Don't Miss!
- Technology ಮತ್ತೊಂದು ಅಗ್ಗದ 5G ಫೋನ್ ಲಾಂಚ್ ಮಾಡಲು ಸಜ್ಜಾದ ರಿಯಲ್ಮಿ!..ಫೀಚರ್ಸ್ ಏನು?
- News ದೇವನಹಳ್ಳಿ, ಹೊಸಕೋಟೆ, ದೊಡ್ಡಬಳ್ಳಾಪುರ & ನೆಲಮಂಗಲ ಹೊಸ ಉಪನಗರ: ಡಾ. ಕೆ. ಸುಧಾಕರ್ ಭರವಸೆ!
- Finance ಜಗತ್ತಿನಾದ್ಯಂತ 6,000 ಉದ್ಯೋಗಿಗಳನ್ನು ವಜಾ ಮಾಡಿದ ಡೆಲ್
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Sports IPL 2024 RR vs DC: ರಾಯಲ್ಸ್ ವಿರುದ್ಧ ಗೆಲುವಿನೊಂದಿಗೆ ಪುಟಿದೇಳುವುದೇ ಕ್ಯಾಪಿಟಲ್ಸ್?; ಸಂಭಾವ್ಯ ಆಡುವ 11ರ ಬಳಗ
- Lifestyle ವಿಶ್ವದ ದುಬಾರಿ ಹಣ್ಣುಗಳಿವು..! ನೀವು ಊಹಿಸದ ಬೆಲೆ ಈ ಹಣ್ಣುಗಳಿಗಿದೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಷ್ಟ್ರಪ್ರಶಸ್ತಿ ಪುರಸ್ಕೃತ ಖ್ಯಾತ ನಟಿ ಸುರೇಖಾ ಸಿಕ್ರಿ ನಿಧನ
ರಾಷ್ಟ್ರಪ್ರಶಸ್ತಿ ಪುರಸ್ಕೃತ ಖ್ಯಾತ ನಟಿ ಸುರೇಖಾ ಸಿಕ್ರಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. 75 ವರ್ಷದ ನಟಿ ಸುರೇಖಾ ಇಂದು (ಜುಲೈ 16) ಬೆಳಗ್ಗೆ ಮುಂಬೈನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ವರದಿಗಳ ಪ್ರಕಾರ ಸುರೇಖಾ 2018ರಲ್ಲಿ ಪಾರ್ಶ್ವವಾಯುಗೆ ತುತ್ತಾಗಿದ್ದರು ಎನ್ನುವ ಮಾಹಿತಿ ತಿಳಿದುಬಂದಿದೆ. 2020ರಲ್ಲಿ ಸುರೇಖಾಗೆ ಬ್ರೈನ್ ಸ್ಟ್ರೋಕ್ ಆಗಿದ್ದು, ತೀವ್ರ ಅಸ್ವಸ್ಥರಾಗಿದ್ದರು ಎನ್ನಲಾಗುತ್ತಿದೆ.
3 ಬಾರಿ ರಾಷ್ಟ್ರಪ್ರಶಸ್ತಿ ಮುಡಿಗೇರಿಸಿಕೊಂಡಿರುವ ನಟಿ ಸುರೇಖಾ ಸಿಕ್ರಿ ಅನಾರೋಗ್ಯದ ಬಗ್ಗೆ ಕುಟುಂಬದವರು ಬಹಿರಂಗ ಪಡಿಸಿರಲಿಲ್ಲ. ಇದೀಗ ನಿಧನದ ಬಳಿಕ ಮಾಹಿತಿ ಹಂಚಿಕೊಂಡಿರುವ ಸುರೇಖಾ ಮ್ಯಾನೇಜರ್, "ಮೂರು ಬಾರಿ ರಾಷ್ಟ್ರಪ್ರಶಸ್ತಿ ವಿಜೇತ ನಟಿ ಸುರೇಖಾ ಸಿಕ್ರಿ ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನಹೋದಿದರು. ಬ್ರೈನ್ ಸ್ಟ್ರೋಕ್ ನಿಂದ ಬಳಲುತ್ತಿದ್ದರು" ಎಂದು ಹೇಳಿದ್ದಾರೆ.
ನಟಿ ಸುರೇಖಾ ಸಿಕ್ರಿ 1978ರಲ್ಲಿ 'ಕಿಸ್ಸಾ ಕುರ್ಸಿ ಕಾ' ಚಿತ್ರದಿಂದ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟಿದ್ದರು. ಸುರೇಖಾ 1988ರಲ್ಲಿ ಬಂದ 'ತಮಾಸ್', 1995ರಲ್ಲಿ ಬಿಡುಗಡೆಯಾದ 'ಮಮ್ಮೊ' ಮತ್ತು 2018ರಲ್ಲಿ ಬಂದ 'ಬದೈ ಹೋ' ಸಿನಿಮಾಗಾಗಿ ಸುರೇಖಾ ಅತ್ಯುತ್ತಮ ಪೋಷಕ ನಟಿ ರಾಷ್ಟ್ರಪ್ರಶಸ್ತಿ ಮುಡಿಗೇರಿಸಿಕೊಂಡಿದ್ದರು. ಸಿನಿಮಾ ಮಾತ್ರವಲ್ಲದೆ ಕಿರುತೆರೆಯಲ್ಲೂ ಸುರೇಖಾ ಖ್ಯಾತಿಗಳಿಸಿದ್ದರು.
'ಬಾಲಿಕಾ ವಧು' ಧಾರಾವಾಹಿ ದೊಡ್ಡ ಮಟ್ಟದಲ್ಲಿ ಹೆಸರು ತಂದುಕೊಟ್ಟಿತ್ತು. ಇನ್ನು 'ಬದೈ ಹೋ' ಸಿನಿಮಾದ ಪಾತ್ರ ಅಪಾರ ಜನರ ಮೆಚ್ಚುಗೆಗೆ ಪಾತ್ರವಾಗಿತ್ತು. 2018ರಲ್ಲಿ ನಟಿ ಸುರೇಖಾ ಬ್ರೈನ್ ಸ್ಕ್ರೋಕ್ ನಿಂದ ಬಾತ್ ರೂಮ್ ನಲ್ಲಿ ಬಿದ್ದು ತೆಲೆಗೆ ತೀವ್ರವಾದ ಏಟು ಬಿದ್ದಿತ್ತು.
Recommended Video
ಚೇತರಿಸಿಕೊಳ್ಳುತ್ತಿದ್ದ ಸುರೇಖಾ ಸಂದರ್ಶನದಲ್ಲಿ ಮಾತನಾಡಿ, "ನನಗೆ ಹತ್ತು ತಿಂಗಳ ಹಿಂದೆ ಬ್ರೈನ್ ಸ್ಟ್ರೋಕ್ ಆಗಿತ್ತು. ಅಂದಿನಿಂದ ಇವತ್ತಿನ ವರೆಗೂ ನಾನು ಚೇತರಿಸಿಕೊಳ್ಳುತ್ತಿದ್ದೇನೆ. ಅನಾರೋಗ್ಯದಿಂದ ನನಗೆ ಕೆಲಸ ಮಾಡಲು ನನಗೆ ಸಾಧ್ಯವಾಗಲಿಲ್ಲ. ಶೀಘ್ರದಲ್ಲೇ ಸರಿಯಾಗುತ್ತೇನೆ ಎಂದು ವೈದ್ಯರು ಹೇಳಿದ್ದಾರೆ" ಎಂದಿದ್ದರು.