Don't Miss!
- News ಬಂಡೀಪುರ: ಹುಲಿ ದಾಳಿಯಿಂದ ಮರಿಯಾನೆ ಸಾವು, ನಡುರಸ್ತೆಯಲ್ಲೇ ಮುಗಿಲು ಮುಟ್ಟಿದ ತಾಯಿಯ ಆಕ್ರಂದನ, ವಿಡಿಯೋ ವೈರಲ್
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Automobiles ಭಾರತದ ರಸ್ತೆಯಲ್ಲಿ ಘರ್ಜಿಸುತ್ತಿರುವ ಪವರ್ಫುಲ್ ಎಪ್ರಿಲಿಯಾ ಬೈಕ್ಗಾಗಿ ಅಕ್ಸೆಸರೀಸ್ ಬಿಡುಗಡೆ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೈಕೋರ್ಟ್ ಮೆಟ್ಟಿಲೇರಿದ ನಟಿ ಕಂಗನಾ ರಣಾವತ್: ಕಾರಣವೇನು?
ಬಾಲಿವುಡ್ ನಟಿ ಕಂಗನಾ ರಣಾವತ್ ವಿವಾದಗಳ ಮೂಲಕವೇ ಹೆಚ್ಚು ಸುದ್ದಿಯಲ್ಲಿದ್ದಾರೆ. ಒಂದಲ್ಲೊಂದು ಕಿರಿಕ್ ಮಾಡಿಕೊಂಡು, ಪೊಲೀಸ್ ಸ್ಟೇಷನ್, ಕೋರ್ಟ್ ಅಲೆಯುತ್ತಿರುವ ಕಂಗನಾ ಇದೀಗ ಮತ್ತೆ ಹೈ ಕೋರ್ಟ್ ಮೆಟ್ಟಿಲೇರಿದ್ದಾರೆ.
ಈ ಬಾರಿ ಕಂಗನಾ ಹೈಕೋರ್ಟ್ ಮೆಟ್ಟಿಲೇರಿರುವುದು ತನ್ನ ಪಾರ್ಟ್ ಪೋರ್ಟ್ ನವೀಕರಣಕ್ಕೆ ಅನುಮತಿ ನೀಡಬೇಕೆಂದು ಕೋರಿ. ಆದರೆ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, "ಅರ್ಜಿ ಅಸ್ಪಷ್ಟವಾಗಿದೆ ಮತ್ತು ಎಲ್ಲಾ ದಾಖಲೆಗಳನ್ನು ಇರಿಸಿಲ್ಲ" ಎಂದು ಹೇಳಿದೆ.
ಕೆಲಸವಿಲ್ಲದೆ ತೆರಿಗೆ ಕಟ್ಟಲು ಆಗುತ್ತಿಲ್ಲ; ಕಂಗನಾ ರಣಾವತ್
ಸೆಪ್ಟಂಬರ್ 15ಕ್ಕೆ ಕಂಗನಾ ಪಾಸ್ ಪೋರ್ಟ್ ಅವಧಿ ಮುಕ್ತಾಯವಾಗಲಿದೆ. ಕಂಗನಾ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿದ್ದರಿಂದ ಪಾಸ್ ಪೋರ್ಟ್ ನವೀಕರಿಸಲು ಸಲ್ಲಿಸಿದ್ದ ಅರ್ಜಿಯನ್ನು ಪಾಸ್ ಪೋರ್ಟ್ ಪ್ರಾಧಿಕಾರ ತಿರಸ್ಕರಿಸಿದೆ. ಹಾಗಾಗಿ ಕಂಗನಾ ಕೋರ್ಟ್ ಮೊರೆಹೋಗಿದ್ದಾರೆ.
ಕಂಗನಾ ಪರ ವಕೀಲ ರಿಜ್ವಾನ್ ಸಿದ್ಧಿಕಿ ಮೂಲಕ ಸಲ್ಲಿಸಿದ್ದ ಅರ್ಜಿಯಲ್ಲಿ, "ಕಂಗನಾ ರಣಾವತ್ ಮತ್ತು ಅವರ ಸಹೋದರಿ ರಂಗೋಲಿ ವಿರುದ್ಧ ಈ ವರ್ಷದ ಆರಂಭದಲ್ಲಿ ಬಾಂದ್ರಾ ಪೊಲೀಸರು ಎಫ್ ಐ ಆರ್ ದಾಖಲಿಸಿದ ಕಾರಣ ಪಾಸ್ ಪೋರ್ಟ್ ನವೀಕರಿಸಲು ನಿರಾಕರಿಸಿದ್ದಾರೆ" ಎಂದು ಹೇಳಿದ್ದಾರೆ.
"ಈ ವಾರದ ನಂತರ ಕಂಗನಾ ರಣಾವತ್ ಅವರ ಚಿತ್ರದ ಚಿತ್ರೀಕರಣ ವೇಳಪಟ್ಟಿ ಸಿದ್ಧವಾಗಿದೆ. ಕಂಗನಾ ರಾಣವಾತ್ ಅವರು ಭಾರತದಿಂದ ಹೊರ ಹೋಗುವ ಅಗತ್ಯವಿದೆ" ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ. ಇದೀಗ ಜೂನ್ 25ಕ್ಕೆ ವಿಚಾರಣೆ ಮುಂದೂಲಾಗಿದೆ.
Recommended Video
ನಟಿ ಕಂಗನಾ ರಣಾವತ್ ಮುಂದಿನ ಸಿನಿಮಾ ದಾಖಡ್ ಚಿತ್ರೀಕರಣಕ್ಕಾಗಿ ಹಂಗೇರಿಗೆ ಪ್ರಯಾಣಿಸಬೇಕಾಗಿದೆ. ಚಿತ್ರತಂಡ ಈಗಾಗಲೇ ವೇಳಪಟ್ಟಿ ಸಿದ್ಧಮಾಡಿದ್ದು, ಚಿತ್ರೀಕರಣಕ್ಕೆ ಹೊರಡಲು ಸಿದ್ಧವಾಗಿದೆ. ಆದರೆ ಕಂಗನಾಗೆ ಅನುಮತಿ ಸಿಗುತ್ತಾ ಎಂದು ಕಾದುನೋಡಬೇಕು.