ಮಾಧ್ಯಮಗಳ ಎದುರು ಆತಂಕ ವ್ಯಕ್ತಪಡಿಸಿದ ಮಲ್ಲಿಕಾ ಶೆರಾವತ್

By Bharath Kumar

ಬಾಲಿವುಡ್ ನಟಿ ಮಲ್ಲಿಕಾ ಶರೆವಾತ್ ದೇಶದಲ್ಲಿ ಆಗುತ್ತಿರುವ ಅತ್ಯಾಚಾರ ಪ್ರಕರಣಗಳ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ. ''ಮಹಾತ್ಮ ಗಾಂಧಿಯ ಪುಣ್ಯ ಭೂಮಿ ಇಂದು ಅತ್ಯಾಚಾರಿಗಳ ದೇಶವಾಗುತ್ತಿದೆ'' ಎಂದು ಆಕ್ರೋಶಗೊಂಡಿದ್ದಾರೆ.

'ದಾಸ್ ದೇವ್' ಚಿತ್ರದ ವಿಶೇಷ ಪ್ರದರ್ಶನದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಮಲ್ಲಿಕಾ ಶೆರಾವತ್ ದೇಶದಲ್ಲಿ ಹೆಚ್ಚುತ್ತಿರುವ ಅತ್ಯಾಚಾರಗಳ ಬಗ್ಗೆ ಆತಂಕಗೊಂಡಿದ್ದಾರೆ.

''ಮಹಿಳೆ ಹಾಗೂ ಹೆಣ್ಣು ಮಕ್ಕಳ ಮೇಲೆ ಆಗುತ್ತಿರುವ ದೌರ್ಜನ್ಯ ನಿಜಕ್ಕೂ ನಾಚಿಕೆಗೇಡು. ಮಾಧ್ಯಮಗಳ ನಮ್ಮ ದೇಶದಲ್ಲಿ ಹೆಚ್ಚು ಶಕ್ತಿಯುತವಾಗಿದೆ. ಹೀಗಾಗಿ, ಇಂತಹ ಪ್ರಕರಣಗಳ ಬೆಳಕಿಗೆ ಬರುತ್ತಿದೆ. ಮಾಧ್ಯಮಗಳ ಮೇಲೆ ನಂಬಿಕೆ ಕೂಡ ಹೆಚ್ಚಾಗುತ್ತಿದೆ'' ಎಂದಿದ್ದಾರೆ.

Mallika Sherawat expressed displeasure over rapist

''ಒಂದು ವೇಳೆ ಮಾಧ್ಯಮಗಳು ಇಲ್ಲವಾಗಿದ್ದಲ್ಲಿ ಇಂತಹ ಪ್ರಕರಣಗಳು ಯಾವುದು ಬಹಿರಂಗವಾಗುತ್ತಿರಲಿಲ್ಲ. ಆದ್ದರಿಂದ ಮಾಧ್ಯಮಗಳಿಗೆ ವಿಶೇಷವಾದ ಧನ್ಯವಾದಗಳು'' ಎಂದು ಅಭಿಪ್ರಾಯಪಟ್ಟಿದ್ದಾರೆ. ಇನ್ನು ಏಪ್ರಿಲ್ 22ರಂದು ಅಪ್ರಾಪ್ತ ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಂಕಿತ ಹಾಕಿದ್ದರು. ಈ ಬಗ್ಗೆ ಮಲ್ಲಿಕಾ ಸಂತಸ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ಮಲ್ಲಿಕಾ ಶರೆವಾತ್ ಹೆಚ್ಚಾಗಿ ಸಿನಿಮಾಗಳಲ್ಲಿ ಅಭಿನಯಿಸುತ್ತಿಲ್ಲ. 2017ರಲ್ಲಿ ಕೊನೆಯದಾಗಿ 'ಜೀನತ್' ಸಿನಿಮಾದಲ್ಲಿ ಅಭಿನಯಿಸಿದ್ದರು.

More from Filmibeat

English summary
Actress Mallika Sherawat has expressed her displeasure over increasing number of rape cases in India. She has said that from the land of Mahatma Gandhi, the country had become a land of gang rapists.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X