twitter
    For Quick Alerts
    ALLOW NOTIFICATIONS  
    For Daily Alerts

    ಮಾನನಷ್ಟ ಮೊಕದ್ದಮೆಯಲ್ಲಿ ಕಂಗನಾ ರನೌತ್‌ಗೆ ಜಾಮೀನು

    |

    ಖ್ಯಾತ ಚಿತ್ರ ಸಾಹಿತಿ ಜಾವೇದ್ ಅಖ್ತರ್ ಅವರು ಕಂಗನಾ ರನೌತ್ ವಿರುದ್ಧ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ನಟಿ ಕಂಗನಾ ರನೌತ್‌ಗೆ ಜಾಮೀನು ದೊರಕಿದೆ.

    ಕಳೆದ ವರ್ಷ ನಟಿ ಕಂಗನಾ ರನೌತ್ ಅವರು ಚಿತ್ರ ಸಾಹಿತಿ ಜಾವೇದ್ ಅಖ್ತರ್ ಅವರ ಬಗ್ಗೆ ಆಧಾರ ರಹಿತ ಹೇಳಿಕೆ ನೀಡಿದ್ದರು. ಇದರಿಂದ ತಮ್ಮ ಮಾನನಷ್ಟವಾಗಿದೆ ಎಂದು ಆರೋಪಿಸಿ ಜಾವೇದ್ ಅಖ್ತರ್ ಅವರು ಪ್ರಕರಣ ದಾಖಲಿಸಿದ್ದರು.

    ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಟ್ವೀಟ್: ರಾಜ್ಯ ಹೈಕೋರ್ಟ್‌ನಲ್ಲಿ ಕಂಗನಾ ನಿರಾಳರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಟ್ವೀಟ್: ರಾಜ್ಯ ಹೈಕೋರ್ಟ್‌ನಲ್ಲಿ ಕಂಗನಾ ನಿರಾಳ

    ಮಾರ್ಚ್ 1 ರಂದು ಮುಂಬೈನ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಕಂಗನಾ ವಿರುದ್ಧ ವಾರೆಂಟ್ ಹೊರಡಿಸಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು.

    Kangana Ranaut Granted Bail In Defamation Case Filed By Javed Akhtar

    ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಹಾಜರಾದ ಕಂಗನಾ ಜಾಮೀನಿಗೆ ಮನವಿ ಸಲ್ಲಿಸಿದ್ದರು ಜೊತೆಗೆ ವಾರೆಂಟ್ ಅನ್ನು ರದ್ದುಗೊಳಿಸುವಂತೆ ಮನವಿ ಸಲ್ಲಿಸಿದ್ದರು.

    ಅಂತೆಯೇ ಇಂದು (ಮಾರ್ಚ್ 25) ರಂದು ಕಂಗನಾಗೆ ಅಂಧೇರಿಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. 20,000 ನಗದು ಭದ್ರತೆ 15,000 ಆಸ್ತಿ ಭದ್ರತೆ ನೀಡಿ ಜಾಮೀನು ಪಡೆದಿದ್ದಾರೆ ಕಂಗನಾ ರನೌತ್.

    ನೆಪೋಟಿಸಂ: ದಕ್ಷಿಣ ಭಾರತ ಚಿತ್ರರಂಗದ ಬಗ್ಗೆ ನಟಿ ಕಂಗನಾ ರಣಾವತ್ ಹೇಳಿದ್ದೇನು?ನೆಪೋಟಿಸಂ: ದಕ್ಷಿಣ ಭಾರತ ಚಿತ್ರರಂಗದ ಬಗ್ಗೆ ನಟಿ ಕಂಗನಾ ರಣಾವತ್ ಹೇಳಿದ್ದೇನು?

    ಇದೇ ದಿನ ಕಂಗನಾಗೆ ಕರ್ನಾಟಕ ಹೈಕೋರ್ಟ್‌ನಿಂದಲೂ ಸಿಹಿ ಸುದ್ದಿ ದೊರೆತಿದೆ. ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಕಂಗನಾ ಮಾಡಿದ್ದ ಟ್ವೀಟ್ ಬಗ್ಗೆ ತುಮಕೂರು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ರಮೇಶ್ ನಾಯಕ್ ಎಂಬುವರು ದೂರು ದಾಖಲಿಸಿದ್ದರು.

    ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಧೀಶರು ಕಂಗನಾ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಸೂಚಿಸಿದ್ದರು. ಆದರೆ ಕರ್ನಾಟಕ ಹೈಕೋರ್ಟ್ ಈ ಆದೇಶಕ್ಕೆ ತಡೆ ನೀಡಿದೆ. ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟರು ಯಾಂತ್ರಿಕವಾಗಿ ತೀರ್ಪು ನೀಡಿದ್ದಾರೆ. ಅಪರಾಧ ಎಸಗಲಾಗಿದೆಯೇ ಇಲ್ಲವೆ ಎಂಬ ಪರಿಶೀಲನೆ ನಡೆಸಿದೆ ಆದೇಶ ನೀಡಲಾಗಿದೆ ಹಾಗಾಗಿ ಅರ್ಜಿಯ ಪುನರ್‌ ವಿಚಾರಣೆ ಅವಶ್ಯಕತೆ ಇದೆ ಎಂದು ಹೇಳಿ ತುಮಕೂರು ಜೆಎಂಎಫ್‌ಸಿಗೆ ಪ್ರಕರಣವನ್ನು ಮರಳಿ ಕಳುಹಿಸಲಾಗಿದೆ.

    Recommended Video

    ಅಳುವುದೇ ಇಲ್ಲ ಎನ್ನುತ್ತಿದ್ದ ಕಂಗನಾ ಭಾವುಕರಾಗಿ ಕಣ್ಣೀರು ಹಾಕಿದ್ಯಾಕೆ? | Filmibeat Kannada

    ರೈತರ ಬಗ್ಗೆ ಮಾಡಿದ್ದ ಟ್ವೀಟ್‌ ಬಗ್ಗೆ ನಟಿ ಕಂಗನಾ ವಿರುದ್ಧ ಬೆಳಗಾವಿ ಮ್ಯಾಜಿಸ್ಟ್ರೇಟ್ ಟ್ ನ್ಯಾಯಾಲಯದಲ್ಲಿಯೂ ಪ್ರಕರಣ ದಾಖಲಾಗಿತ್ತು.

    English summary
    Actress Kangana Ranaut granted bail in defamation case filed by writer Javed Akhtar last year.
    Thursday, March 25, 2021, 21:30
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X