Don't Miss!
- Sports IPL 2024: ಐಪಿಎಲ್ ಆರಂಭಕ್ಕೂ ಮುನ್ನವೇ 'ಸೂಪರ್' ಭವಿಷ್ಯ; ಆರ್ಸಿಬಿ ಈ ಬಾರಿ ಕಪ್ ಗೆಲ್ಲುತ್ತದಾ? ಇಲ್ಲಿದೆ ಉತ್ತರ
- Finance ಬೆಂಗಳೂರಿನಿಂದ ಲಕ್ಷದ್ವೀಪಕ್ಕೆ ನೇರ ವಿಮಾನ ಸೇವೆ ಆರಂಭ, ದಿನಾಂಕ ವಿವರ
- News ವಿ ಸೋಮಣ್ಣಗೆ ಎದುರಾಯ್ತು ಸಂಕಷ್ಟ: ಕೈ ನಾಯಕರ ಸಂಪರ್ಕದಲ್ಲಿರುವ ಮಾಧುಸ್ವಾಮಿ: ಕಾಂಗ್ರೆಸ್ ಸೇರ್ಪಡೆ?
- Automobiles ರಾಂಗ್ ರೂಟ್ನಲ್ಲಿ ಬಂದು ಪ್ರಶ್ನಿಸಿದ ಬೈಕ್ ಸವಾರನಿಗೆ ಥಳಿಸಿದ ಕಾರು ಚಾಲಕ: ವಿಡಿಯೋ
- Lifestyle ಬಾಯಲ್ಲಿ ನೀರು ತರಿಸುವ ಮಸಾಲೆ ಮೊಟ್ಟೆ ಬುರ್ಜಿ ಮಾಡೋದು ಹೇಗೆ.? ತುಂಬಾ ಸಿಂಪಲ್ ರೆಸಿಪಿ
- Technology Best Coolers: ಭಾರತದಲ್ಲಿ 5 ಸಾವಿರಕ್ಕಿಂತ ಕಡಿಮೆ ಬೆಲೆಯಲ್ಲಿ ಲಭ್ಯ ಇರುವ ಅತ್ಯುತ್ತಮ ಕೂಲರ್ಗಳು! ಫೀಚರ್ಸ್ ಏನಿದೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕುಂಭಮೇಳಕ್ಕೆ ಹೋಗಿ ಬಂದ ನಂತರ ಶ್ರವಣ್ ರಾಥೋಡ್ಗೆ ಕೊರೊನಾ
ಬಾಲಿವುಡ್ ಖ್ಯಾತ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಕಳೆದ ಮೂರು ದಿನಗಳಿಂದಲೂ ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಶ್ರವಣ್ ರಾಥೋಡ್ ಅವರನ್ನು ಮುಂಬೈನ ಎಸ್ ಎಲ್ ರಹೇಜಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಅಂದ್ಹಾಗೆ, ವಿಶ್ವವಿಖ್ಯಾತ ಕುಂಭಮೇಳಕ್ಕೆ ಶ್ರವಣ್ ರಾಥೋಡ್ ಮತ್ತು ಆತನ ಪತ್ನಿ ಹೋಗಿ ಬಂದಿದ್ದರು. ಅಲ್ಲಿಂದ ಬಂದ ನಂತರವೇ ಅವರಲ್ಲಿ ಸೋಂಕು ಕಾಣಿಸಿಕೊಂಡಿತ್ತು ಎಂದು ಮಗ ಸಂಜೀವ್ ರಾಥೋಡ್ ಮಾಹಿತಿ ನೀಡಿದ್ದಾರೆ.
ಹಿಂದುಗಳು ಮುಸ್ಲೀಮರ ಬಳಿ ಕ್ಷಮೆ ಕೇಳಬೇಕು: ರಾಮ್ ಗೋಪಾಲ್ ವರ್ಮಾ
''ನಮ್ಮ ಇಡೀ ಕುಟುಂಬಕ್ಕೆ ಇಂತಹ ದುಸ್ಥಿತಿ ಬರುತ್ತದೆ ಎಂದು ನಾವು ಭಾವಿಸಿರಲಿಲ್ಲ. ಕೆಲವು ದಿನಗಳ ಹಿಂದೆಯಷ್ಟೇ ನಮ್ಮ ತಂದೆ-ತಾಯಿ ಕುಂಭಮೇಳದಿಂದ ವಾಪಸ್ ಆಗಿದ್ದರು. ನಂತರವೇ ಕೊರೊನಾ ಪಾಸಿಟಿವ್ ಬಂದಿತ್ತು. ದುರಾದೃಷ್ಟವಶಾತ್ ನಮ್ಮ ತಂದೆ ಕೊರೊನಾದಿಂದ ಸಾವನ್ನಪ್ಪಿದರು. ನನ್ನ ತಾಯಿ, ನನಗೆ ಹಾಗೂ ನನ್ನ ಸಹೋದರನಿಗೂ ಸೋಂಕು ತಗುಲಿದೆ'' ಎಂದು ಸಂಜೀವ್ ರಾಥೋಡ್ ಇಇಂಡಿಯನ್ ಎಕ್ಸ್ಪ್ರೆಸ್ಗೆ ತಿಳಿಸಿದ್ದಾರೆ.
''ನನ್ನ ತಾಯಿ, ನಾನು ಹಾಗು ನನ್ನ ಸಹೋದರ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇವೆ'' ಎಂದು ಸಂಜೀವ್ ರಾಥೋಡ್ ಹೇಳಿದ್ದಾರೆ.
ಕೊರೊನಾ ಭೀತಿಯಲ್ಲಿ ಕುಂಭಮೇಳ ನಡೆಸಿದ್ದನ್ನು ಅನೇಕರು ಖಂಡಿಸಿದರು. ಇದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದರು. ಇದೀಗ, ಕುಂಭಮೇಳಕ್ಕೆ ಹೋಗಿ ಬಂದವರಲ್ಲಿ ಸೋಂಕು ಪತ್ತೆಯಾಗುತ್ತಿರುವುದು ಆತಂಕ ಸೃಷ್ಟಿಸಿದೆ.
ಕೋವಿಡ್ ಪರಿಸ್ಥಿತಿ ನಡುವೆ ಕುಂಭಮೇಳ ಆಯೋಜನೆ ಮಾಡಲು ಅನುಮತಿ ನೀಡಿದರ ಬಗ್ಗೆ ರಾಮ್ ಗೋಪಾಲ್ ವರ್ಮಾ ಖಂಡಿಸಿದ್ದರು.
Recommended Video
'ಕಳೆದ ವರ್ಷ ದೆಹಲಿಯ 'ಜಮಾತ್' ಕಾರ್ಯಕ್ರಮ ಕೊರೊನಾ ಹಬ್ಬಿಸುವುದರಲ್ಲಿ ಕೇವಲ ಕಿರುಚಿತ್ರವಾಗಿತ್ತು ಆದರೆ ಇಂದಿನ ಕುಂಭ ಮೇಳ ಬಾಹುಬಲಿ ಮಾದರಿಯ ಸಿನಿಮಾ ಆಗಿದೆ. ಎಲ್ಲ ಹಿಂದುಗಳು ಮುಸ್ಲೀಮರ ಬಳಿ ಕ್ಷಮೆ ಕೇಳಬೇಕು. ಅವರು ಗೊತ್ತಿಲ್ಲದೆ ಜಮಾತ್ ಮಾಡಿದ್ದರು, ಆದರೆ ನಾವು ಗೊತ್ತಿದ್ದೂ ಸಹ ಮಾಡಿದ್ದೇವೆ (ಕುಂಭ ಮೇಳ)' ಎಂದು ಆರ್ಜಿವಿ ಟ್ವೀಟ್ ಮಾಡಿದ್ದರು.