Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ನಟಿ ಕಂಗನಾ ವಿರುದ್ಧ ಕರ್ನಾಟಕ ಕಿಸಾನ್ ಕಾಂಗ್ರೆಸ್ ದೂರು
ಬಾಲಿವುಡ್ ನಟಿ ಕಂಗನಾ ರಣಾವತ್ ಸದಾ ವಿವಾದಗಳ ಮೂಲಕವೇ ಸುದ್ದಿಯಲ್ಲಿರುತ್ತಾರೆ. ವಿವಾದಾತ್ಮಕ ಹೇಳಿಕೆಗಳಿಂದ ಇತ್ತೀಚಿಗೆ ಕಂಗನಾ ವಿರುದ್ಧ ಸಾಕಷ್ಟು ದೂರುಗಳು ದಾಖಲಾಗಿದೆ. ಇದೀಗ ಬಾಲಿವುಡ್ ಕ್ವೀನ್ ನಟಿಯ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಕರ್ನಾಟಕ ಕಿಸಾನ್ ಕಾಂಗ್ರೆಸ್, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಗೆ ದೂರು ನೀಡಿದೆ.
ಕಿಸಾನ್ ಕಾಂಗ್ರೆಸ್ ನ ಅಧ್ಯಕ್ಷ ಸಚಿನ್ ಮಿಗಾ ದೂರು ನೀಡಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಬಗ್ಗೆ ನಟಿ ಕಂಗನಾ ಕಂಗನಾ ನೆಗೆಟಿವ್ ಟ್ವೀಟ್ ಮಾಡಿ ವಿವಾದ ಮೈಮೇಲೆ ಎಳೆದುಕೊಂಡಿದ್ದರು. ಪ್ರತಿಭಟನಾಗಾರ್ತಿ ಮಹಿಂದರ್ ಕೌರ್ ಕುರಿತಂತೆ ಈಕೆ 100 ರೂಪಾಯಿಗೆ ಎಲ್ಲರಿಗೂ ಲಭ್ಯವಾಗುತ್ತಾಳೆ ಎಂದು ಹೇಳಿಕೆ ನೀಡಿದ್ದರು. ಇದು ಭಾರಿ ವಿವಾದಕ್ಕೆ ಕಾರಣವಾಗಿದ್ದು, ಕಂಗನಾ ಹೇಳಿಕೆಯನ್ನು ಅನೇಕರು ಖಂಡಿಸಿದ್ದರು.
ಕಂಗನಾ ಜೊತೆ ಜಗಳವಾಡಿ 4 ಲಕ್ಷ ಜನರನ್ನು ಸಂಪಾದಿಸಿದ ದಿಲ್ಜೀತ್!
ಇದೀಗ ಕಿಸಾನ್ ಕಾಂಗ್ರೆಸ್ ದೂರಿನಲ್ಲಿ ಕಂಗನಾ ಮಹಿಳೆಯ ಮಾನ ಹಾನಿ ಮಾಡಿದ್ದಾರೆ. ಈ ಹಿಂದೆ ರೈತರನ್ನು ಭಯೋತ್ಪಾದಕರು ಎಂದು ನಿಂದಿಸಿದ್ದರು. ಪದೇ ಪದೇ ರೈತರ ವಿರುದ್ಧ ಅಸಂಬದ್ದ ಹೇಳಿಕೆ ನೀಡುತ್ತಿರುವ ಕಂಗನಾ ವಿರುದ್ದ ಸೂಕ್ತ ಕ್ರಮಕೈಗೊಳಬೇಕು ಎಂದು ದೂರಿನಲ್ಲಿ ದಾಖಲಿಸಿದ್ದಾರೆ.
Recommended Video
ಕಂಗನಾ ವಿರುದ್ಧ ಸೆಕ್ಷನ್ 509 ಹಾಗೂ 304ರ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಕರ್ನಾಟಕ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮಿಗಾ ಆಗ್ರಹಿಸಿದ್ದಾರೆ.