Don't Miss!
- News
ಶಕ್ತಿ ಇರುವ ಪತಿಗೆ ಜೀವನಾಂಶ ನೀಡಿದರೆ ಸೋಂಬೇರಿತನಕ್ಕೆ ಕಾರಣವಾಗುತ್ತದೆ
- Technology
ರೆಡ್ಮಿ ಮೊಬೈಲ್ ಖರೀದಿಸುವ ಗ್ರಾಹಕರೇ, ಅವಸರ ಬೇಡಾ!..ಇಲ್ಲಿ ಗಮನಿಸಿ!
- Sports
SA 20: ಎಸ್ಎ 20 ಲೀಗ್ನ ಮೊದಲ ಶತಕ ಗಳಿಸಿದ ಆರ್ಸಿಬಿ ನಾಯಕ ಫಾಫ್ ಡು ಪ್ಲೆಸಿಸ್
- Lifestyle
Horoscope Today 25 Jan 2023: ಬುಧವಾರ: ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Automobiles
ಈ ವರ್ಷವೇ ಖರೀದಿಗೆ ಸಿಗಲಿರುವ ಟಾಪ್ 5 ಎಲೆಕ್ಟ್ರಿಕ್ ಕಾರುಗಳು
- Finance
Union Budget 2023: ತೆರಿಗೆದಾರರಿಗೆ ದೀರ್ಘಾವಧಿ ತೆರಿಗೆ ವಿನಾಯಿತಿ ಘೋಷಿಸಿ: KPMG
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
"ಇದಕ್ಕೆ ನೀವು ದಳಪತಿ ಆಗಿರೋದು.. ಬೇಗ ಪಾರ್ಟಿಯಲ್ಲಿ ಸಿಗೋಣ": ವಿಜಯ್ ಬಗ್ಗೆ ಶಾರುಕ್ ಟ್ವೀಟ್
ಶಾರುಕ್ ಖಾನ್ ನಟನೆಯ 'ಪಠಾಣ್' ಸಿನಿಮಾ ಟ್ರೈಲರ್ ರಿಲೀಸ್ ಆಗಿ ಸಖತ್ ಸದ್ದು ಮಾಡ್ತಿದೆ. ಹಿಂದಿಯಲ್ಲಿ ಮಾತ್ರವಲ್ಲದೇ ತಮಿಳು, ತೆಲುಗಿಗೂ ಸಿನಿಮಾ ಡಬ್ ಆಗಿ ತೆರೆಗೆ ಬರ್ತಿದೆ. 2 ಭಾಷೆಗಳಲ್ಲಿ ಟ್ರೈಲರ್ ರಿಲೀಸ್ ಆಗಿ ಗಮನ ಸೆಳೆದಿದೆ. ಇದೆಲ್ಲದರ ನಡುವೆ ತಮಿಳು ನಟ ದಳಪತಿ ವಿಜಯ್ ಕುರಿತು ನಟ ಶಾರುಕ್ ಆಸಕ್ತಿಕರ ಟ್ವೀಟ್ ಮಾಡಿದ್ದಾರೆ. ಇಂಗ್ಲೀಷ್ ಮಾತ್ರವಲ್ಲದೇ ತಮಿಳಿನಲ್ಲೂ ಅದನ್ನು ಬರೆದಿದ್ದಾರೆ.
Pathaan
Trailer:
'ವನವಾಸ'
ಮುಗಿಸಿದ
ಶಾರುಕ್:
ದೇಶಕ್ಕಾಗಿ
ಪ್ರಾಣದ
ಹಂಗು
ತೊರೆದು
ಹೋರಾಡುವ
ಸೈನಿಕ
'ಪಠಾಣ್'
'ಪಠಾಣ್' ನಂತರ ಕಿಂಗ್ ಖಾನ್ ಜವಾನ್ ಎನ್ನುವ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ನಟಿಸ್ತಿದ್ದಾರೆ. ಈ ಸಿನಿಮಾ ಕನ್ನಡಕ್ಕೂ ಡಬ್ ಆಗಿ ರಿಲೀಸ್ ಆಗಲಿದೆ. ಚಿತ್ರಕ್ಕೆ ಅಟ್ಲಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ನಾಯಕಿಯಾಗಿ ನಯನತಾರಾ ನಟಿಸುತ್ತಿದ್ದಾರೆ. ಶೀಘ್ರದಲ್ಲೇ ಈ ಸಿನಿಮಾ ಚಿತ್ರೀಕರಣ ಶುರುವಾಗಲಿದೆ. ಇದೆಲ್ಲದರ ನಡುವೆ ನಟ ಶಾರುಕ್ ಖಾನ್ ದಕ್ಷಿಣದ ಕಲಾವಿದರ ಜೊತೆಗೆ ಆತ್ಮೀಯ ಒಡನಾಟ ಹೊಂದಿದ್ದಾರೆ. ಅದನ್ನು ಮತ್ತಷ್ಟು ವೃದ್ಧಿಸುವ ಕೆಲಸ ಮಾಡುತ್ತಿದ್ದಾರೆ. ಈ ಹಿಂದೆ ವಿಜಯ್, ಶಾರುಕ್ ಭೇಟಿ ಆಗಿದ್ದ ಫೋಟೊಗಳು ಕೂಡ ವೈರಲ್ ಆಗಿತ್ತು.
Thank you my friend @actorvijay You are Thalapathy for this humble reason, let's meet for delicious feast soon.
— Shah Rukh Khan (@iamsrk) January 10, 2023
Mikka Nandri Nanba! Idhanala Dhaan Neenga Thalapathy koodiya viraivil oru arumaiyana virunthil santhipom.
Love you
ಅಂದಹಾಗೆ 'ಪಠಾಣ್' ಚಿತ್ರದ ತಮಿಳು ವರ್ಷನ್ ಟ್ರೈಲರ್ನ ದಳಪತಿ ವಿಜಯ್ ರಿಲೀಸ್ ಮಾಡಿದ್ದಾರೆ. ಅದನ್ನು ಟ್ವಿಟ್ಟರ್ನಲ್ಲಿ ಶೇರ್ ಮಾಡಿದ್ದಾರೆ. ಇದಕ್ಕೆ ಸಂತಸ ವ್ಯಕ್ತಪಡಿಸಿರುವ ಬಾಲಿವುಡ್ ಬಾದ್ಶಾ, "ಧನ್ಯವಾದ ಗೆಳೆಯಾ ವಿಜಯ್. ಈ ವಿನಮ್ರತೆಯ ಕಾರಣಕ್ಕೆ ನೀವು ದಳಪತಿ ಎನಿಸಿಕೊಂಡಿರುವುದು. ಆದಷ್ಟು ಬೇಗ ಭೇಟಿ ಆಗೋಣ. ಪಾರ್ಟಿ ಮಾಡೋಣ" ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ಈಗ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಸಿದ್ಧಾರ್ಥ್ ಆನಂದ್ ನಿರ್ದೇಶನದ 'ಪಠಾಣ್' ಸಿನಿಮಾ ಜನವರಿ 25ಕ್ಕೆ ಗಣರಾಜ್ಯೋತ್ಸವ ಸಂಭ್ರಮದಲ್ಲಿ ತೆರೆಗೆ ಬರಲಿದೆ. ಚಿತ್ರದಲ್ಲಿ ಸೈನಿಕನಾಗಿ ಕಾಣಿಸಿಕೊಂಡಿರುವ ಶಾರುಕ್, ದೇಶದ ವಿರುದ್ಧ ಭಯೋತ್ಪಾದಕರ ದಾಳಿಯನ್ನು ತಡೆಯುವ ಸಾಹಸ ಮಾಡಲಿದ್ದಾರೆ. ಯಶ್ ರಾಜ್ ಫಿಲ್ಮ್ಸ್ ಬ್ಯಾನರ್ನಲ್ಲಿ ಸಿನಿಮಾ ನಿರ್ಮಾಣ ಆಗಿದ್ದು, ದೀಪಿಕಾ ಪಡುಕೋಣೆ ನಾಯಕಿಯಾಗಿ ಮಿಂಚಿದ್ದಾರೆ. ಜಾನ್ ಅಬ್ರಹಾಂ ನೆಗೆಟಿವ್ ರೋಲ್ನಲ್ಲಿ ಅಬ್ಬರಿಸಿದ್ದಾರೆ. ಇನ್ನು ಚಿತ್ರದ ತೆಲುಗು ಟ್ರೈಲರ್ನ ರಾಮ್ಚರಣ್ ತೇಜಾ ರಿಲೀಸ್ ಮಾಡಿದ್ದಾರೆ.