Don't Miss!
- Lifestyle 10 ವರ್ಷದಿಂದ ನಿರಂತರ ರಕ್ತ ಕುಡಿಯುತ್ತಿರುವ ಯುವತಿ..! ರಕ್ತವೇ ಟೀ, ಅದರಲ್ಲೇ ಊಟ..!
- News Rain Alert: ಕೊಡಗಿನ ವಿವಿಧಡೆ ಮಳೆ ಅಬ್ಬರ: ಮೋಡ ಕವಿದ ವಾತಾವರಣ
- Automobiles Brezza: ಮಾರುತಿ ಸುಜುಕಿ ಬ್ರೆಝಾ ಖರೀದಿಸಬೇಕೇ.. ಆನ್ ರೋಡ್ ಬೆಲೆ ಎಷ್ಟು? EMI ಏನು?
- Sports IPL 2024: RCB ವಿರುದ್ಧ ಪಂದ್ಯಕ್ಕೆ KKRನ ಆಡುವ 11ರ ಬಳಗ ಮರೆತ ಶ್ರೇಯಸ್ ಅಯ್ಯರ್
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಂಚನೆ ಪ್ರಕರಣ: ಕಪಿಲ್ ಶರ್ಮಾಗೆ ಮುಂಬೈ ಪೊಲೀಸರ ಸಮನ್ಸ್
ಖ್ಯಾತ ಕಮಿಡಿಯನ್, ನಟ ಕಪಿಲ್ ಶರ್ಮಾ ಗೆ ಮುಂಬೈನ ಕ್ರೈಂ ಬ್ರ್ಯಾಂಚ್ ಪೊಲೀಸರು ಸಮನ್ಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಕೆಲವು ದಿನಗಳ ಹಿಂದಷ್ಟೆ ಕಮಿಡಿಯನ್ ಕಪಿಲ್ ಶರ್ಮಾ, ಕಾರ್ ಡಿಸೈನರ್ ಒಬ್ಬರ ಮೇಲೆ ವಂಚನೆ ಪ್ರಕರಣ ದಾಖಲಿಸಿದ್ದರು. ಇದೇ ಪ್ರಕರಣ ಸಂಬಂಧ ಕಪಿಲ್ ಶರ್ಮಾ ಅವರನ್ನು ವಿಚಾರಣೆಗೆ ಕರೆದಿದ್ದಾರೆ ಪೊಲೀಸರು.
ಕಾರು ಡಿಸೈನ್ ಸಂಸ್ಥೆ ಡಿಸಿ ಡಿಸೈನ್ ಸ್ಟುಡಿಯೋ ಮಾಲೀಕ ದಿಲಿಪ್ ಛಬ್ರಿಯಾ ವಿರುದ್ಧ ಪ್ರಕರಣ ದಾಖಲಿಸಿದ್ದರು ಕಪಿಲ್ ಶರ್ಮಾ. ದಿಲಿಪ್ ಅನ್ನು ಬಂಧಿಸಿದ್ದ ಪೊಲೀಸರು ಹಲವು ಕಾರುಗಳನ್ನು ವಶಪಡಿಸಿಕೊಂಡಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಕಪಿಲ್ ಶರ್ಮಾ ಅವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ.
ಕೆಲವು ತಿಂಗಳ ಹಿಂದೆ ಕಪಿಲ್ ಶರ್ಮಾ, ದಿಲಿಪ್ ಗೆ ವ್ಯಾನಿಟಿ ವ್ಯಾನ್ ಒಂದನ್ನು ನಿರ್ಮಿಸಿಕೊಡುವಂತೆ ಹಣ ಪಾವತಿಸಿದ್ದರು. ಆದರೆ ದಿಲಿಪ್ ವ್ಯಾನಿಟಿ ವಾಹನ ಮಾಡಿಕೊಟ್ಟಿರಲಿಲ್ಲ. ಈ ಪ್ರಕರಣ ಸಂಬಂಧ ಕಪಿಲ್ ಮತ್ತು ದಿಲೀಪ್ ನಡುವೆ ವಾಗ್ವಾದ ಆಗಿದ್ದು, ನಂತರ ಕಪಿಲ್ ಶರ್ಮಾ, ದಿಲೀಪ್ ವಿರುದ್ಧ ದೂರು ದಾಖಲಿಸಿದ್ದರು.
ದಿಲೀಪ್ ಅನ್ನು ಬಂಧಿಸಿದ ಮುಂಬೈ ಪೊಲೀಸರು ಆತನಿಂದ ಕೆಲವು ಕಾರುಗಳನ್ನು ವಶಪಡಿಸಿಕೊಂಡಿದ್ದು, ಆತ ಕಾರುಗಳ ನೊಂದಾವಣಿಯಲ್ಲಿ ಸಹ ವಂಚನೆ ಎಸಗಿದ್ದಾನೆ ಎಂಬ ಅಂಶ ಹೊರಗೆಡವಿದ್ದಾರೆ.