Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕುಂಭಮೇಳಕ್ಕೆ ಹೋಗಿ ಬಂದ ನಂತರ ಶ್ರವಣ್ ರಾಥೋಡ್ಗೆ ಕೊರೊನಾ
ಬಾಲಿವುಡ್ ಖ್ಯಾತ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಕಳೆದ ಮೂರು ದಿನಗಳಿಂದಲೂ ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಶ್ರವಣ್ ರಾಥೋಡ್ ಅವರನ್ನು ಮುಂಬೈನ ಎಸ್ ಎಲ್ ರಹೇಜಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಅಂದ್ಹಾಗೆ, ವಿಶ್ವವಿಖ್ಯಾತ ಕುಂಭಮೇಳಕ್ಕೆ ಶ್ರವಣ್ ರಾಥೋಡ್ ಮತ್ತು ಆತನ ಪತ್ನಿ ಹೋಗಿ ಬಂದಿದ್ದರು. ಅಲ್ಲಿಂದ ಬಂದ ನಂತರವೇ ಅವರಲ್ಲಿ ಸೋಂಕು ಕಾಣಿಸಿಕೊಂಡಿತ್ತು ಎಂದು ಮಗ ಸಂಜೀವ್ ರಾಥೋಡ್ ಮಾಹಿತಿ ನೀಡಿದ್ದಾರೆ.
ಹಿಂದುಗಳು ಮುಸ್ಲೀಮರ ಬಳಿ ಕ್ಷಮೆ ಕೇಳಬೇಕು: ರಾಮ್ ಗೋಪಾಲ್ ವರ್ಮಾ
''ನಮ್ಮ ಇಡೀ ಕುಟುಂಬಕ್ಕೆ ಇಂತಹ ದುಸ್ಥಿತಿ ಬರುತ್ತದೆ ಎಂದು ನಾವು ಭಾವಿಸಿರಲಿಲ್ಲ. ಕೆಲವು ದಿನಗಳ ಹಿಂದೆಯಷ್ಟೇ ನಮ್ಮ ತಂದೆ-ತಾಯಿ ಕುಂಭಮೇಳದಿಂದ ವಾಪಸ್ ಆಗಿದ್ದರು. ನಂತರವೇ ಕೊರೊನಾ ಪಾಸಿಟಿವ್ ಬಂದಿತ್ತು. ದುರಾದೃಷ್ಟವಶಾತ್ ನಮ್ಮ ತಂದೆ ಕೊರೊನಾದಿಂದ ಸಾವನ್ನಪ್ಪಿದರು. ನನ್ನ ತಾಯಿ, ನನಗೆ ಹಾಗೂ ನನ್ನ ಸಹೋದರನಿಗೂ ಸೋಂಕು ತಗುಲಿದೆ'' ಎಂದು ಸಂಜೀವ್ ರಾಥೋಡ್ ಇಇಂಡಿಯನ್ ಎಕ್ಸ್ಪ್ರೆಸ್ಗೆ ತಿಳಿಸಿದ್ದಾರೆ.
''ನನ್ನ ತಾಯಿ, ನಾನು ಹಾಗು ನನ್ನ ಸಹೋದರ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇವೆ'' ಎಂದು ಸಂಜೀವ್ ರಾಥೋಡ್ ಹೇಳಿದ್ದಾರೆ.
ಕೊರೊನಾ ಭೀತಿಯಲ್ಲಿ ಕುಂಭಮೇಳ ನಡೆಸಿದ್ದನ್ನು ಅನೇಕರು ಖಂಡಿಸಿದರು. ಇದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದರು. ಇದೀಗ, ಕುಂಭಮೇಳಕ್ಕೆ ಹೋಗಿ ಬಂದವರಲ್ಲಿ ಸೋಂಕು ಪತ್ತೆಯಾಗುತ್ತಿರುವುದು ಆತಂಕ ಸೃಷ್ಟಿಸಿದೆ.
ಕೋವಿಡ್ ಪರಿಸ್ಥಿತಿ ನಡುವೆ ಕುಂಭಮೇಳ ಆಯೋಜನೆ ಮಾಡಲು ಅನುಮತಿ ನೀಡಿದರ ಬಗ್ಗೆ ರಾಮ್ ಗೋಪಾಲ್ ವರ್ಮಾ ಖಂಡಿಸಿದ್ದರು.
Recommended Video
'ಕಳೆದ ವರ್ಷ ದೆಹಲಿಯ 'ಜಮಾತ್' ಕಾರ್ಯಕ್ರಮ ಕೊರೊನಾ ಹಬ್ಬಿಸುವುದರಲ್ಲಿ ಕೇವಲ ಕಿರುಚಿತ್ರವಾಗಿತ್ತು ಆದರೆ ಇಂದಿನ ಕುಂಭ ಮೇಳ ಬಾಹುಬಲಿ ಮಾದರಿಯ ಸಿನಿಮಾ ಆಗಿದೆ. ಎಲ್ಲ ಹಿಂದುಗಳು ಮುಸ್ಲೀಮರ ಬಳಿ ಕ್ಷಮೆ ಕೇಳಬೇಕು. ಅವರು ಗೊತ್ತಿಲ್ಲದೆ ಜಮಾತ್ ಮಾಡಿದ್ದರು, ಆದರೆ ನಾವು ಗೊತ್ತಿದ್ದೂ ಸಹ ಮಾಡಿದ್ದೇವೆ (ಕುಂಭ ಮೇಳ)' ಎಂದು ಆರ್ಜಿವಿ ಟ್ವೀಟ್ ಮಾಡಿದ್ದರು.