Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇಂದಿರಾ ಗಾಂಧಿ ಚಿತ್ರದ ಬಗ್ಗೆ ಟ್ವಿಸ್ಟ್ ಕೊಟ್ಟ ಕಂಗಣಾ ರಣಾವತ್
'ತಲೈವಿ' ಸಿನಿಮಾ ಮುಗಿಸಿರುವ ಬಾಲಿವುಡ್ ನಟಿ ಕಂಗನಾ ರಣಾವತ್, ತಮ್ಮ ಮುಂದಿನ ಚಿತ್ರವನ್ನು ನಿರ್ದೇಶಕ ಸಾಯಿ ಕಬೀರ್ ಜೊತೆ ಮಾಡುತ್ತಿದ್ದಾರೆ ಎಂಬ ಸುದ್ದಿ ವರದಿಯಾಗಿತ್ತು. ಇದೊಂದು ರಾಜಕೀಯ ಥ್ರಿಲ್ಲರ್ ಸಿನಿಮಾ ಆಗಿರಲಿದ್ದು, ತುರ್ತುಪರಿಸ್ಥಿತಿ ಕುರಿತು ಚಿತ್ರಕಥೆ ಮಾಡಲಾಗಿದೆ. ಇದರಲ್ಲಿ ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು.
ಇಂದಿರಾ ಗಾಂಧಿ ಪಾತ್ರಕ್ಕಾಗಿ ಕಂಗನಾ ತಯಾರಿ ಸಹ ನಡೆಸಿದ್ದರು. ಆದ್ರೀಗ, 'ಕ್ವೀನ್' ಖ್ಯಾತಿಯ ನಟಿ ಕಂಗನಾ ಟ್ವಿಸ್ಟ್ ಕೊಟ್ಟಿದ್ದಾರೆ. ಇಂದಿರಾ ಗಾಂಧಿ ಆಧರಿತ ಚಿತ್ರವನ್ನು ನಾನೇ ನಿರ್ದೇಶನ ಮಾಡ್ತಿದ್ದೀನಿ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಈ ಕುರಿತು 'ಕೂ' ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಮುಂದೆ ಓದಿ...
ಜಯಲಲಿತಾ ಆಯ್ತು, ಇನ್ನೊಂದು ಲೆಜೆಂಡರಿ ಪಾತ್ರಕ್ಕೆ ಸಜ್ಜಾಗುತ್ತಿರುವ ಕಂಗನಾ
ಇಂದಿರಾ ಗಾಂಧಿ ಚಿತ್ರಕ್ಕೆ ನಾನೇ ನಿರ್ದೇಶಕಿ
'ಎಮರ್ಜೆನ್ಸಿ' ಚಿತ್ರಕ್ಕೆ ನಾನೇ ನಿರ್ದೇಶಕಿ ಎಂದು ಕಂಗನಾ ರಣಾವತ್ ಪ್ರಕಟಣೆ ಮಾಡಿದ್ದಾರೆ. ''ಒಂದು ವರ್ಷದಿಂದ ಎಮರ್ಜೆನ್ಸಿ ಕುರಿತು ಮಾಹಿತಿ ಕಲೆ ಹಾಕಿ, ಸಿದ್ದತೆ ಮಾಡಿದ್ದೇನೆ. ಈ ಚಿತ್ರವನ್ನು ನನಗಿಂತ ಉತ್ತಮವಾಗಿ ಮತ್ತೊಬ್ಬರು ನಿರ್ದೇಶಿಸಲು ಸಾಧ್ಯವಿಲ್ಲ. ಮತ್ತೊಮ್ಮೆ ನಿರ್ದೇಶಕಿ ಜವಾಬ್ದಾರಿ ತೆಗೆದುಕೊಳ್ಳುತ್ತಿರುವುದು ಖುಷಿ ಕೊಟ್ಟಿದೆ'' ಎಂದು ಬರೆದುಕೊಂಡಿದ್ದಾರೆ.
ಇದೊಂದು ದೊಡ್ಡ ಪ್ರಾಜೆಕ್ಟ್ ಆಗಲಿದೆ
ಈ ಕುರಿತು ಪಿಂಕ್ವಿಲ್ಲಾ ಜೊತೆ ಮಾತನಾಡಿರುವ ಕಂಗನಾ, ''ಇದುವರೆಗೂ ಇಂದಿರಾ ಗಾಂಧಿ ಸಿನಿಮಾವನ್ನು ತೆರೆಗೆ ತರಲು ಸಾಧ್ಯವಾಗಿಲ್ಲ. ಈಗ ನಾನು ಆ ಚಿತ್ರ ಮಾಡುತ್ತಿದ್ದೇನೆ. ಈ ಪ್ರಾಜೆಕ್ಟ್ ಮಾಡಲು ಬಹಳ ಉತ್ಸುಕನಾಗಿದ್ದೇನೆ. ಬರಹಗಾರ ರಿತೇಶ್ ಶಾ ನನ್ನ ಜೊತೆ ಕೆಲಸ ಮಾಡ್ತಿದ್ದಾರೆ. ಇದೊಂದು ಐತಿಹಾಸಿಕ ಜರ್ನಿ ಆಗಲಿದೆ'' ಎಂದಿದ್ದಾರೆ.
ಸಾಯಿ ಕಬೀರ್ ಜೊತೆಗಿನ ಚಿತ್ರ ಯಾವುದು?
ಅಂದ್ಹಾಗೆ, ಈ ಹಿಂದೆ ಪ್ರಕಟಿಸಿರುವಂತೆ ಸಾಯಿ ಕಬೀರ್ ನಿರ್ದೇಶನದಲ್ಲಿ ಬರಲಿರುವ ಚಿತ್ರದಲ್ಲಿ ಕಂಗನಾ, ಇಂದಿರಾ ಗಾಂಧಿ ಪಾತ್ರ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ, ಟ್ವಿಸ್ಟ್ ಕೊಟ್ಟ ಕಂಗನಾ, ''ಸಾಯಿ ಕಬೀರ್ ಜೊತೆ ಮಾಡುತ್ತಿರುವ ಸಿನಿಮಾ ಬೇರೆ. ಅದು ಪೊಲಿಟಿಕಲ್ ಥ್ರಿಲ್ಲರ್. ಮಣಿಕರ್ಣಿಕಾ ಫಿಲಂಸ್ ನಿರ್ಮಾಣ ಮಾಡುತ್ತಿದೆ. ಆ ಪ್ರಾಜೆಕ್ಟ್ಗೆ ನಾನು ಸಹಕರಿಸುತ್ತಿದ್ದೇನೆ'' ಎಂದು ತಿಳಿಸಿದ್ದಾರೆ.
Recommended Video
ಮಣಿಕರ್ಣಿಕಾ ನಂತರ ಮತ್ತೆ ನಿರ್ದೇಶನ
ಈ ಹಿಂದೆ ನಿರ್ದೇಶಕ ಕ್ರಿಶ್, ಮಣಿಕರ್ಣಿಕಾ ಚಿತ್ರ ನಿರ್ದೇಶಿಸಿದರು. ಕಾರಣಾಂತರಗಳಿಂದ ನಿರ್ದೇಶಕ ಕ್ರಿಶ್, ಮಣಿಕರ್ಣಿಕಾ ಚಿತ್ರವನ್ನು ಅರ್ಧದಲ್ಲಿ ಕೈ ಬಿಟ್ಟರು. ಆಗ ನಿರ್ದೇಶನದ ಜವಾಬ್ದಾರಿ ವಹಿಸಿಕೊಂಡ ಕಂಗನಾ ಸಿನಿಮಾ ಮುಗಿಸಿ ತೆರೆಗೆ ತಂದಿದ್ದರು. ಇದೀಗ, ಇಂದಿರಾ ಕುರಿತು ಎಮರ್ಜೆನ್ಸಿ ಚಿತ್ರಕ್ಕೆ ಎರಡನೇ ಬಾರಿ ಆಕ್ಷನ್ ಕಟ್ ಹೇಳಲು ಬಾಲಿವುಡ್ ನಟಿ ನಿರ್ಧರಿಸಿರುವುದು ಕುತೂಹಲ ಹೆಚ್ಚಿಸಿದೆ.