Don't Miss!
- News DK Shivakumar: ಕಾಂಗ್ರೆಸ್ ಭವಿಷ್ಯದಲ್ಲಿ ನನ್ನನ್ನು ಸಿಎಂ ಮಾಡಲಿದೆ
- Automobiles ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಟ್ವೀಟ್: ರಾಜ್ಯ ಹೈಕೋರ್ಟ್ನಲ್ಲಿ ಕಂಗನಾ ನಿರಾಳ
ರೈತರನ್ನು ಭಯೋತ್ಪಾದಕರು ಎಂದು ಕರೆದಿದ್ದ ನಟಿ ಕಂಗನಾ ರನೌತ್ ವಿರುದ್ಧ ದೇಶದ ಹಲವೆಡೆ ಪ್ರಕರಣಗಳು ದಾಖಲಾಗಿದ್ದವು. ರಾಜ್ಯದಲ್ಲಿಯೂ ಸಹ ದಾಖಲಾಗಿತ್ತು. ಆದರೆ ಈಗ ಇದೇ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಕಂಗನಾ ಪರವಾಗಿ ಆದೇಶ ನೀಡಿದೆ.
ಹೊಸ ರೈತ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ವಿರೋಧಿಸಿ ಟ್ವೀಟ್ ಮಾಡಿದ್ದ ಕಂಗನಾ, ರೈತರನ್ನು ಭಯೋತ್ಪಾದಕರಿಗೆ ಹೋಲಿಸಿದ್ದರು. ಈ ಟ್ವೀಟ್ಗೆ ಭಾರಿ ವಿರೋಧ ವ್ಯಕ್ತವಾಗಿತ್ತು.
ರೈತರನ್ನು ಭಯೋತ್ಪಾದಕರೆಂದ ಕಂಗನಾ ವಿರುದ್ಧ ಬೆಳಗಾವಿಯಲ್ಲಿ ದೂರು
ತುಮಕೂರು ಜೆಎಂಎಫ್ಸಿಯಲ್ಲಿ ವಕೀಲರೊಬ್ಬರು ಕಂಗನಾ ವಿರುದ್ಧ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು, ಕಂಗನಾ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಪೊಲಿಸರಿಗೆ ಸೂಚನೆ ನೀಡಿತ್ತು.
ಆದರೆ ಈಗ ಕಂಗನಾ ವಿರುದ್ಧ ಎಫ್ಐಆರ್ ದಾಖಲು ಮಾಡುವುದಕ್ಕೆ ತಡೆ ನೀಡಿರುವ ಕರ್ನಾಟಕ ಹೈಕೋರ್ಟ್, ಅರ್ಜಿಯನ್ನು ಪುನರ್ ವಿಚಾರಣೆ ಮಾಡುವಂತೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸೂಚಿಸಿದೆ.
''ಆದೇಶ ನೀಡಿರುವ ಮ್ಯಾಜಿಸ್ಟ್ರೇಟರು, ಅಪರಾಧ ಎಸಗಿರುವುದನ್ನು ಧೃಡೀಕರಿಸುವ ಯಾವ ಅಂಶವೂ ದೂರಿನಲ್ಲಿ ಇಲ್ಲ ಎಂಬುದನ್ನು ಪರಿಗಣಿಸಿಲ್ಲ. ಅರ್ಜಿದಾರರು ದೂರಿನಲ್ಲಿ ಸಲ್ಲಿಸಿರುವ ವಿಷಯಗಳು ಅಪರಾಧ ಎಂದು ಪರಿಗಣಿಸಲ್ಪಡಬಲ್ಲುದೇ ಎಂಬುದನ್ನು ಮತ್ತೊಮ್ಮೆ ಪುನರ್ ವಿಮರ್ಶಿಸಬೇಕಾಗಿದೆ'' ಎಂದು ಹೈಕೋರ್ಟ್ ನ್ಯಾಯಾಧೀಶ ಜಸ್ಟಿಸ್ ಎಚ್.ಪಿ.ಸಂದೇಶ್ ಹೇಳಿದ್ದಾರೆ.
ಪ್ರತಿಭಟನಾಕಾರರನ್ನು ಗೇಲಿ ಮಾಡಿದ ಕಂಗನಾಗೆ ಚಳಿ ಬಿಡಿಸಿದ ನಟ ದಿಲ್ಜೀತ್
Recommended Video
ತುಮಕೂರು ಜೆಎಂಎಫ್ಸಿಯಲ್ಲಿ ರಮೇಶ್ ನಾಯಕ್ ಎಂಬ ವಕೀಲರು 'ಕಂಗನಾ ಅವರು ತಮ್ಮ ಟ್ವೀಟ್ನಿಂದ ಸಮುದಾಯಗಳ ನಡುವೆ ದ್ವೇಷ ಮೂಡಿಸುವ ಯತ್ನ ಮಾಡುತ್ತಿದ್ದಾರೆ. ರೈತರನ್ನು ಭಯೋತ್ಪಾದಕರು ಎಂದು ಕರೆದಿದ್ದಾರೆ' ಎಂದು ದೂರು ದಾಖಲಿಸಿದ್ದರು. ಕಂಗನಾ ಪರವಾಗಿ ವಾದ ಮಾಡಿದ ರಿಜ್ವಾನ್ ಸಿದ್ಧಿಖಿ ಅವರು ವಾದ ಮಂಡಿಸಿದ್ದರು.