Don't Miss!
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Sports RCB vs KKR: ಗೇಮ್ ಚೇಂಜರ್ ಆಗಬಹುದು ಈ ಪ್ಲೇಯರ್ಸ್; ಈ ಆಟಗಾರರ ಮೇಲೆ ಕಣ್ಣು
- News Acid Attack: ಆಸ್ತಿ ವಿವಾದ: ಮಗನ ಮೇಲೆ 'ಆಸಿಡ್' ಎರಚಿದ ತಂದೆ
- Automobiles ಜೀವದ ಗೆಳೆಯನಿಗೆ ಸರ್ಪ್ರೈಸ್ ಆಗಿ 'ಬೈಕ್' ಉಡುಗೊರೆ ನೀಡಿದ ವಧು.. ಆತನ ಸಂತೋಷಕ್ಕೆ ಪಾರವೇ ಇರಲಿಲ್ಲ!
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕರೀನಾಗೆ ಮಧುಚಂದ್ರ ಮಂಚದಲ್ಲಿ ರಸಹೀನ ರಾತ್ರಿ
ಕಾರಣ ಇಷ್ಟೇ. ಪ್ರೇಮಿಗಳ ದಿನದಂದು ಅವರು ತಮ್ಮ ಪತಿ ಸೈಫ್ ಆಲಿ ಖಾನ್ ಅವರೊಂದಿಗೆ ಇರಲ್ಲವಂತೆ. ಅಯ್ಯೋ ಪಾಪ. ಈ ಬಾರಿಯ ಪ್ರೇಮಿಗಳ ದಿನಕ್ಕೆ ಸೈಫ್ ನನಗಾಗಿ ಒಲವಿನ ಉಡುಗೊರೆಯೊಂದನ್ನು ಸಿದ್ಧಮಾಡಿಕೊಂಡಿದ್ದಾರೆ. ಆದರೆ ನಾನು ಮಾತ್ರ ಅವರೊಂದಿಗೆ ಆ ದಿನ ಎಂಜಾಯ್ ಮಾಡಕ್ಕೆ ಆಗುತ್ತಿಲ್ಲ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.
ಪ್ರೇಮಿಗಳ ದಿನಾಚರಣೆಯಂದು ನಾನು ಸತ್ಯಾಗ್ರಹ ಚಿತ್ರದಲ್ಲಿ ಶೂಟಿಂಗ್ ನಲ್ಲಿರುತ್ತೇನೆ. ಹಾಗಾಗಿ ಅಂದು ಅವರೊಂದಿಗೆ ಬೆರೆಯಲು ಸಾಧ್ಯವಾಗುತ್ತಿಲ್ಲ. ರಾಜಕೀಯ ಥ್ರಿಲ್ಲರ್ ಕಥಾಹಂದರದ ಈ ಚಿತ್ರಕ್ಕೆ ಪ್ರಕಾಶ್ ಝಾ ಆಕ್ಷನ್ ಕಟ್ ಹೇಳುತ್ತಿದ್ದಾರೆ.
ಭೋಪಾಲ್ ನಲ್ಲಿ ಈ ಚಿತ್ರದ ಚಿತ್ರೀಕರಣ ನಡೆಯಲಿದೆ. ಈ ಬಾರಿಯ ಪ್ರೇಮಿಗಳ ದಿನವನ್ನು ನಾನು ಅಮಿತ್ ಜಿ, ಅಜಯ್ ದೇವಗನ್ ಹಾಗೂ ಪ್ರಕಾಶ್ ಝಾ ಜೊತೆ ಸೆಲೆಬ್ರೇಟ್ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ ಕರೀನಾ.
ಹಾಗಾಗಿ ತಮ್ಮ ಪಾಲಿಗೆ ಈ ಬಾರಿಯ ಪ್ರೇಮಿಗಳ ದಿನ ಅಷ್ಟೇನು ನಿರಾಶಾದಾಯಕವೇನಲ್ಲ ಎನ್ನುತ್ತಾರೆ ಕರೀನಾ. ಈ ಚಿತ್ರದ ಪಾತ್ರವರ್ಗದಲ್ಲಿ ಅಮಿತಾಬ್ ಬಚ್ಚನ್, ಅರ್ಜುನ್ ರಾಂಪಾಲ್, ಮನೋಜ್ ಬಾಜ್ ಪೇಯಿ ಮುಂತಾದವರು ಇದ್ದಾರೆ.