Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೇಂದ್ರ ಸರ್ಕಾರದ ಪರ ಸೆಲೆಬ್ರಿಟಿಗಳ ಟ್ವೀಟ್: ತನಿಖೆಗೆ ಮಹಾರಾಷ್ಟ್ರ ಸರ್ಕಾರ ಆದೇಶ
ರೈತ ಪ್ರತಿಭಟನೆಗೆ ಬೆಂಬಲ ಸೂಚಿಸಿ ಪಾಪ್ ಗಾಯಕಿ ರಿಹಾನ್ನ ಮಾಡಿದ್ದ ಟ್ವೀಟ್ ದೇಶದಲ್ಲಿ ಭಾರಿ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ರಿಹಾನ್ನ ಟ್ವೀಟ್ ಭಾರಿ ವೈರಲ್ ಆಗಿತ್ತು.
ಆದರೆ ರಿಹಾನ್ನ ಟ್ವೀಟ್ ಮಾಡಿದ ಕೆಲವು ಗಂಟೆಗಳ ಬಳಿಕ ಭಾರತದ ಸಿನಿಮಾ ಹಾಗೂ ಕ್ರೀಡಾ ಸೆಲೆಬ್ರಿಟಿಗಳು ಒಬ್ಬರ ಹಿಂದೆ ಒಬ್ಬರು ಅದೇ ವಿಷಯವಾಗಿ ಟ್ವೀಟ್ ಮಾಡಿ. ಕೇಂದ್ರ ಸರ್ಕಾರಕ್ಕೆ ಪರೋಕ್ಷ ಬೆಂಬಲ ವ್ಯಕ್ತಪಡಿಸಿದರು. ಸೆಲೆಬ್ರಿಟಿಗಳ ಈ ಟ್ವೀಟ್ಗಳು ಯಾರದ್ದೊ ಒತ್ತಾಯಕ್ಕೆ ಮಣಿದು ಮಾಡಿದ ಟ್ವೀಟ್ ಎನ್ನುವ ಆರೋಪಗಳು ಸಾಮಾಜಿಕ ಜಾಲತಾಣದಲ್ಲಿ ಕೇಳಿಬರುತ್ತಿದ್ದು, ಈ ಸಂಬಂಧ ತನಿಖೆಗೆ ಆದೇಶಿಸಿದೆ ಕೇಂದ್ರ ಸರ್ಕಾರ.
'ರಿಹಾನ್ನ ಪರಿಣಾಮ', ಅಖಾಡಕ್ಕಿಳಿದ ಬಾಲಿವುಡ್ ಸೆಲೆಬ್ರಿಟಿಗಳು: ಡ್ಯಾಮೇಜ್ ಕಂಟ್ರೋಲ್?
ರಿಹಾನ್ನ ಟ್ವೀಟ್ ಮಾಡಿದ ಕೆಲವು ಗಂಟೆಗಳ ಬಳಿಕ ಕೇಂದ್ರ ವಿದೇಶಾಂಗ ಸಚಿವಾಲವು, 'ಭಾರತದ ಆಂತರಿಕ ವಿಷಯದಲ್ಲಿ ಮೂಗು ತೂರಿಸಬಾರದು' ಎಂಬರ್ಥದ ಹೇಳಿಕೆಯನ್ನು ಟ್ವಿಟ್ಟರ್ನಲ್ಲಿ ಪ್ರಕಟಿಸಿತು. ಈ ಟ್ವೀಟ್ನಲ್ಲಿ 'ಇಂಡಿಯಾ ಯುನೈಟ್', 'ಇಂಡಿಯಾ ಅಗೇನ್ಸ್ಟ್ ಪ್ರೊಪೊಗ್ಯಾಂಡಾ' ಹ್ಯಾಷ್ಟ್ಯಾಗ್ ಬಳಸಲಾಗಿತ್ತು.
ವಿದೇಶಾಂಗ ಇಲಾಖೆಯ ಟ್ವೀಟ್ ಬಳಿಕ ಸಾಲು-ಸಾಲು ಟ್ವೀಟ್
ವಿದೇಶಾಂಗ ಇಲಾಖೆಯ ಟ್ವೀಟ್ ಹೊರಬಿದ್ದ ಕೆಲವು ಗಂಟೆಗಳ ಬಳಿಕ ಅದೇ ಟ್ವೀಟ್ನ ಹ್ಯಾಷ್ಟ್ಯಾಗ್ ಬಳಸಿ ಹಲವಾರು ನಟರು, ಕ್ರೀಡಾ ಪಟುಗಳು, ಮಾಜಿ ಕ್ರೀಡಾ ಸೆಲೆಬ್ರಿಟಿಗಳು ಬಹುತೇಕ ಒಂದೇ ಸಮಯಕ್ಕೆ ಒಂದೇ ಅರ್ಥ ಧ್ವನಿಸುವ ಟ್ವೀಟ್ ಮಾಡಿದರು. ಎಲ್ಲ ಟ್ವೀಟ್ಗಳು ರಿಹಾನ್ನ ಮಾಡಿದ ಟ್ವೀಟ್ ನಿಂದ ಭಾರತದ ಐಕ್ಯತೆಗೆ ಧಕ್ಕೆ ಆಗಿದೆ ಎಂಬುದನ್ನೇ ಧ್ವನಿಸುತ್ತಿತ್ತು. ಈ ಎಲ್ಲ ಸೆಲೆಬ್ರಿಟಿಗಳ ಟ್ವೀಟ್ಗಳು ರಿಹಾನ್ನ ಟ್ವೀಟ್ ಮಾಡಿದ ಒಂದು ದಿನದ ನಂತರ ಬಂದವು. ಆದರೆ ಎಲ್ಲ ಸೆಲೆಬ್ರಿಟಿಗಳ ಟ್ವೀಟ್ಗಳು ಬಹುತೇಕ ಒಂದೇ ಸಮಯಕ್ಕೆ ಮಾಡಲಾಗಿತ್ತು.
ರೈತ ಹೋರಾಟದ ಬಗ್ಗೆ ಈ ಹಿಂದೆ ಟ್ವೀಟ್ ಮಾಡಿರಲಿಲ್ಲ
ದೆಹಲಿಯಲ್ಲಿ ರೈತ ಹೋರಾಟ ಪ್ರಾರಂಭವಾಗಿ ಸುಮಾರು ತಿಂಗಳುಗಳೇ ಆಗಿವೆ. ಹೋರಾಟದಲ್ಲಿ ಭಾಗವಹಿಸಿದ್ದ ಹಲವು ರೈತರು ಸಾವನ್ನಪ್ಪಿದ್ದಾರೆ. ಜನವರಿ 26 ರಂದು ನಡೆದ ಪ್ರತಿಭಟನೆಯಲ್ಲಿ ಪೊಲೀಸರೂ ಸಹ ಗಾಯಾಳುಗಳಾಗಿದ್ದಾರೆ. ಆದರೆ ಆವಾಗೆಲ್ಲ ಸುಮ್ಮನಿದ್ದ ಈ ಸೆಲೆಬ್ರಿಟಿಗಳು, ಒಂದೇ ದಿನ, ಒಂದೇ ಸಮಯಕ್ಕೆ ಒಂದೇ ಥೆರನಾದ ಟ್ವೀಟ್ ಗಳನ್ನು ಮಾಡಿದ್ದು ಹೇಗೆ? ಏಕೆ? ಎಂಬುದು ಯಕ್ಷ ಪ್ರಶ್ನೆಯಾಗಿದೆ.
ಗೃಹ ಸಚಿವರಿಂದ ತನಿಖೆಗೆ ಆದೇಶ
ಇದೀಗ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್ಮುಖ್ ಅವರು ಈ ಕುರಿತು ತನಿಖೆಗೆ ಆದೇಶಿಸಿದ್ದಾರೆ. ನಟ ಅಕ್ಷಯ್ ಕುಮಾರ್, ಸಚಿನ್ ತೆಂಡೂಲ್ಕರ್, ಲತಾ ಮಂಗೇಶ್ಕರ್, ಸುನಿಲ್ ಶೆಟ್ಟಿ, ಅಜಯ್ ದೇವಗನ್ ಇನ್ನೂ ಹಲವರನ್ನು ಈ ಸಂಬಂಧ ಪ್ರಶ್ನೆ ಮಾಡಲಾಗುತ್ತದೆ.
Recommended Video
ಕಾಂಗ್ರೆಸ್ನಿಂದ ದೂರು ದಾಖಲು
ಮಹಾರಾಷ್ಟ್ರ ಕಾಂಗ್ರೆಸ್ ಈ ಬಗ್ಗೆ ದೂರು ದಾಖಲಿಸಿದೆ. 'ರಿಹಾನ್ನ ಟ್ವೀಟ್ನ ಬಳಿಕ ವಿದೇಶಾಂಗ ಇಲಾಖೆ ಟ್ವೀಟ್ ಮಾಡಿದೆ. ಆ ಟ್ವೀಟ್ನ ಬಳಿಕ ಎಲ್ಲ ಸೆಲೆಬ್ರಿಟಿಗಳು ಟ್ವೀಟ್ ಮಾಡಿದ್ದಾರೆ. ಕೆಲವರ ಟ್ವೀಟ್ಗಳಂತಲೂ ಅಕ್ಷರ, ಪದಗಳು ಸಹ ಒಂದೇ ಥೆರನಾಗಿದೆ. ಈ ಟ್ವೀಟ್ಗಳೆಲ್ಲಾ ಸ್ಕ್ರಿಪ್ಟೆಡ್ ಎಂಬ ಅನುಮಾನ ಇದೆ, ಹೋರಾಟದ ದಿಕ್ಕು ತಪ್ಪಿಸಲು ಯಾರದ್ದೋ ಬಲವಂತಕ್ಕೆ ಸಿಲುಕಿ ಈ ಟ್ವೀಟ್ ಮಾಡಲಾಗಿದೆ' ಎಂದು ದೂರಿನಲ್ಲಿ ಹೇಳಲಾಗಿದೆ.