Just In
Don't Miss!
- Automobiles
ಎಲೆಕ್ಟ್ರಿಕ್ ವಾಹನಗಳ ಖರೀದಿ ಹೆಚ್ಚಿಸಲು ಹೊಸ ಯೋಜನೆ ಚಾಲನೆ ನೀಡಿದ ಕ್ರೆಡರ್
- News
ಪ್ರಶ್ನೆ ಪತ್ರಿಕೆ ಸಮೇತ ಸಿಸಿಬಿ ಬಲೆಗೆ ಬಿದ್ದ ಲೀಕಾಸುರರು !
- Sports
ಐಎಸ್ಎಲ್: ಪ್ಲೇ ಆಫ್ ಕನಸಲ್ಲಿರುವ ಜೆಮ್ಷೆಡ್ಪುರಕ್ಕೆ ಹೈದರಾಬಾದ್ ಸವಾಲು
- Lifestyle
ಮಕರ ರಾಶಿಗೆ ಶುಕ್ರನ ಸಂಚಾರ: ಯಾವೆಲ್ಲಾ ರಾಶಿಗೆ ಶುಕ್ರದೆಸೆ
- Finance
ಮೂರನೇ ತ್ರೈಮಾಸಿಕದಲ್ಲಿ ಭಾರೀ ಲಾಭಗಳಿಸಿದ ರಿಲಯನ್ಸ್ ಇಂಡಸ್ಟ್ರೀಸ್
- Education
NIT Recruitment 2021: ಜ್ಯೂನಿಯರ್ ರಿಸರ್ಚ್ ಫೆಲೋ ಜೆಆರ್ಎಫ್ಹುದ್ದೆಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ನಟಿ ಕಂಗನಾ ವಿರುದ್ಧ ಕರ್ನಾಟಕ ಕಿಸಾನ್ ಕಾಂಗ್ರೆಸ್ ದೂರು
ಬಾಲಿವುಡ್ ನಟಿ ಕಂಗನಾ ರಣಾವತ್ ಸದಾ ವಿವಾದಗಳ ಮೂಲಕವೇ ಸುದ್ದಿಯಲ್ಲಿರುತ್ತಾರೆ. ವಿವಾದಾತ್ಮಕ ಹೇಳಿಕೆಗಳಿಂದ ಇತ್ತೀಚಿಗೆ ಕಂಗನಾ ವಿರುದ್ಧ ಸಾಕಷ್ಟು ದೂರುಗಳು ದಾಖಲಾಗಿದೆ. ಇದೀಗ ಬಾಲಿವುಡ್ ಕ್ವೀನ್ ನಟಿಯ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಕರ್ನಾಟಕ ಕಿಸಾನ್ ಕಾಂಗ್ರೆಸ್, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಗೆ ದೂರು ನೀಡಿದೆ.
ಕಿಸಾನ್ ಕಾಂಗ್ರೆಸ್ ನ ಅಧ್ಯಕ್ಷ ಸಚಿನ್ ಮಿಗಾ ದೂರು ನೀಡಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಬಗ್ಗೆ ನಟಿ ಕಂಗನಾ ಕಂಗನಾ ನೆಗೆಟಿವ್ ಟ್ವೀಟ್ ಮಾಡಿ ವಿವಾದ ಮೈಮೇಲೆ ಎಳೆದುಕೊಂಡಿದ್ದರು. ಪ್ರತಿಭಟನಾಗಾರ್ತಿ ಮಹಿಂದರ್ ಕೌರ್ ಕುರಿತಂತೆ ಈಕೆ 100 ರೂಪಾಯಿಗೆ ಎಲ್ಲರಿಗೂ ಲಭ್ಯವಾಗುತ್ತಾಳೆ ಎಂದು ಹೇಳಿಕೆ ನೀಡಿದ್ದರು. ಇದು ಭಾರಿ ವಿವಾದಕ್ಕೆ ಕಾರಣವಾಗಿದ್ದು, ಕಂಗನಾ ಹೇಳಿಕೆಯನ್ನು ಅನೇಕರು ಖಂಡಿಸಿದ್ದರು.
ಕಂಗನಾ ಜೊತೆ ಜಗಳವಾಡಿ 4 ಲಕ್ಷ ಜನರನ್ನು ಸಂಪಾದಿಸಿದ ದಿಲ್ಜೀತ್!
ಇದೀಗ ಕಿಸಾನ್ ಕಾಂಗ್ರೆಸ್ ದೂರಿನಲ್ಲಿ ಕಂಗನಾ ಮಹಿಳೆಯ ಮಾನ ಹಾನಿ ಮಾಡಿದ್ದಾರೆ. ಈ ಹಿಂದೆ ರೈತರನ್ನು ಭಯೋತ್ಪಾದಕರು ಎಂದು ನಿಂದಿಸಿದ್ದರು. ಪದೇ ಪದೇ ರೈತರ ವಿರುದ್ಧ ಅಸಂಬದ್ದ ಹೇಳಿಕೆ ನೀಡುತ್ತಿರುವ ಕಂಗನಾ ವಿರುದ್ದ ಸೂಕ್ತ ಕ್ರಮಕೈಗೊಳಬೇಕು ಎಂದು ದೂರಿನಲ್ಲಿ ದಾಖಲಿಸಿದ್ದಾರೆ.
ಕಂಗನಾ ವಿರುದ್ಧ ಸೆಕ್ಷನ್ 509 ಹಾಗೂ 304ರ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಕರ್ನಾಟಕ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮಿಗಾ ಆಗ್ರಹಿಸಿದ್ದಾರೆ.