Don't Miss!
- News Big Offer for Bengaluru Voters: ಮತದಾರರಿಗೆ ಗುಡ್ ನ್ಯೂಸ್.. ರಿಯಾಯಿತಿ ದರದಲ್ಲಿ ತಿಂಡಿ ವ್ಯವಸ್ಥೆ
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುಶಾಂತ್ ಪ್ರಕರಣದ ತನಿಖೆ ಮಧ್ಯೆ ನಟಿ ಶ್ರೀದೇವಿ ಸಾವಿನ ಬಗ್ಗೆ CBI ತನಿಖೆಗೆ ನೆಟ್ಟಿಗರ ಒತ್ತಾಯ
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆ ನಡೆಯುತ್ತಿದೆ. ಸುಶಾಂತ್ ಸಿಂಗ್ ಅವರದ್ದು, ಆತ್ಮಹತ್ಯೆಯೋ ಅಥವಾ ಕೊಲೆಯೂ ಎನ್ನುವ ಚರ್ಚೆ ನಡೆಯುತ್ತಿದೆ. ನೆಟ್ಟಿಗರು ಸುಶಾಂತ್ ಸಿಂಗ್ ಅವರದ್ದು ಕೊಲೆ, ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕೆಂದು ಒತ್ತಾಯ ಮಾಡುತ್ತಿದ್ದರು. ಈಗ ಸುಶಾಂತ್ ಸಾವಿನ ಪ್ರಕರಣ ಸಿಬಿಐ ಅಂಗಳದಲ್ಲಿದೆ.
ಈ ನಡುವೆ ಇದೀಗ ನಟಿ ಶ್ರೀದೇವಿ ಸಾವಿನ ಪ್ರಕರಣ ಮತ್ತೆ ಸದ್ದು ಮಾಡುತ್ತಿದೆ. ನೆಟ್ಟಿಗರು ಶ್ರೀದೇವಿ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಒತ್ತಾಯ ಮಾಡುತ್ತಿದ್ದಾರೆ. ಟ್ವಿಟ್ಟರ್ ನಲ್ಲಿ #CBIEnquiryForSridevi ಎಂದು ಟ್ರೆಂಡ್ ಮಾಡುತ್ತಿದ್ದಾರೆ.
ರಿಯಾ ಕುಟುಂಬಕ್ಕೆ ED ಅಧಿಕಾರಿಗಳಿಂದ ಮತ್ತೊಂದು ಶಾಕ್: 4 ಮೊಬೈಲ್ ಫೋನ್ ಸೀಜ್
ನಟಿ ಶ್ರೀದೇವಿ ನಿಧನಹೊಂದಿ ಎರಡು ವರ್ಷಗಳಾಗಿದೆ. 2018 ಫೆಬ್ರವರಿ 25ರಂದು ದುಬೈನ ಹೋಟಲ್ ನಲ್ಲಿ ಶ್ರೀದೇವಿ ಸಾವನ್ನಪ್ಪಿದ್ದರು. ಹೋಟೆಲ್ ನ ಬಾತ್ ಟಬ್ ನಲ್ಲಿ ಶ್ರೀದೇವಿ ಶವವಾಗಿ ಪತ್ತೆಯಾಗಿದ್ದರು. ದುಬೈ ವಿಧಿ ವಿಜ್ಞಾನ ವರದಿ ಶ್ರೀದೇವಿ ಆಕಸ್ಮಿಕವಾಗಿ ಮುಳುಗಿ ಸಾವನ್ನಪ್ಪಿರುದಾಗಿ ವರದಿ ನೀಡಿತ್ತು. ಆದರೆ ಶ್ರೀದೇವಿ ಸಾವಿನ ಬಗ್ಗೆಯು ಸಾಕಷ್ಟು ಅನುಮಾನ ಮೂಡಿಸಿತ್ತು.
ಆದರೀಗ ಶ್ರೀದೇವಿ ಸಾವಿನ ಪ್ರಕರಣವನ್ನು ಸಿಬಿಐಗೆ ನೀಡಿ ಎಂದು ಸಾಮಾಜಿಕ ಜಾಲತಾಣದಲ್ಲಿ ಒತ್ತಾಯ ಮಾಡುತ್ತಿದ್ದಾರೆ. ಶ್ರೀದೇವಿ ಅವರದ್ದು ಕೊಲೆ, ಬಾತ್ ಟಬ್ ನಲ್ಲಿ ಮುಳುಗಿ ಸಾಯಲು ಹೇಗೆ ಸಾಧ್ಯ ಎಂದು ಪ್ರಶ್ನಿಸುತ್ತಿದ್ದಾರೆ. ಶ್ರೀದೇವಿ ಅವರದ್ದು ಕೊಲೆಯೋ ಅಥವಾ ಆಕಸ್ಮಿಕ ಸಾವೋ ಎನ್ನುವ ಅನುಮಾನ ಅಭಿಮಾನಿಗಳನ್ನು ಈಗಲು ಕಾಡುತ್ತಿದೆ.