Don't Miss!
- News Karnataka Weather: ಮೈಸೂರು, ಬಾಗಲಕೋಟೆ ಸೇರಿ ಎಂಟು ಜಿಲ್ಲೆಗಳಿಗೆ ತಂಪಿನ ಸುದ್ದಿ ಕೊಟ್ಟ ಹವಾಮಾನ ಇಲಾಖೆ
- Finance Zero Shadow Day: ಬೆಂಗಳೂರಿನಲ್ಲಿ ಇಂದು ಪ್ರಕೃತಿಯ ಅಚ್ಚರಿ
- Technology ಇಂದು ವಿವೋ T3x 5G ಸ್ಮಾರ್ಟ್ಫೋನ್ ಫಸ್ಟ್ ಸೇಲ್; ಬೆಲೆ 13,499ರೂ.!
- Automobiles Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Lifestyle ಹೋಟೆಲ್ ರುಚಿಯ ಪನೀರ್ ಪೆಪ್ಪರ್ ಫ್ರೈ ಮನೆಯಲ್ಲೇ ಮಾಡಿ..! 10 ನಿಮಿಷದಲ್ಲಿ ರೆಡಿ..!
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ಕಾರ್ತಿಕ್ ಆರ್ಯನ್ ನಿಂದ ಕರಣ್ ಜೋಹರ್ ಧರ್ಮ ಸಂಸ್ಥೆಗೆ ಇಷ್ಟೊಂದು ನಷ್ಟ ಆಗಿದ್ಯಾ?
ಬಾಲಿವುಡ್ ಸ್ಟಾರ್ ನಟರ ಸಾಲಿನಲ್ಲಿರುವ ನಟ ಕಾರ್ತಿಕ್ ಆರ್ಯನ್ ಬಹುನಿರೀಕ್ಷೆಯ ದೋಸ್ತಾನ-2 ಸಿನಿಮಾದಿಂದ ಹೊರಬಂದಿದ್ದಾರೆ. ಖ್ಯಾತ ನಿರ್ಮಾಪಕ ಮತ್ತು ನಿರ್ದೇಶಕ ಕರಣ್ ಜೋಹರ್ ಅವರ ಧರ್ಮ ಪ್ರೊಡಕ್ಷನ್ ನಲ್ಲಿ ಮೂಡಿಬರುತಿದ್ದ ಈ ಸಿನಿಮಾದಿಂದ ಕಾರ್ತಿಕ್ ಆರ್ಯನ್ ನನ್ನು ಹೊರಹಾಕಿದ್ದಾರೆ.
ಈ ಬಗ್ಗೆ ಧರ್ಮ ಸಂಸ್ಥೆ ಅಧಿಕೃತವಾಗಿ ಮಾಹಿತಿ ಬಹಿರಂಗ ಪಡಿಸಿದೆ. ವೃತ್ತಿಪರತೆ ಇಲ್ಲ ಎನ್ನುವ ಕಾರಣ ಕಾರ್ತಿಕ್ ಆರ್ಯನ್ ಅವರನ್ನು ಸಿನಿಮಾದಿಂದ ಹೊರಹಾಕಲಾಗಿದೆ ಎನ್ನುವ ಮಾಹಿತಿ ಕೇಳಿಬರುತ್ತಿದೆ. ಸಿನಿಮಾದ ಸ್ಕ್ರಿಪ್ಕ್ ವಿಚಾರದಲ್ಲಿ ಹೆಚ್ಚು ಕೈಯಾಡಿಸುತ್ತಿದ್ದರು ಎನ್ನುವ ಆರೋಪ ಕೇಳಿಬರುತ್ತಿದೆ.
ಈ ಬಗ್ಗೆ ಬಾಲಿವುಡ್ ನಲ್ಲಿ ಸಾಕಷ್ಟು ಚರ್ಚೆ ನಡೆಯುತ್ತಿದ್ದು, ತರಹವೇವಾರಿ ಮಾತುಗಳು ಕೇಳಿಬರುತ್ತಿವೆ. ಈ ನಡುವೆ ಕಾರ್ತಿಕ್ ಆರ್ಯನ್ ನಿಂದ ಧರ್ಮ ಸಂಸ್ಥೆಗೆ ಕೋಟಿ ಕೋಟಿನಷ್ಟವಾಗಿದೆ ಎನ್ನುವ ಸುದ್ದಿ ಹೊರಬಿದ್ದಿದೆ. ಆಂಗ್ಲ ವೆಬ್ ಸೈಟ್ ಒಂದು ವರದಿ ಮಾಡಿರುವ ಪ್ರಕಾರ ಕಾರ್ತಿಕ್ ಆರ್ಯನ್ ನಿಂದ ಬರೋಬ್ಬರಿ 20 ಕೋಟಿ ರೂ. ನಷ್ಟವಾಗಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ.
ಬಾಲಿವುಡ್ ನ ಅತೀ ದೊಡ್ಡ ಪ್ರೊಡಕ್ಷನ್ ಕಂಪನಿಗಳಲ್ಲಿ ಒಂದಾಗಿರುವ ಧರ್ಮ ಸಂಸ್ಥೆಗೆ ಈ ನಷ್ಟ ದೊಡ್ಡದೇನಲ್ಲ. ಆದರೆ ಕಾರ್ತಿಕ್ ಆರ್ಯನ್ ನಿಂದ ಆಗಿರುವುದು ಸಿನಿಮಾಗೆ ತೊಂದರೆ ಆಗಿದೆ ಎನ್ನಲಾಗುತ್ತಿದೆ. ಇಷ್ಟು ದೊಡ್ಡ ಮೊತ್ತ ನಷ್ಟವಾಗುತ್ತೆ ಎಂದು ಗೊತ್ತಿದ್ದರೂ ಕಾರ್ತಿಕ್ ಆರ್ಯನನ್ನು ಸಿನಿಮಾದಿಂದ ಹೊರಹಾಕಿರುವುದು ಅಚ್ಚರಿ ಮೂಡಿಸಿದೆ.
ದೋಸ್ತಾನ-2 ಸಿನಿಮಾ ಸೆಟ್ಟೇರಿ ಎರಡು ವರ್ಷಗಳಾಗಿದೆ. ಈಗಾಗಲೇ ಕೆಲವು ದೃಶ್ಯಗಳ ಚಿತ್ರೀಕರಣ ನಡೆದಿದೆ. ಆದರೀಗ ಮತ್ತೆ ಹೊಸದಾಗಿ ಚಿತ್ರೀಕರಣ ಮಾಡಬೇಕಾಗಿದೆ. ಕಾರ್ತಿಕ್ ಜಾಗಕ್ಕೆ ಯಾರು ಎಂಟ್ರಿ ಕೊಡುತ್ತಾರೆ ಎನ್ನುವುದು ಮತ್ತೊಂದು ಕುತೂಹಲ ಮೂಡಿದೆ.
Recommended Video
ದೋಸ್ತಾನ-2 ಸಿನಿಮಾದಲ್ಲಿ ಕಾರ್ತಿಕ್ ಆರ್ಯನ್ ಗೆ ನಾಯಕಿಯಾಗಿ ಜಾಹ್ನವಿ ಕಪೂರ್ ಕಾಣಿಸಿಕೊಳ್ಳುತ್ತಿದ್ದಾರೆ. ಕಾಲಿನ್ ಡಿ ಕುನ್ಹಾ ಸಾರಥ್ಯದಲ್ಲಿ ಸಿನಿಮಾ ಮೂಡಿಬರುತ್ತಿದೆ. ದೋಸ್ತಾನ ಮೊದಲ ಭಾಗದಲ್ಲಿ ಪ್ರಿಯಾಂಕಾ ಚೋಪ್ರಾ ನಾಯಕಿಯಾಗಿ ಮಿಂಚಿದ್ದರು. ಜಾನ್ ಅಬ್ರಹಾಂ ಮತ್ತು ಅಭಿಷೇಕ್ ಬಚ್ಚನ್ ಮುಖ್ಯ ಭೂಮಿಕೆಯಲ್ಲಿದ್ದರು. ದೊಡ್ಡ ಮಟ್ಟದಲ್ಲಿ ಸಕ್ಸಸ್ ಆಗಿದ್ದ ಈ ಸಿನಿಮಾದ 2ನೇ ಆವೃತ್ತಿ ತೆರೆಮೇಲೆ ಬರಲು ಸಜ್ಜಾಗಿತ್ತು. ಆದರೀಗ ನಾಯಕನ ಬದಲಾವಣೆಯಿಂದ ಮತ್ತಷ್ಟು ತಡವಾಗುವ ಸಾಧ್ಯತೆ ಇದೆ.