Don't Miss!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Automobiles 20 ವರ್ಷದ ಬಳಿಕ ಲ್ಯಾಂಬೋರ್ಗಿನಿ ಲೋಗೋಗೆ ಹೊಸ ಟಚ್: ಈ ಕಂಪನಿಯ ಕಾರುಗಳು ಯಾಕೆ ಫೇಮಸ್?
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡ್ರಗ್ಸ್ ವಿರುದ್ಧ ಸಮರ ಸಾರಿದ್ದ ಕಂಗನಾ ರಣಾವತ್ಗೆ ಸುತ್ತಿಕೊಳ್ತು ಉರುಳು!
ಮಹಾರಾಷ್ಟ್ರ ಸರ್ಕಾರ ಮತ್ತು ನಟಿ ಕಂಗನಾ ರಣಾವತ್ ನಡುವಿನ ಸಮರ ಸದ್ಯಕ್ಕೆ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಸುಶಾಂತ್ ಸಿಂಗ್ ರಜಪೂತ್ ಸಾವಿನ ತನಿಖೆಗೆ ಬಗ್ಗೆ ಪ್ರಶ್ನಿಸಿದ್ದ ಕಂಗನಾ, ಮುಂಬೈ ಪೊಲೀಸರು ಬಾಲಿವುಡ್ ಮಾಫಿಯಾ ಜೊತೆ ಸೇರಿ ಆತ್ಮಹತ್ಯೆ ಎಂದು ಬಿಂಬಿಸುತ್ತಿದ್ದಾರೆ ಎಂದು ಬಹಿರಂಗವಾಗಿ ಟೀಕಿಸಿದರು.
ಡ್ರಗ್ಸ್ ವಿಚಾರದಲ್ಲಿ ಮತ್ತೆ ಮಹಾರಾಷ್ಟ್ರ ಸರ್ಕಾರ ಮತ್ತು ಬಾಲಿವುಡ್ ಇಂಡಸ್ಟ್ರಿಯನ್ನು ಕಂಗನಾ ಟಾರ್ಗೆಟ್ ಮಾಡಿದರು. ಹಿಂದಿ ಚಿತ್ರರಂಗದಲ್ಲಿ ಶೇಕಡಾ 99 ರಷ್ಟು ಮಂದಿ ಡ್ರಗ್ಸ್ ವ್ಯಸನಿಗಳು ಎಂದು ದೂರಿದ್ದರು. ಇದೀಗ, ಡ್ರಗ್ಸ್ ಪ್ರಕರಣ ಕ್ವೀನ್ ನಾಯಕಿಗೂ ಉರುಳಾಗಿದೆ. ಕಂಗನಾ ಅವರಿಗೆ ಡ್ರಗ್ಸ್ ನಂಟಿದೆ ಎಂಬ ಆರೋಪದ ಕುರಿತು ತನಿಖೆ ನಡೆಸಲು ಮಹಾರಾಷ್ಟ್ರ ಸರ್ಕಾರ ಆದೇಶಸಿದೆ. ಮುಂದೆ ಓದಿ....
'ಕಂಗನಾ ರಣಾವತ್ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ' ಎಂದ ನಿರ್ದೇಶಕ
ತನಿಖೆಗೆ ಆದೇಶಿಸಿದ ಸರ್ಕಾರ
ನಟ ಶೇಖರ್ ಸುಮನ್ ಅವರ ಪುತ್ರ ಅಧ್ಯಾಯನ್ ಸುಮನ್ ಅವರ ಹಳೆಯ ಸಂದರ್ಶನದ ಆಧಾರದಲ್ಲಿ ನಟಿ ಕಂಗನಾ ಅವರನ್ನು ತನಿಖೆಗೆ ಒಳಪಡಿಸಲು ಮಹಾರಾಷ್ಟ್ರ ಸರ್ಕಾರ ಮಾದಕ ದ್ರವ್ಯ ವಿರೋಧಿ ವಿಭಾಗಕ್ಕೆ ಸೂಚಿಸಿದೆ.
ಅಧ್ಯಾಯನ್ ಸುಮನ್ ವಿಡಿಯೋದಲ್ಲಿ ಏನಿದೆ?
2018ರ ಸಂದರ್ಶನದಲ್ಲಿ ಡ್ರಗ್ಸ್ ವಿಚಾರವಾಗಿ ಕಂಗನಾ ರಣಾವತ್ ಕುರಿತು ಆರೋಪ ಮಾಡಿರುವ ಅಧ್ಯಾಯನ್ ಸುಮನ್ ''ಕಂಗನಾ ನಿಷೇದಿತ ನಾಕೋರ್ಟಿಕ್ ಡ್ರಗ್ ಸೇವಿಸುತ್ತಿದ್ದರು. ನನಗೂ ಸೇವಿಸುವಂತೆ ಒತ್ತಾಯಿಸಿದ್ದರು. 2008ರ ಪಾರ್ಟಿಯಲ್ಲೂ ಡ್ರಗ್ ಸೇವಿಸು ಎಂದಿದ್ದರು. ನಾನು ತೆಗೆದುಕೊಂಡಿರಲಿಲ್ಲ'' ಎಂದು ಹೇಳಿದ್ದಾರೆ. ಈ ವಿಡಿಯೋ ತುಣುಕು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಡ್ರಗ್ಸ್ ಸೇವಿಸುತ್ತೇನೆಂದು ಒಪ್ಪಿಕೊಂಡಿದ್ದ ಕಂಗನಾ, ಈಗ ಹೇಳಿಕೆ ಉಲ್ಟಾ!
ತನಿಖೆಗೆ ಗ್ರೀನ್ ಸಿಗ್ನಲ್ ನೀಡಿದ ಗೃಹ ಸಚಿವ
ಅಧ್ಯಾಯನ್ ಸುಮನ್ ಅವರ ಹೇಳಿಕೆ ಅಧಾರಿಸಿ ಕಂಗನಾ ಅವರನ್ನು ತನಿಖೆ ಮಾಡಲು ಅನುಮತಿ ನೀಡಬೇಕೆಂದು ಮುಂಬೈ ಪೊಲೀಸರು ಗೃಹ ಇಲಾಖೆಗೆ ಪತ್ರ ಬರೆದಿದ್ದರು. ಇದಕ್ಕೆ ಪ್ರತಿಕ್ರಿಯೆ ಗೃಹ ಇಲಾಖೆ ಸಮ್ಮತಿ ಸೂಚಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಅನಿಲ್ ದೇಶ್ಮುಖ್ ''ನಟಿಯ ಕುರಿತು ಡ್ರಗ್ಸ್ ತನಿಖೆ ಮಾಡಲು ಆದೇಶಿಸಿದ್ದೇವೆ'' ಎಂದಿದ್ದಾರೆ.
Recommended Video
ಆರೋಪ ಸಾಬೀತಾದರೆ ಮುಂಬೈ ಬಿಡ್ತೀನಿ
ಮಹಾರಾಷ್ಟ್ರ ಸರ್ಕಾರದ ಆದೇಶದ ಕುರಿತು ಮಾತನಾಡಿರುವ ಕಂಗನಾ ''ತನಿಖೆಗೆ ನಾನು ಗೌರವಿಸುತ್ತೇನೆ ಮತ್ತು ಸಂತೋಷದಿಂದ ಒಪ್ಪಿಕೊಳ್ಳುತ್ತೇನೆ. ದಯವಿಟ್ಟು ನನ್ನನ್ನು ಡ್ರಗ್ಸ್ ಪರೀಕ್ಷಗೆ ಒಳಪಡಿಸಿ, ನನ್ನ ಫೋನ್ ಕಾಲ್ ವಿವರನ್ನು ತನಿಖೆ ಮಾಡಿ. ನನಗೆ ಏನಾದರೂ ಡ್ರಗ್ಸ್ ಪೆಡ್ಲರ್ಗಳ ಜೊತೆ ಸಂಪರ್ಕ ಇರುವುದು ಪತ್ತೆಯಾದರೆ ನನ್ನ ತಪ್ಪನ್ನು ನಾನು ಒಪ್ಪಿಕೊಳ್ಳುತ್ತೇನೆ ಹಾಗೂ ಶಾಶ್ವತವಾಗಿ ಮುಂಬೈ ಬಿಡುತ್ತೇನೆ. ಎದುರು ನೋಡುತ್ತಿದ್ದೇನೆ'' ಎಂದಿದ್ದಾರೆ.