Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ಸುಶಾಂತ್ ಸಿಂಗ್ ತಂದೆ ಕೆಕೆ ಸಿಂಗ್ ಆಸ್ಪತ್ರೆಗೆ ದಾಖಲು
ಪುತ್ರ ಸುಶಾಂತ್ ಸಿಂಗ್ ನನ್ನು ಕಳೆದುಕೊಂಡು ದುಃಖದಲ್ಲಿದ್ದ ತಂದೆ ಕೆಕೆ ಸಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ನ್ಯಾಯಕ್ಕಾಗಿ ಸುಮಾರು 6 ತಿಂಗಳಿಂದ ಕಾಯುತ್ತಿರುವ ಸುಶಾಂತ್ ಸಿಂಗ್ ತಂದೆ ಹೃದಯ ಸಂಬಂಧಿ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಹರಿಯಾಣದ ಫರಿದಾಬಾದ್ ನ ಆಸ್ಪತ್ರೆಯಲ್ಲಿ ಕಿಕಿ ಸಿಂಗ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಸದ್ಯ ಕೆಕೆ ಸಿಂಗ್ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನುವ ಸುದ್ದಿ ಕೇಳಿಬರುತ್ತಿದೆ. ಇಬ್ಬರು ಪುತ್ರಿಯರಾದ ಪ್ರಿಯಾಂಕಾ ಮತ್ತು ಮೀತು ಸಿಂಗ್ ತಂದೆಯ ಜೊತೆ ಆಸ್ಪತ್ರೆಯಲ್ಲೇ ಇದ್ದು, ಅಪ್ಪನನ್ನು ನೋಡಿಕೊಳ್ಳುತ್ತಿದ್ದಾರೆ. ಕೆಕೆ ಸಿಂಗ್ ಆಸ್ಪತ್ರೆಯಲ್ಲಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಡ್ರಗ್ಸ್ ಕೇಸ್: ರಿಯಾ ಚಕ್ರವರ್ತಿಗೆ ಡ್ರಗ್ಸ್ ಸರಬರಾಜು ಮಾಡ್ತಿದ್ದ ವ್ಯಕ್ತಿ ಅರೆಸ್ಟ್
ಫೋಟೋ ವೈರಲ್ ಆಗುತ್ತಿದ್ದಂತೆ ಅಭಿಮಾನಿಗಳಿಗೆ ಆಘಾತವುಂಟಾಗಿದೆ. ಬಳಿಕ ಶೀಘ್ರ ಗುಣಮುಖರಾಗುವಂತೆ ಪ್ರಾರ್ಥನೆ ಮಾಡುತ್ತಿದ್ದಾರೆ. ಇನ್ನು ಕೆಲವರು ಕೆಕೆ ಸಿಂಗ್ ನಗುತ್ತ ಇರುವ ಫೋಟೋ ನೋಡಿ ಸಮಾಧಾನವಾಯಿತು ಎಂದು ಕೇಳಿಕೊಳ್ಳುತ್ತಿದ್ದಾರೆ.
ನಟ ಸುಶಾಂತ್ ಸಿಂಗ್ ಜೂನ್ 14ರಂದು ಮುಂಬೈನ ಬಾಂದ್ರಾ ಅಪಾರ್ಟ್ಮೆಂಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಸುಶಾಂತ್ ನಿಧನಹೊಂದಿ 6 ತಿಂಗಳು ಕಳೆದರು ಸಾವಿನ ಹಿಂದಿನ ಕಾರಣವೇನು ಎನ್ನುವುದು ಬಹಿರಂಗವಾಗಿಲ್ಲ. ಸುಶಾಂತ್ ಸಾವಿನ ಪ್ರಕರಣವನ್ನು ಸಿಬಿಐ ತನಿಖೆ ನಡೆಸುತ್ತಿದೆ. ಸುಶಾಂತ್ ಸಾವಿನ ತನಿಖೆ ವೇಳೆ ಡ್ರಗ್ಸ್ ಪ್ರಕರಣ ಸಹ ಬಯಲಿಗೆ ಬಂದಿದ್ದು, ಡ್ರಗ್ಸ್ ಮಾಫಿಯಾ ವಿಚಾರವಾಗಿ ಬಾಲಿವುಡ್ ನಲ್ಲಿ ಸಾಕಷ್ಟು ಮಂದಿಯನ್ನು ಎನ್ ಸಿ ಬಿ ವಿಚಾರಣೆಗೆ ಒಳಪಡಿಸಿದೆ.
Recommended Video
ಸುಶಾಂತ್ ಸಿಂಗ್ ಗಾಗಿ ಡ್ರಗ್ಸ್ ಖರೀದಿ ಮಾಡುತ್ತಿದ್ದ ಆರೋಪದ ಮೇರೆಗೆ ಸುಶಾಂತ್ ಪ್ರೇಯಸಿ ರಿಯಾ ಚಕ್ರವರ್ತಿ ಅವರನ್ನು ಅರೆಸ್ಟ್ ಮಾಡಲಾಗಿತ್ತು. ಇದೀಗ ಜಾಮೀನಿನ ಮೇಲೆ ಹೊರಬಂದಿದ್ದಾರೆ.