಿ ಸಲ್ಲಿಸಿದ್ದರು ಜೊತೆಗೆ ವಾರೆಂಟ್ ಅನ್ನು ರದ್ದುಗೊಳಿಸುವಂತೆ ಮನವಿ ಸಲ್ಲಿಸಿದ್ದರು.
ಅಂತೆಯೇ ಇಂದು (ಮಾರ್ಚ್ 25) ರಂದು ಕಂಗನಾಗೆ ಅಂಧೇರಿಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. 20,000 ನಗದು ಭದ್ರತೆ 15,000 ಆಸ್ತಿ ಭದ್ರತೆ ನೀಡಿ ಜಾಮೀನು ಪಡೆದಿದ್ದಾರೆ ಕಂಗನಾ ರನೌತ್.
ನೆಪೋಟಿಸಂ: ದಕ್ಷಿಣ ಭಾರತ ಚಿತ್ರರಂಗದ ಬಗ್ಗೆ ನಟಿ ಕಂಗನಾ ರಣಾವತ್ ಹೇಳಿದ್ದೇನು?
ಇದೇ ದಿನ ಕಂಗನಾಗೆ ಕರ್ನಾಟಕ ಹೈಕೋರ್ಟ್ನಿಂದಲೂ ಸಿಹಿ ಸುದ್ದಿ ದೊರೆತಿದೆ. ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಕಂಗನಾ ಮಾಡಿದ್ದ ಟ್ವೀಟ್ ಬಗ್ಗೆ ತುಮಕೂರು ಜೆಎಂಎಫ್ಸಿ ನ್ಯಾಯಾಲಯದಲ್ಲಿ ರಮೇಶ್ ನಾಯಕ್ ಎಂಬುವರು ದೂರು ದಾಖಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಧೀಶರು ಕಂಗನಾ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಸೂಚಿಸಿದ್ದರು. ಆದರೆ ಕರ್ನಾಟಕ ಹೈಕೋರ್ಟ್ ಈ ಆದೇಶಕ್ಕೆ ತಡೆ ನೀಡಿದೆ. ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟರು ಯಾಂತ್ರಿಕವಾಗಿ ತೀರ್ಪು ನೀಡಿದ್ದಾರೆ. ಅಪರಾಧ ಎಸಗಲಾಗಿದೆಯೇ ಇಲ್ಲವೆ ಎಂಬ ಪರಿಶೀಲನೆ ನಡೆಸಿದೆ ಆದೇಶ ನೀಡಲಾಗಿದೆ ಹಾಗಾಗಿ ಅರ್ಜಿಯ ಪುನರ್ ವಿಚಾರಣೆ ಅವಶ್ಯಕತೆ ಇದೆ ಎಂದು ಹೇಳಿ ತುಮಕೂರು ಜೆಎಂಎಫ್ಸಿಗೆ ಪ್ರಕರಣವನ್ನು ಮರಳಿ ಕಳುಹಿಸಲಾಗಿದೆ.
Recommended Video
ರೈತರ ಬಗ್ಗೆ ಮಾಡಿದ್ದ ಟ್ವೀಟ್ ಬಗ್ಗೆ ನಟಿ ಕಂಗನಾ ವಿರುದ್ಧ ಬೆಳಗಾವಿ ಮ್ಯಾಜಿಸ್ಟ್ರೇಟ್ ಟ್ ನ್ಯಾಯಾಲಯದಲ್ಲಿಯೂ ಪ್ರಕರಣ ದಾಖಲಾಗಿತ್ತು.