Don't Miss!
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Lifestyle ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- News ಮೈಸೂರು: ಪ್ರಧಾನಿ ಮೋದಿ ಕುರಿತಾದ ಹಾಡು ಶೇರ್ ಮಾಡಿ ಎಂದಿದ್ದಕ್ಕೆ ಯುವಕನ ಮೇಲೆ ಹಲ್ಲೆ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರರಂಗದ ದಿಗ್ಗಜ ದಿಲೀಪ್ ಕುಮಾರ್ ಗೆ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ
ಭಾರತೀಯ ಚಿತ್ರರಂಗದ ಜೀವಂತ ದಂತಕಥೆ, ಹಿಂದಿ ಚಿತ್ರರಂಗದ ಎವರ್ ಗ್ರೀನ್ ನಟ ದಿಲೀಪ್ ಕುಮಾರ್ ಅವರು ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಂಡ ಬೆನ್ನಲ್ಲೇ ಇದೀಗ ತಮ್ಮ ಮನೆಯಲ್ಲೇ ಪದ್ಮವಿಭೂಷಣ ಪ್ರಶಸ್ತಿ ಸ್ವೀಕರಿಸಿದ್ದಾರೆ.
ಫಾಲ್ಕೆ ಪ್ರಶಸ್ತಿ ಪುರಸ್ಕೃತ ಹಿಂದಿ ಚಿತ್ರರಂಗದ ಹಿರಿಯ ನಟ ದಿಲೀಪ್ ಕುಮಾರ್ ಅವರ ಮನೆಗೆ ಹೋಗಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಇಂದು (ಡಿಸೆಂಬರ್ 13) ಪದ್ಮವಿಭೂಷಣ ಪ್ರಶಸ್ತಿ ಪ್ರಧಾನ ಮಾಡಿದ್ದಾರೆ.[ಅಭಿನೇತೃ ದಿಲೀಪ್ ಕುಮಾರ್ ಬಗೆಗಿನ ಸುದ್ದಿ ನಿಜವೇ?]
Tearful
moment
when
the
award
was
in
my
hands.
How
happy
and
proud
my
family
was.
Indeed
Allah's
mercy
and
blessing.
pic.twitter.com/POL2I4xPxZ
—
Dilip
Kumar
(@TheDilipKumar)
December
13,
2015
2015ರ ಜನವರಿ 25 ರಂದು ಗಣರಾಜ್ಯೋತ್ಸವದ ಮುನ್ನಾ ದಿನ ದಿಲೀಪ್ ಕುಮಾರ್, ಅಮಿತಾಭ್ ಬಚ್ಚನ್ ಮತ್ತು ಇತರ ಕೆಲವು ಗಣ್ಯರಿಗೆ ಕೇಂದ್ರ ಸರ್ಕಾರ ಪದ್ಮವಿಭೂಷಣ ಪ್ರಶಸ್ತಿಯನ್ನು ಘೋಷಿಸಿತ್ತು.
ಆದರೆ ಏಪ್ರಿಲ್ ತಿಂಗಳಿನಲ್ಲಿ ರಾಷ್ಟ್ರಪತಿ ಭವನದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಪಾಲ್ಗೊಳ್ಳಲು 93 ವರ್ಷ ವಯಸ್ಸಿನ ಹಿರಿಯ ನಟ ದಿಲೀಪ್ ಕುಮಾರ್ ಅವರಿಗೆ ಸಾಧ್ಯವಾಗಿರಲಿಲ್ಲ.[ನಟ ದಿಲೀಪ್ ಕುಮಾರ್ ಗೆ ಲಘು ಹೃದಯಾಘಾತ]
1944 ರಲ್ಲಿ 'ಜವರ್ ಭತ್ತ' ಚಿತ್ರದ ಮೂಲಕ ಹಿಂದಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ದಿಲೀಪ್ ಕುಮಾರ್ ಅವರು ಹಿಂದಿ ಚಿತ್ರರಂಗ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.
ಬಾಲಿವುಡ್ ನ ಹಲವಾರು ನಟರಿಗೆ ಪ್ರೇರಣೆಯಾದ ನಟ ದಿಲೀಪ್ ಕುಮಾರ್ ಅವರು 'ಅಂದಾಜ್ (1949), ಸ್ವಷ್ ಬಕ್ಲಿಂಗ್ ಆನ್ ( 1952), ದೇವದಾಸ್ (1955), ಆಜಾದ್ (1955), ಮುಘಲ್ ಎ ಅಜಮ್ (1960) ಮತ್ತು 'ಗಂಗಾ ಜಮುನಾ' (1961) ಮುಂತಾದ ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿ ಹಿಟ್ ನಟನಾಗಿ ಹೊರಹೊಮ್ಮಿದ್ದಾರೆ.