Don't Miss!
- News ಬಿಎಂಟಿಸಿ & ನಮ್ಮ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ದಿಢೀರ್ ಹೆಚ್ಚಳಕ್ಕೆ ಕಾರಣ ಏನು?-ಇಲ್ಲಿದೆ ಮಾಹಿತಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸವಾಲೆಸೆದ ಬೆನ್ನಲ್ಲೆ ಕಂಗನಾ ರಣಾವತ್ಗೆ ಆಘಾತ ನೀಡಿದ ಮುಂಬೈ ಪಾಲಿಕೆ
ಸುಶಾಂತ್ ಸಿಂಗ್ ರಜಪೂತ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಾರಾಷ್ಟ್ರ ಸರ್ಕಾರ ಹಾಗೂ ಪೊಲೀಸರ ಕ್ರಮವನ್ನು ಖಂಡಿಸಿದ ನಟಿ ಕಂಗನಾ ರಣಾವತ್ಗೆ ಮುಂಬೈ ಮಹಾನಗರ ಪಾಲಿಕೆ ಮತ್ತೊಂದು ಆಘಾತ ನೀಡಿದೆ.
Recommended Video
ಮುಂಬೈನಲ್ಲಿರುವ ಕಂಗನಾ ಅವರ ಸಿನಿಮಾ ಕಚೇರಿಯನ್ನು ನೆಲಸಮ ಮಾಡಲು ಮುಂದಾಗಿದ್ದು, ಅಧಿಕಾರಿಗಳ ತಂಡವೂ ಈಗಾಗಲೇ ಕಂಗನಾ ಕಚೇರಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದೆ ಎಂದು ಕಂಗನಾ ಆರೋಪಿಸಿದ್ದಾರೆ. ಮುಂದೆ ಓದಿ....
ಹಿಮಾಚಲ ಪ್ರದೇಶ ಸರ್ಕಾರದಿಂದ ನಟಿ ಕಂಗನಾಗೆ ಭದ್ರತೆ: ಸಿಎಂ ಜೈರಾಮ್ ಠಾಕೂರ್
ಮಣಿಕರ್ಣಿಕಾ ಕಚೇರಿ ಇನ್ಮುಂದೆ ಬರಿ ಕನಸು
''ನಾನು ಹದಿನೈದು ವರ್ಷಗಳ ಕಠಿಣ ಪರಿಶ್ರಮದ ನಂತರ ಸಂಪಾದಿಸಿದ್ದು ಮುಂಬೈನ ಮಣಿಕರ್ಣಿಕಾ ಸಿನಿಮಾ ಕಚೇರಿ. ನಾನು ನಿರ್ದೇಶಕಿ ಆದ್ಮೇಲೆ ನನಗೆ ಇದ್ದ ಕನಸು ಸ್ವಂತ ಕಚೇರಿ ಮಾಡ್ಬೇಕು ಎನ್ನುವುದು. ಆಗ ನಿರ್ಮಾಣವಾಗಿದ್ದು ಈ ಕಚೇರಿ. ಆದರೆ ಶೀಘ್ರದಲ್ಲೇ ನನ್ನು ಕನಸು ನೆಲಕ್ಕೆ ಉರುಳಲಿದೆ. ಇಂದು ಮುಂಬೈ ಪಾಲಿಕೆಗೆ ಸಂಬಂಧಿಸದ ಕೆಲವು ವ್ಯಕ್ತಿಗಳನ್ನು ನನ್ನ ಕಚೇರಿಗೆ ಭೇಟಿ ನೀಡಿದ್ದಾರೆ'' ಎಂದು ಕಂಗನಾ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ನಾಳೆ ಕಚೇರ ನೆಲಸಮ ಆಗಲಿದೆ
''ಕೆಲವು ಅಧಿಕಾರಿಗಳು ಬಲವಂತವಾಗಿ ಕಚೇರಿ ಪ್ರವೇಶಿಸಿದ್ದು, ಆಫೀಸ್ ಸ್ಥಳವನ್ನು ಅಳತೆ ಮಾಡಿದ್ದಾರೆ. ಪ್ರಶ್ನಿಸಿದ ನೆರೆಹೊರೆಯವರ ವಿರುದ್ಧ ದೌರ್ಜನ್ಯ ಮಾಡಿದ್ದಾರೆ. ನಾಳೆ ನನ್ನೆ ಕಚೇರಿ ನೆಲಸಮ ಆಗಲಿದೆ ಎಂದು ನಾನು ನಿಮಗೆ ತಿಳಿಸುತ್ತಿದ್ದೇನೆ'' ಎಂದು ಕಚೇರಿಯಲ್ಲಿ ಕೆಲವು ಅಧಿಕಾರಿಗಳು ಕುಳಿತಿರುವುದನ್ನು ಕಂಗನಾ ಟ್ವೀಟ್ ಮಾಡಿದ್ದಾರೆ.
ನಾನು ಬಂದೇ ಬರ್ತೀನಿ, ತಾಕತ್ ಇದ್ದರೆ ತಡೆಯಿರಿ: ನಟಿ ಕಂಗನಾ ಸವಾಲ್
ನನ್ನ ಬಳಿಕ ಎಲ್ಲ ದಾಖಲೆಗಳಿವೆ
''ನನ್ನ ಬಳಿ ಎಲ್ಲಾ ದಾಖಲೆಗಳಿವೆ. ಬಿಎಂಸಿ ಅನುಮತಿ ಸೇರಿದಂತೆ ನನ್ನ ಆಸ್ತಿಯಲ್ಲಿ ಯಾವುದೇ ಅಕ್ರಮ ಹಾಗೂ ಕಾನೂನುಬಾಹಿರವಾಗಿ ಏನೂ ಮಾಡಿಲ್ಲ. ಮುಂಬೈ ಪಾಲಿಕೆ ಅಕ್ರಮ ನಿರ್ಮಾಣ ಎನ್ನುವುದಾದರೇ ಅದಕ್ಕೆ ನೋಟಿಸ್ ನೀಡಬೇಕು. ಆದರೆ, ಯಾವುದೇ ನೋಟಿಸ್ ನೀಡದೆ ಇಂದು ನನ್ನ ಕಚೇರಿ ಮೇಲೆ ದಾಳಿ ಮಾಡಿದ್ದು, ನಾಳೆ ನೆಲಸಮ ಮಾಡಲು ಮುಂದಾಗಿದ್ದಾರೆ'' ಎಂದು ನಟಿ ಕಂಗನಾ ಆಕ್ರೋಶ ಹೊರಹಾಕಿದ್ದಾರೆ.
ಮುಂಬೈ ಪಾಲಿಕೆ ನಡೆಗೆ ನೆಟ್ಟಿಗರು ವಿರೋಧ
ಕಂಗನಾ ರಣಾವತ್ ವಿಚಾರದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತು ಮುಂಬೈ ಪಾಲಿಕೆ ವಿರುದ್ಧ ನೆಟ್ಟಿಗರು ಕಿಡಿಕಾರುತ್ತಿದ್ದಾರೆ. ಕಷ್ಟಪಟ್ಟು ಸಂಪಾದನೆ ಮಾಡಿರುವ ಆಸ್ತಿಯನ್ನು ಹೇಗೆ ನೆಲಸಮ ಮಾಡುತ್ತಾರೆ ಎಂದು ಪ್ರಶ್ನಿಸಿ ಪ್ರಧಾನಿ ಕಚೇರಿ ಮತ್ತು ಅಮಿತ್ ಶಾ ಅವರನ್ನು ಪ್ರಶ್ನಿಸುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಗೂಂಡಾಗಿರಿ ಸರ್ಕಾರ ನಡೆಯುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಪಾಕ್ ಆಕ್ರಮಿತ ಮುಂಬೈ ಎಂದ ಕಂಗನಾ
ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಮುಂಬೈ ಪೊಲೀಸರ ತನಿಖೆಯನ್ನು ಪ್ರಶ್ನಿಸಿದ್ದ ಕಂಗನಾ, ಪಾಕ್ ಆಕ್ರಮಿತ ಮುಂಬೈ ಎಂದು ಸಂಬೋದಿಸಿದ್ದರು. ಇದರಿಂದ ಕಂಗನಾ ವಿರುದ್ಧ ತೀವ್ರ ಟೀಕೆ ವ್ಯಕ್ತವಾಯಿತು. 'ಮುಂಬೈಗೆ ಬರಬೇಡಿ' ಎಂದು ಶಿವಸೇನಾ ಮುಖಂಡ ಸಂಜಯ್ ರಾವತ್ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಕಂಗನಾ, 'ಮುಂಬೈಗೆ ನಾನು ಬಂದೇ ಬರ್ತೀನಿ ಯಾರಪ್ಪನಿಂದಲಾದರೂ ಸಾಧ್ಯವಾದರೆ ತಡೆಯಿರಿ' ಎಂದು ಸವಾಲ್ ಹಾಕಿದ್ದರು. ಇದರ ಬೆನ್ನಲ್ಲೆ ಕಂಗನಾ ಕಚೇರಿ ವಿಚಾರದಲ್ಲಿ ಈ ಬೆಳವಣಿಗೆ ನಡೆದಿರುವುದು ಅನುಮಾನಕ್ಕೆ ಎಡೆ ಮಾಡಿದೆ.