Don't Miss!
- News Lok Sabha Election 2024 Phase 1 Polling LIVE: ಲೋಕಸಭಾ ಚುನಾವಣೆ 2024ರ ಮೊದಲ ಹಂತದ ಮತದಾನ!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದೀಪಾವಳಿ ಮುಗಿಸಿ ಮೊದಲು ಈ ಕೆಲಸ ಮಾಡಿ; 'ಕಾಂತಾರ' ಬಗ್ಗೆ ಕಾಶ್ಮೀರ್ ಫೈಲ್ಸ್ ನಿರ್ದೇಶಕ ಹೇಳಿದ್ದಿಷ್ಟು
ಕಾಂತಾರ ಸದ್ಯ ವಿಶ್ವದಾದ್ಯಂತ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುವ ಚಿತ್ರ. ಮೊದಲಿಗೆ ಕನ್ನಡದಲ್ಲಿ ಮಾತ್ರ ತೆರೆಕಂಡಿದ್ದ ಕಾಂತಾರ ಚಿತ್ರಕ್ಕೆ ಅಭೂತಪೂರ್ವ ಮೆಚ್ಚುಗೆ ವ್ಯಕ್ತವಾದ ನಂತರ ಚಿತ್ರವನ್ನು ಪ್ರೇಕ್ಷಕರ ಒತ್ತಾಯದ ಮೇರೆಗೆ ತೆಲುಗು, ತಮಿಳು ಹಿಂದಿ ಹಾಗೂ ಮಲಯಾಳಂ ಭಾಷೆಗಳಿಗೂ ಡಬ್ ಮಾಡಲಾಯಿತು.
ಕನ್ನಡದಲ್ಲಿ ದೊಡ್ಡ ಯಶಸ್ಸು ಕಂಡಿದ್ದ ಕಾಂತಾರ ಇತರೆ ಭಾಷೆಗಳಲ್ಲಿಯೂ ಸಹ ಹಿಟ್ ಲಿಸ್ಟ್ ಸೇರಿದೆ. ಅದರಲ್ಲಿಯೂ ಬಾಲಿವುಡ್ ಸಿನಿಪ್ರೇಕ್ಷಕರು ಕಾಂತಾರ ಸಿನಿಮಾಗೆ ಫಿದಾ ಆಗಿಬಿಟ್ಟಿದ್ದಾರೆ. ಈಗಾಗಲೇ ಹಿಂದಿಯಲ್ಲಿ ಇಪ್ಪತ್ತು ಕೋಟಿ ಕ್ಲಬ್ ಸೇರಿರುವ ಕಾಂತಾರ ಚಿತ್ರವನ್ನು ಹಿಂದಿ ಸಿನಿ ಪ್ರೇಕ್ಷಕರು ಮಾತ್ರವಲ್ಲದೇ ಸೆಲೆಬ್ರಿಟಿಗಳು ಸಹ ವೀಕ್ಷಿಸಿದ್ದಾರೆ.
ಸಿನಿಮಾವನ್ನು ನೋಡಿದ್ದ ಶಿಲ್ಪಾ ಶೆಟ್ಟಿ ಕಾಂತಾರ ಚಿತ್ರಕ್ಕೆ ಪ್ರಶಂಸೆಯ ಸುರಿಮಳೆಗೈದಿದ್ದರು ಹಾಗೂ ರಿಷಬ್ ಶೆಟ್ಟಿಯನ್ನು ಕೊಂಡಾಡಿದ್ದರು. ಇದೀಗ ಮತ್ತೋರ್ವ ಬಾಲಿವುಡ್ ಕಲಾವಿದ ಕಾಂತಾರ ಹಿಂದಿ ಚಿತ್ರವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ದಿ ಕಾಶ್ಮೀರ ಫೈಲ್ಸ್ ಎಂಬ ಬೃಹತ್ ಹಿಟ್ ಚಿತ್ರ ನೀಡಿದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಕಾಂತಾರ ಚಿತ್ರವನ್ನು ವೀಕ್ಷಿಸಿದ ಕೂಡಲೇ ವಿಡಿಯೋವೊಂದರ ಮೂಲಕ ಚಿತ್ರವನ್ನು ವಿಮರ್ಶಿಸಿದ್ದಾರೆ.
ನೀವು ಇಂಥ ಚಿತ್ರ ನೋಡಿದ್ದೀರೋ ಇಲ್ಲವೋ ಗೊತ್ತಿಲ್ಲ
ಕಾಂತಾರ ಚಿತ್ರವನ್ನು ವೀಕ್ಷಿಸಿ ಚಿತ್ರಮಂದಿರದಿಂದ ಮನೆಗೆ ತೆರಳುತ್ತಿದ್ದ ವಿವೇಕ್ ಅಗ್ನಿಹೋತ್ರಿ ಕಾರಿನಲ್ಲಿಯೇ ಕುಳಿತು ಸೆಲ್ಫಿ ವಿಡಿಯೋ ಮಾಡಿದ್ದಾರೆ. 'ಈಗ ತಾನೇ ಕಾಂತಾರ ಚಿತ್ರವನ್ನು ವೀಕ್ಷಿಸಿ ಹೊರ ಬಂದಿದ್ದೇನೆ. ಇದೊಂದು ಹೊಚ್ಚ ಹೊಸ ಅನುಭವ. ನೀವು ಇಂತಹ ಚಿತ್ರವನ್ನು ನೋಡಿದ್ದೀರೋ ಇಲ್ಲವೋ ಗೊತ್ತಿಲ್ಲ ಆದರೆ ನಾನು ಮಾತ್ರ ಇಲ್ಲಿಯವರೆಗೂ ಇಂತಹ ಚಿತ್ರವನ್ನು ನೋಡಿಲ್ಲ' ಎಂದು ಹೇಳಿಕೆ ನೀಡಿದರು.
ರಿಷಬ್ ಶೆಟ್ಟಿಯನ್ನು ಕೊಂಡಾಡಿದ ವಿವೇಕ್
ಇನ್ನೂ ಮುಂದುವರಿದು ಮಾತನಾಡಿದ ವಿವೇಕ್ ಅಗ್ನಿಹೋತ್ರಿ ರಿಷಬ್ ಶೆಟ್ಟಿಗೆ ಹ್ಯಾಟ್ಸಾಫ್ ಹೇಳಿದರು. ರಿಷಬ್ ಶೆಟ್ಟಿ ಅವರೇ ನೀವು ಅತ್ಯದ್ಭುತ ಕೆಲಸ ಮಾಡಿದ್ದೀರಿ, ನಾನು ನಿಮಗೆ ನಾಳೆ ಕಾಲ್ ಮಾಡುತ್ತೇನೆ, ಆದರೆ ನನಗೆ ತಡೆದುಕೊಳ್ಳಲಾಗುತ್ತಿಲ್ಲ ವಿಡಿಯೋ ಮೂಲಕ ಜನರಿಗೆ ಚಿತ್ರದ ಕುರಿತು ಹಂಚಿಕೊಳ್ಳುತ್ತಿದ್ದೇನೆ ಎಂದರು. ಚಿತ್ರದಲ್ಲಿ ಕಲೆ, ನಮ್ಮ ನೆಲದ ಸೊಗಡನ್ನು ಅಚ್ಚುಕಟ್ಟಾಗಿ ತೋರಿಸಿದ್ದಾರೆ. ಅದರಲ್ಲಿಯೂ ಚಿತ್ರದ ಕ್ಲೈಮ್ಯಾಕ್ಸ್ ಅತ್ಯದ್ಭುತ ಎಂದು ವಿವೇಕ್ ಅಗ್ನಿಹೋತ್ರಿ ಕಾಂತಾರ ಚಿತ್ರಕ್ಕೆ ಫುಲ್ ಮಾರ್ಕ್ಸ್ ನೀಡಿದರು.
ರಿಷಬ್ ಮಾಸ್ಟರ್ ಪೀಸ್
ದೀಪಾವಳಿ ಹಬ್ಬವನ್ನು ಮುಗಿಸಿ ಮೊದಲು ಕಾಂತಾರಾ ಚಿತ್ರವನ್ನು ವೀಕ್ಷಿಸಿ, ಚಿತ್ರದ ಕಥೆ, ಸಂಗೀತ ನಿರ್ದೇಶನ, ಛಾಯಾಗ್ರಹಣ ಎಲ್ಲವೂ ಅತ್ಯದ್ಭುತ ಎಂದು ವಿವೇಕ್ ಅಗ್ನಿಹೋತ್ರಿ ಹೇಳಿದರು. ಇಂಥ ಅತ್ಯದ್ಭುತ ಚಿತ್ರವನ್ನು ವೀಕ್ಷಿಸಿ ತುಂಬಾ ದಿನಗಳಾಗಿವೆ, ನಾನು ಕಂಡ ಸಾರ್ವಕಾಲಿಕ ಅತ್ಯುತ್ತಮ ಚಿತ್ರಗಳಲ್ಲಿ ಇದೂ ಸಹ ಒಂದು, ಇಂಥ ಚಿತ್ರವನ್ನು ಮಾಡಿದ ರಿಷಬ್ ಶೆಟ್ಟಿ ನಿಜಕ್ಕೂ ಮಾಸ್ಟರ್ ಪೀಸ್ ಎಂದು ಕೊಂಡಾಡಿದರು.