Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿರ್ದೇಶಕ ಬುದ್ಧದೇವ್ ದಾಸ್ ಗುಪ್ತ ನಿಧನ; ಪ್ರಧಾನಿ ಮೋದಿ ಸಂತಾಪ
ಬಂಗಾಳಿಯ ಖ್ಯಾತ ಚಿತ್ರ ನಿರ್ದೇಶಕ ಬುದ್ಧದೇವ್ ದಾಸ್ ಗುಪ್ತಾ ಕೊಲ್ಕತ್ತಾದ ತಮ್ಮ ನಿವಾಸದಲ್ಲಿ ಇಂದು (ಜೂನ್ 10) ಬೆಳಗ್ಗೆ ನಿಧನರಾಗಿದ್ದಾರೆ. 77 ವರ್ಷದ ನಿರ್ದೇಶಕ ಬುದ್ಧದೇವ್ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದರು ಮತ್ತು ಡಯಾಲಿಸಿಸ್ ಗೆ ಒಳಗಾಗುತ್ತಿದ್ದರು.
ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿರ್ದೇಶಕ ಬುದ್ಧದೇವ್ ನಿಧನಕ್ಕೆ ಚಿತ್ರರಂಗದ ಗಣ್ಯರು ಮತ್ತು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿ, ಬೆಂಗಾಲಿ ಚಿತ್ರರಂಗಕ್ಕೆ ದೊಡ್ಡ ನಷ್ಟ ಎಂದು ಹೇಳಿದ್ದಾರೆ.
ದಿಗ್ಗಜ ಸಂಗೀತ ನಿರ್ದೇಶಕ ಘಂಟಸಾಲರ ಮಗ ರತ್ನಕುಮಾರ್ ನಿಧನ
ಖ್ಯಾತ ನಿರ್ದೇಶಕ ಬುದ್ಧದೇವ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಕೂಡ ಸಂತಾಪ ಸೂಚಿಸಿದ್ದಾರೆ. 'ಬುದ್ಧದೇವ್ ಸಾದ್ ಗುಪ್ತ ನಿಧಿನದಿಂದ ತೀವ್ರ ದುಃಖವಾಗಿದೆ. ಪ್ರಖ್ಯಾತ ಚಿಂತಕ ಮತ್ತು ಕವಿಯೂ ಆಗಿದ್ದರೂ. ಅವರ ಆತ್ಮಕ್ಕೆ ಶಾಂತಿ ಸಿಗಲಿ' ಎಂದು ಟ್ವೀಟ್ ಮಾಡಿದ್ದಾರೆ.
ಬುದ್ಧದೇವ್ ಸುಪ್ರಸಿದ್ಧ ನಿರ್ದೇಶಕ ಜೊತೆಗೆ ಬಂಗಾಳಿಯ ಅತ್ಯುತ್ತಮ ಕವಿ ಕೂಡ ಆಗಿದ್ದರು. ಅವರ ಅನೇಕ ಸಿನಿಮಾಗಳು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದ ಗಮನ ಸೆಳೆದಿವೆ. ವಿಮರ್ಶಾತ್ಮಕ ಮೆಚ್ಚುಗೆ ಪಡೆಯುವ ಚಿತ್ರಗಳನ್ನು ನಿರ್ದೇಶಿಸುವಲ್ಲಿ ಬುದ್ಧದೇವ್ ಪ್ರಸಿದ್ಧರಾಗಿದ್ದರು. ಉತ್ತರ, ಬಾಗ್ ಬಹದ್ದೂರ್, ತಹದರ್ ಕಥಾ ಸೇರಿದಂತೆ ಅನೇಕ ಅದ್ಭುತ ಸಿನಿಮಾಗಳನ್ನು ನಿರ್ದೇಶನ ಮಾಡಿದ ಖ್ಯಾತಿ ಅವರದ್ದು.
Recommended Video
ಇನ್ನು ವಿಶೇಷ ಎಂದರೆ ಬುದ್ಧದೇವ್ ನಿರ್ದೇಶನದ 5 ಚಿತ್ರಗಳಿಗೆ ಉತ್ತಮ ಸಿನಿಮಾ ರಾಷ್ಟ್ರಪ್ರಶಸ್ತಿ ಬಂದಿದೆ. ಬಾಗ್ ಬಹದ್ದೂರ್, ಚರಚಾರ್, ಲಾಲ್ ದರ್ಜಾ, ಮೊಂಡೋ ಮೆಯೆರ್ ಉಪಕ್ಯಾನ್ ಮತ್ತು ಕಾಲ್ಪುರುಷ್ ಚಿತ್ರಗಳಿಗೆ ಅತ್ಯುತ್ತಮ ಸಿನಿಮಾ ರಾಷ್ಟ್ರಪ್ರಶಸ್ತಿ ಬಂದಿದೆ. ಇನ್ನು ಉತ್ತರ ಮತ್ತು ಸ್ವಪ್ನರ್ ದಿನ ಚಿತ್ರದ ನಿರ್ದೇಶನಕ್ಕೆ ಅತ್ಯುತ್ತಮ ನಿರ್ದೇಶಕ ರಾಷ್ಟ್ರಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಅನೇಕ ಅಂತಾರಾಷ್ಟ್ರೀಯ ಪ್ರಶಸ್ತಿಗಳು ಬುದ್ಧದೇವ್ ಅವರನ್ನು ಅರಸಿ ಬಂದಿವೆ.