Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡ್ರಗ್ಸ್ ಕೇಸ್: ರಿಯಾ ಚಕ್ರವರ್ತಿಗೆ ಡ್ರಗ್ಸ್ ಸರಬರಾಜು ಮಾಡ್ತಿದ್ದ ವ್ಯಕ್ತಿ ಅರೆಸ್ಟ್
ಬಾಲಿವುಡ್ ಡ್ರಗ್ಸ್ ಪ್ರಕರಣದಲ್ಲಿ ಪ್ರಮುಖ ಡ್ರಗ್ ಪೆಡ್ಲರ್ನನ್ನು ಎನ್ಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ನಟಿ ರಿಯಾ ಚಕ್ರವರ್ತಿ ಹಾಗೂ ಸಹೋದರ ಶೌವಿಕ್ ಚಕ್ರವರ್ತಿಗೆ ಡ್ರಗ್ಸ್ ತಂದು ಕೊಡ್ತಿದ್ದ ಪೆಡ್ಲರ್ ರಗೆಲ್ ಮಹಕಲ್ ಎಂಬ ವ್ಯಕ್ತಿಯನ್ನು ಎನ್ಸಿಬಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಡ್ರಗ್ಸ್ ಪ್ರಕರಣ: ರಿಯಾ ಚಕ್ರವರ್ತಿ ಸಹೋದರನಿಗೆ ಜಾಮೀನು ಮಂಜೂರು
ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಡ್ರಗ್ಸ್ ಆಯಾಮದಲ್ಲಿ ತನಿಖೆ ಆರಂಭವಾದ ಮೇಲೆ ರಗೆಲ್ ಮಹಕಲ್ ತಲೆಮರೆಸಿಕೊಂಡಿದ್ದ. ಇದೀಗ, ಪೆಡ್ಲರ್ ಮಹಕಲ್ನನ್ನು ಮುಂಬೈನ ಪಶ್ಚಿಮ ಉಪನಗರದಲ್ಲಿ ಎನ್ಸಿಬಿ ಬಂಧಿಸಿದೆ.
ಡ್ರಗ್ಸ್ ಚೈನ್ ಬೆನ್ನತ್ತಿದ್ದ ಪೊಲೀಸರಿಗೆ ರಗೆಲ್ ಮಹಕಲ್ ಪ್ರಮುಖ ಡ್ರಗ್ ಪೆಡ್ಲರ್ ಎಂದು ತಿಳಿದು ಬಂದಿತ್ತು. ರಗೆಲ್ ಮಹಕಲ್ ಕೇಶ್ವಾನಿಗೆ ಡ್ರಗ್ಸ್ ಪೂರೈಸುತ್ತಿದ್ದ, ನಂತರ ಅದನ್ನು ಕೈಜಾನ್ ಎಂಬ ವ್ಯಕ್ತಿಗೆ ಹಸ್ತಾಂತರಿಸುತ್ತಿದ್ದನು. ಕೈಜಾನ್ ಅದನ್ನು ನಟಿ ರಿಯಾ ಚಕ್ರವರ್ತಿ ಮತ್ತು ಸಹೋದರ ಶೌವಿಕ್ಗೆ ನೀಡುತ್ತಿದ್ದನು ಎಂದು ತಿಳಿದು ಬಂದಿದೆ.
ಅಂದ್ಹಾಗೆ, ಡ್ರಗ್ಸ್ ಪ್ರಕರಣದಲ್ಲಿ ನಟಿ ರಿಯಾ ಮತ್ತು ಸಹೋದರ ಶೌವಿಕ್ ಚಕ್ರವರ್ತಿ ಸೆಪ್ಟೆಂಬರ್ ತಿಂಗಳಲ್ಲಿ ಅರೆಸ್ಟ್ ಆಗಿದ್ದರು. ನಂತರ ರಿಯಾಗೆ ಅಕ್ಟೋಬರ್ 7 ರಂದು ಬಾಂಬೆ ಹೈ ಕೋರ್ಟ್ ಜಾಮೀನು ನೀಡಿತ್ತು, ಆ ಬಳಿಕ ರಿಯಾ ಸಹೋದರನಿಗೂ ಜಾಮೀನು ಸಿಕ್ಕಿತ್ತು.
ಡ್ರಗ್ಸ್ ಪ್ರಕರಣ: ರಿಯಾ ಸಹೋದರನ ವಿರುದ್ಧ ಪ್ರಕರಣ ಸೂಕ್ತವಲ್ಲ ಎಂದ ನ್ಯಾಯಾಲಯ
Recommended Video
ಜೂನ್ 14 ರಂದು ಮುಂಬೈನ ತನ್ನ ಫ್ಲ್ಯಾಟ್ನಲ್ಲಿ ನೇಣು ಬಿಗಿದುಕೊಂಡು ಸ್ಥಿತಿಯಲ್ಲಿ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ದೇಹ ಸಿಕ್ಕಿದೆ. ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಪೊಲೀಸರು ನಿರ್ಧರಿಸಿ ತನಿಖೆ ಆರಂಭಿಸಿದರು. ತನಿಖೆಯ ನಡುವೆ ಡ್ರಗ್ಸ್ ಅನುಮಾನವೂ ವ್ಯಕ್ತವಾದ ಹಿನ್ನೆಲೆ ಆ ಆಯಾಮದಲ್ಲೂ ಪೊಲೀಸರು ಹುಡುಕಾಟ ಶುರು ಮಾಡಿದ್ದರು.