Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮದುವೆಯಾಗಲು ನಿರಾಕರಿಸಿದ ನಟಿಗೆ ಚಾಕು ಇರಿದ ಫೇಸ್ಬುಕ್ ಗೆಳೆಯ
ಮದುವೆಯಾಗಲು ನಿರಾಕರಿಸಿದ ನಟಿಗೆ ಆಕೆಯ ಫೇಸ್ಬುಕ್ ಗೆಳೆಯ ಚಾಕುವಿನಿಂದ ಇರಿದು ಕೊಲ್ಲಲು ಯತ್ನಿಸಿದ ಘಟನೆ ಮುಂಬೈನಲ್ಲಿ ನಡೆದಿದೆ.
ಟಿವಿ ಶೋ ಉಡಾನ್, ಸಿನಿಮಾ ಹೋಟೆಲ್ ಮಿಲನ್ ಸಿನಿಮಾಗಳಲ್ಲಿ ನಟಿಸಿದ್ದ ನಟಿ ಮಾಲ್ವಿ ಮಲ್ಹೋತ್ರಾಗೆ ಆಕೆಯ ಫೇಸ್ಬುಕ್ ಗೆಳೆಯ ಸೋಮವಾರ ಸಂಜೆ ಮುಂಬೈ ನ ವರ್ಸೋವಾ ರಸ್ತೆಯಲ್ಲಿ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ.
ಚಾಕು ಇರಿದ ವ್ಯಕ್ತಿಯನ್ನು ಕುಮಾರ್ ಮಹಿಪಾಲ್ ಸಿಂಗ್ ಎಂದು ಗುರುತಿಸಲಾಗಿದೆ. ಮಾಲ್ವಿ ಮಲ್ಹೋತ್ರಾಗೆ ಚಾಕುವಿನಿಂದ ಇರಿದ ಕೂಡಲೇ ಸ್ಥಳದಿಂದ ತನ್ನ ಆಡಿ ಕಾರಿನಲ್ಲಿ ಆತ ಪರಾರಿಯಾಗಿದ್ದಾನೆ. ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದ್ದಾರೆ.
2019 ರಲ್ಲಿ ಫೇಸ್ಬುಕ್ ಮೂಲಕ ಪರಿಚಯ
ಚಾಕು ಇರಿದ ಕುಮಾರ್ ಮಹಿಪಾಲ್ ಸಿಂಗ್ ಸಿನಿಮಾ ನಿರ್ಮಾಪಕನಂತೆ, 2019 ರಲ್ಲಿ ಮಾಲ್ವಿಗೆ ಫೇಸ್ಬುಕ್ ಮೂಲಕ ಪರಿಚಯವಾಗಿದ್ದನಂತೆ. ಇಬ್ಬರೂ ಕೆಲವು ಭಾರಿ ಭೇಟಿ ಆಗಿದ್ದರಂತೆ, ಒಳ್ಳೆಯ ಸ್ನೇಹಿತರಾಗಿ ಸಹ ಇದ್ದರಂತೆ.
ಮಾಲ್ವಿಯ ಕೈ ಬೆರಳು ತುಂಡು
ಮಾಲ್ವಿ ನೀಡಿರುವ ದೂರಿನನ್ವಯ, ಆಕೆಯು ದುಬೈನಲ್ಲಿ ಚಿತ್ರೀಕರಣವೊಂದರಲ್ಲಿ ಪಾಲ್ಗೊಂಡು ಅಕ್ಟೋಬರ್ 25 ರಂದು ಮುಂಬೈಗೆ ವಾಪಸ್ ಬಂದಿದ್ದರಂತೆ. ಕಾಫಿ ಶಾಪ್ನಿಂದ ಹೊರಗೆ ಬಂದು ಮನೆಗೆ ಹೋಗುವಾಗ ಎದುರಾದ ಮಹಿಪಾಲ್ ಆಕೆಯನ್ನು ಅಡ್ಡಗಟ್ಟಿ ಚಾಕುವಿನಿಂದ ಹೊಟ್ಟೆಗೆ ಇರಿದಿದ್ದಾನೆ. ಆಕೆಯ ಎಡಗೈಯ ಒಂದು ಬೆರಳು ಕತ್ತರಿಸಿ ಹೋಗಿದೆ.
ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಚಿಕಿತ್ಸೆ
ಮುಂಬೈನ ಕೊಕಿಲಾಬೇನ್ ಆಸ್ಪತ್ರೆಯಲ್ಲಿ ಮಾಲ್ವಿ ಮಲ್ಹೋತ್ರಾ ದಾಖಲಾಗಿದ್ದು, ಘಟನೆ ನಡೆದ ಮಾರನೇಯ ದಿನ ಪೊಲೀಸರಿಗೆ ದೂರು ನೀಡಿದ್ದಾರೆ. ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿ ಕುಮಾರ್ ಮಹಿಪಾಲ್ ಸಿಂಗ್ ಗಾಗಿ ಹುಡುಕಾಟ ನಡೆಸಿದ್ದಾರೆ.