Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮುಂಬೈನಿಂದ ಶಿಮ್ಲಾಗೆ ಕೇಸ್ ವರ್ಗಾಯಿಸಿ': ಸುಪ್ರೀಂ ಮೊರೆ ಹೋದ ಕಂಗನಾ
ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಮುಂಬೈ ಕೋರ್ಟ್ನಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು, ಈ ಎಲ್ಲ ಕೇಸ್ಗಳನ್ನು ಶಿಮ್ಲಾ ನ್ಯಾಯಾಲಯಕ್ಕೆ ವರ್ಗಾಯಿಸಿ ಎಂದು ಸುಪ್ರೀಂಕೋರ್ಟ್ನಲ್ಲಿ ಮನವಿ ಮಾಡಿದ್ದಾರೆ.
ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ತಂದಿರುವ ಆರೋಪದಡಿ ದಾಖಲಾಗಿರುವ ಕೇಸ್, ಜಾವಿದ್ ಅಖ್ತರ್ ಹೂಡಿರುವ ಮಾನನಷ್ಟ ಮೊಕದ್ದಮೆ ಕೇಸ್ ಸೇರಿದಂತೆ ಹಲವು ಕೇಸ್ಗಳು ನಟಿ ಕಂಗನಾ ಹಾಗೂ ಸಹೋದರಿ ರಂಗೋಲಿ ವಿರುದ್ಧ ದಾಖಲಾಗಿದೆ.
ತಮ್ಮ ವಿರುದ್ಧ ದಾಖಲಾಗಿರುವ ಎಲ್ಲಾ ಪ್ರಕರಣಗಳು ಕ್ಷುಲ್ಲಕ ಹಾಗೂ ತಮಗೆ ಕಿರುಕುಳ ನೀಡುವ ದುರುದ್ದೇಶ ಹೊಂದಿದೆ. ಮತ್ತು ಸಾರ್ವಜನಿಕ ತಮ್ಮ ವ್ಯಕ್ತಿತ್ವ ಕೆಡಿಸುವ ದುರುದ್ದೇಶದಿಂದ ಕೂಡಿದೆ ಎಂದು ಕಂಗನಾ ಮತ್ತು ರಂಗೋಲಿ ಆರೋಪಿಸಿದ್ದಾರೆ.
ರೈತ ವಿರೋಧಿ ಟ್ವೀಟ್: ರಾಜ್ಯ ಹೈಕೋರ್ಟ್ನಲ್ಲಿ ಕಂಗನಾಗೆ ಹಿನ್ನಡೆ
ದೇಶದ ನ್ಯಾಯಾಲಯಗಳ ಬಗ್ಗೆ ಅತ್ಯಂತ ನಂಬಿಕೆ ಮತ್ತು ಗೌರವವಿದ್ದರೂ, ಮುಂಬೈನಲ್ಲಿ ಪ್ರಕರಣಗಳ ವಿಚಾರಣೆ ಮುಂದುವರಿದರೆ ನಟಿ ಹಾಗೂ ಅವರ ಸಹೋದರಿಗೆ ಜೀವ ಮತ್ತು ಆಸ್ತಿಗೆ ಬೆದರಿಕೆ ಇದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
"ಶಿವಸೇನೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಅರ್ಜಿದಾರರಿಗೆ (ಕಂಗನಾ ಹಾಗೂ ರಂಗೋಲಿ) ಕಿರುಕುಳ ನೀಡುತ್ತಿದೆ'' ಎಂದು ವಕೀಲ ನೀರಜ್ ಶೇಖರ್ ನ್ಯಾಯಾಲಯದಲ್ಲಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.
Recommended Video
ಅಂದ್ಹಾಗೆ, ನಟಿ ಕಂಗನಾ ರಣಾವತ್ ಮೂಲತಃ ಹಿಮಾಚಲ ಪ್ರದೇಶದವರು. ಹಾಗಾಗಿ, ತಮ್ಮದೇ ರಾಜ್ಯದಲ್ಲಿ ಈ ಕೇಸ್ ಮುನ್ನಡೆಸಲು ನಿರ್ಧರಿಸಿದ್ದು, ಮುಂಬೈನಿಂದ ಶಿಮ್ಲಾಗೆ ವರ್ಗಾಯಿಸಿ ಎಂದು ಕೇಳಿಕೊಂಡಿದ್ದಾರೆ.