Just In
- 30 min ago
ಡಿ ಬಾಸ್ ದರ್ಶನ್ ಜೊತೆ ಬಾಲಿವುಡ್ ನಟಿ ಕಂಗನಾ ರಣಾವತ್: ಫೋಟೋ ವೈರಲ್
- 2 hrs ago
ರಮೇಶ್ ಅರವಿಂದ್ ಮಗಳ ಮದುವೆ ಆರತಕ್ಷತೆಯಲ್ಲಿ ಯಶ್, ಸುದೀಪ್ ಸುಮಲತಾ; ಫೋಟೋ ವೈರಲ್
- 3 hrs ago
ಸುದೀಪ್ ಗೆ ಸಿನಿಮಾ ನಿರ್ದೇಶನ ಮಾಡುವ ಬಗ್ಗೆ ರಕ್ಷಿತ್ ಶೆಟ್ಟಿ ಹೇಳಿದ್ದೇನು? ಇಲ್ಲಿದೆ ಮಾಹಿತಿ
- 4 hrs ago
ಕಂಗನಾ ಮೇಲೆ ಕಥೆ ಕದ್ದ ಆರೋಪ; 72 ಗಂಟೆಯೊಳಗೆ ಉತ್ತರ ನೀಡಬೇಕೆಂದ ಲೇಖಕ
Don't Miss!
- Sports
ಭಾರತ vs ಆಸ್ಟ್ರೇಲಿಯಾ: ಶಾರ್ದೂಲ್- ಸುಂದರ್ ಆಟಕ್ಕೆ ಪ್ರಶಂಸೆ ವ್ಯಕ್ತಪಡಿಸಿದ ಕೊಹ್ಲಿ
- News
ನಾಯಕತ್ವ ಬದಲಾವಣೆ ಹೊಸ ಗಡುವು ಕೊಟ್ಟ ಸಿದ್ದರಾಮಯ್ಯ!
- Automobiles
ಅನಾವರಣವಾಯ್ತು 2021ರ ಎಪ್ರಿಲಿಯಾ ಆರ್ಎಸ್ವಿ4 ಬೈಕುಗಳು
- Finance
ಈ 6 ಕಂಪೆನಿಗಳ ಮಾರುಕಟ್ಟೆ ಬಂಡವಾಳ ಮೌಲ್ಯ 1,13,018.94 ಕೋಟಿ ರು. ಹೆಚ್ಚಳ
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸುಶಾಂತ್ ಸಿಂಗ್ ಸಾವಿನ ಕುರಿತು ಮಹಾರಾಷ್ಟ್ರ ಸಿಎಂ ಪ್ರತಿಕ್ರಿಯೆ
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ವಿಚಾರವಾಗಿ ಆರು ತಿಂಗಳ ಬಳಿಕ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮಾತನಾಡಿದ್ದಾರೆ. ಶಿವಸೇನೆಯ ಸಂಪಾದಕೀಯ ಪುಸ್ತಕ 'ಸಮಾನ'ಗೆ ಪ್ರತಿಕ್ರಿಯೆ ನೀಡಿರುವ ಠಾಕ್ರೆ ಸುಶಾಂತ್ ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ.
ಸುಶಾಂತ್ ಸಾವಿನಲ್ಲಿ ಕೆಲವರು ಕೊಳಕು ರಾಜಕೀಯ ಮಾಡಿದ್ದಾರೆ ಎಂದು ವಿರೋಧ ಪಕ್ಷಕ್ಕೆ ಬಿಜೆಪಿಗೆ ತಿರುಗೇಟು ನೀಡಿದ್ದಾರೆ. ಸದ್ಯ ಸುಶಾಂತ್ ಸಿಂಗ್ ಸಾವಿನ ವಿಚಾರಣೆಯನ್ನು ಸಿಬಿಐ ತನಿಖೆ ಮಾಡುತ್ತಿದೆ.
ಭಾವಿ ಪತಿಗೆ ಭಾವನಾತ್ಮಕ ಪತ್ರ ಬರೆದು, ಕ್ಷಮೆಯಾಚಿಸಿದ ಸುಶಾಂತ್ ಸಿಂಗ್ ಮಾಜಿ ಪ್ರಿಯತಮೆ ಅಂಕಿತಾ
ಈ ಕುರಿತು ಉದ್ಧವ್ ಠಾಕ್ರೆ ಪ್ರತಿಕ್ರಿಯೆ ನೀಡಿದ್ದು ''ನಾನು ಏನು ಹೇಳಬಲ್ಲೆ, ನಾನು ದುರಂತದ ಬಗ್ಗೆ ಸಹಾನುಭೂತಿ ಹೊಂದಿದ್ದೇನೆ. ಸಾವಿನಲ್ಲೂ ರಾಜಕೀಯ ಮಾಡುವವರು ರಾಜಕೀಯದಲ್ಲಿರಲು ಅರ್ಹರಲ್ಲ. ದುರಾದೃಷ್ಟವಶಾತ್ ಒಬ್ಬ ಯುವನ ತನ್ನ ಪ್ರಾಣವನ್ನು ಕಳೆದುಕೊಂಡನು'' ಎಂದು ಸಿಎಂ ಉದ್ಧವ್ ಠಾಕ್ರೆ ಬೇಸರ ವ್ಯಕ್ತಪಡಿಸಿದ್ದಾರೆ.
ಸುಶಾಂತ್ ಸಿಂಗ್ ವಿಚಾರಕ್ಕೆ ಸಂಬಂಧಪಟ್ಟಂತೆ ''ಆ ವ್ಯಕ್ತಿಯ ಸಾವಿನ ಬಗ್ಗೆ ನೀವು ರಾಜಕೀಯ ಮಾಡಲು ಬಯಸುವಿರಾ? ನೀವು ಇನ್ನು ಎಷ್ಟು ಕೆಳಹಂತಕ್ಕೆ ಹೋಗಬಹುದು, ಇಂತಹ ರಾಜಕೀಯ ಬಹಳ ಕೆಟ್ಟದು'' ಎಂದು ಸಿಎಂ ತಿರುಗೇಟು ನೀಡಿದ್ದಾರೆ.
''ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ, ಆದರೆ ನೀವು ಸತ್ತ ತಕ್ಷಣ ರಾಜಕೀಯ ಮಾಡುವಿರಾ? ಸತ್ತ ವ್ಯಕ್ತಿಯಿಂದ ಎರಡು ನಿಮಿಷದ ಪ್ರಚಾರ ಪಡೆಯಲು ಪ್ರಯತ್ನಿಸುದ್ದೀರಾ? ಇದೇನಾ ನಿಮ್ಮ ಸ್ವಭಾವ?'' ಎಂದು ಬಿಜೆಪಿ ಪಕ್ಷವನ್ನು ಸಿಎಂ ಠಾಕ್ರೆ ಪ್ರಶ್ನಿಸಿದ್ದಾರೆ.
ಸುಶಾಂತ್ ಸಿಂಗ್ ಮನೆ ಸಹಾಯಕನ ಆರೋಪ ನಿರಾಕರಿಸಿದ ಎನ್ಸಿಬಿ
ಜೂನ್ 14 ರಂದು ನಟ ಸುಶಾಂತ್ ಸಿಂಗ್ ಮುಂಬೈನಲ್ಲಿರುವ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡ ರೀತಿ ಶವವಾಗಿ ಪತ್ತೆಯಾಗಿದ್ದರು. ಆತ್ಮಹತ್ಯೆ ಎಂದು ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಿದ ಮುಂಬೈ ಪೊಲೀಸರ ವಿರುದ್ಧ ತೀವ್ರ ಖಂಡನೆ ವ್ಯಕ್ತವಾಯಿತು.
ಇದು ಕೊಲೆ, ಆದರೆ ಆತ್ಮಹತ್ಯೆ ಎಂದು ಕೇಸ್ ಮುಚ್ಚಿ ಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು ಸುಶಾಂತ್ ಕುಟುಂಬ ಹಾಗೂ ಕೆಲವು ಸಮಾಜಿಕಾ ಹೋರಾಟಗಾರರು ಪ್ರತಿಭಟಿಸಿದರು. ಪಾಟ್ನಾ ಪೊಲೀಸ್ ಠಾಣೆಯಲ್ಲಿ ಸುಶಾಂತ್ ತಂದೆ ದೂರು ದಾಖಲಿಸಿದರು. ನಂತರ ಬಿಹಾರ ಸರ್ಕಾರದ ಕೋರಿಕೆ ಹಿನ್ನೆಲೆ ಈ ಕೇಸ್ ಸಿಬಿಐಗೆ ವಹಿಸಲಾಗಿದೆ.