Don't Miss!
- News ಒಂದಲ್ಲ.. ಎರಡಲ್ಲ.. 128 ಲಕ್ಷ ಕೋಟಿ ರೂಪಾಯಿ ಲಾಭ!
- Sports IPL 2024: RCB ವಿರುದ್ಧ ಪಂದ್ಯಕ್ಕೆ KKRನ ಆಡುವ 11ರ ಬಳಗ ಮರೆತ ಶ್ರೇಯಸ್ ಅಯ್ಯರ್
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
"ಇದಕ್ಕೆ ನೀವು ದಳಪತಿ ಆಗಿರೋದು.. ಬೇಗ ಪಾರ್ಟಿಯಲ್ಲಿ ಸಿಗೋಣ": ವಿಜಯ್ ಬಗ್ಗೆ ಶಾರುಕ್ ಟ್ವೀಟ್
ಶಾರುಕ್ ಖಾನ್ ನಟನೆಯ 'ಪಠಾಣ್' ಸಿನಿಮಾ ಟ್ರೈಲರ್ ರಿಲೀಸ್ ಆಗಿ ಸಖತ್ ಸದ್ದು ಮಾಡ್ತಿದೆ. ಹಿಂದಿಯಲ್ಲಿ ಮಾತ್ರವಲ್ಲದೇ ತಮಿಳು, ತೆಲುಗಿಗೂ ಸಿನಿಮಾ ಡಬ್ ಆಗಿ ತೆರೆಗೆ ಬರ್ತಿದೆ. 2 ಭಾಷೆಗಳಲ್ಲಿ ಟ್ರೈಲರ್ ರಿಲೀಸ್ ಆಗಿ ಗಮನ ಸೆಳೆದಿದೆ. ಇದೆಲ್ಲದರ ನಡುವೆ ತಮಿಳು ನಟ ದಳಪತಿ ವಿಜಯ್ ಕುರಿತು ನಟ ಶಾರುಕ್ ಆಸಕ್ತಿಕರ ಟ್ವೀಟ್ ಮಾಡಿದ್ದಾರೆ. ಇಂಗ್ಲೀಷ್ ಮಾತ್ರವಲ್ಲದೇ ತಮಿಳಿನಲ್ಲೂ ಅದನ್ನು ಬರೆದಿದ್ದಾರೆ.
Pathaan Trailer: 'ವನವಾಸ' ಮುಗಿಸಿದ ಶಾರುಕ್: ದೇಶಕ್ಕಾಗಿ ಪ್ರಾಣದ ಹಂಗು ತೊರೆದು ಹೋರಾಡುವ ಸೈನಿಕ 'ಪಠಾಣ್'
'ಪಠಾಣ್' ನಂತರ ಕಿಂಗ್ ಖಾನ್ ಜವಾನ್ ಎನ್ನುವ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ನಟಿಸ್ತಿದ್ದಾರೆ. ಈ ಸಿನಿಮಾ ಕನ್ನಡಕ್ಕೂ ಡಬ್ ಆಗಿ ರಿಲೀಸ್ ಆಗಲಿದೆ. ಚಿತ್ರಕ್ಕೆ ಅಟ್ಲಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ನಾಯಕಿಯಾಗಿ ನಯನತಾರಾ ನಟಿಸುತ್ತಿದ್ದಾರೆ. ಶೀಘ್ರದಲ್ಲೇ ಈ ಸಿನಿಮಾ ಚಿತ್ರೀಕರಣ ಶುರುವಾಗಲಿದೆ. ಇದೆಲ್ಲದರ ನಡುವೆ ನಟ ಶಾರುಕ್ ಖಾನ್ ದಕ್ಷಿಣದ ಕಲಾವಿದರ ಜೊತೆಗೆ ಆತ್ಮೀಯ ಒಡನಾಟ ಹೊಂದಿದ್ದಾರೆ. ಅದನ್ನು ಮತ್ತಷ್ಟು ವೃದ್ಧಿಸುವ ಕೆಲಸ ಮಾಡುತ್ತಿದ್ದಾರೆ. ಈ ಹಿಂದೆ ವಿಜಯ್, ಶಾರುಕ್ ಭೇಟಿ ಆಗಿದ್ದ ಫೋಟೊಗಳು ಕೂಡ ವೈರಲ್ ಆಗಿತ್ತು.
Thank you my friend @actorvijay You are Thalapathy for this humble reason, let's meet for delicious feast soon.
— Shah Rukh Khan (@iamsrk) January 10, 2023
Mikka Nandri Nanba! Idhanala Dhaan Neenga Thalapathy koodiya viraivil oru arumaiyana virunthil santhipom.
Love you
ಅಂದಹಾಗೆ 'ಪಠಾಣ್' ಚಿತ್ರದ ತಮಿಳು ವರ್ಷನ್ ಟ್ರೈಲರ್ನ ದಳಪತಿ ವಿಜಯ್ ರಿಲೀಸ್ ಮಾಡಿದ್ದಾರೆ. ಅದನ್ನು ಟ್ವಿಟ್ಟರ್ನಲ್ಲಿ ಶೇರ್ ಮಾಡಿದ್ದಾರೆ. ಇದಕ್ಕೆ ಸಂತಸ ವ್ಯಕ್ತಪಡಿಸಿರುವ ಬಾಲಿವುಡ್ ಬಾದ್ಶಾ, "ಧನ್ಯವಾದ ಗೆಳೆಯಾ ವಿಜಯ್. ಈ ವಿನಮ್ರತೆಯ ಕಾರಣಕ್ಕೆ ನೀವು ದಳಪತಿ ಎನಿಸಿಕೊಂಡಿರುವುದು. ಆದಷ್ಟು ಬೇಗ ಭೇಟಿ ಆಗೋಣ. ಪಾರ್ಟಿ ಮಾಡೋಣ" ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ಈಗ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಸಿದ್ಧಾರ್ಥ್ ಆನಂದ್ ನಿರ್ದೇಶನದ 'ಪಠಾಣ್' ಸಿನಿಮಾ ಜನವರಿ 25ಕ್ಕೆ ಗಣರಾಜ್ಯೋತ್ಸವ ಸಂಭ್ರಮದಲ್ಲಿ ತೆರೆಗೆ ಬರಲಿದೆ. ಚಿತ್ರದಲ್ಲಿ ಸೈನಿಕನಾಗಿ ಕಾಣಿಸಿಕೊಂಡಿರುವ ಶಾರುಕ್, ದೇಶದ ವಿರುದ್ಧ ಭಯೋತ್ಪಾದಕರ ದಾಳಿಯನ್ನು ತಡೆಯುವ ಸಾಹಸ ಮಾಡಲಿದ್ದಾರೆ. ಯಶ್ ರಾಜ್ ಫಿಲ್ಮ್ಸ್ ಬ್ಯಾನರ್ನಲ್ಲಿ ಸಿನಿಮಾ ನಿರ್ಮಾಣ ಆಗಿದ್ದು, ದೀಪಿಕಾ ಪಡುಕೋಣೆ ನಾಯಕಿಯಾಗಿ ಮಿಂಚಿದ್ದಾರೆ. ಜಾನ್ ಅಬ್ರಹಾಂ ನೆಗೆಟಿವ್ ರೋಲ್ನಲ್ಲಿ ಅಬ್ಬರಿಸಿದ್ದಾರೆ. ಇನ್ನು ಚಿತ್ರದ ತೆಲುಗು ಟ್ರೈಲರ್ನ ರಾಮ್ಚರಣ್ ತೇಜಾ ರಿಲೀಸ್ ಮಾಡಿದ್ದಾರೆ.