Don't Miss!
- News Annamalai: ಒಂದು ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕಾಣೆಯಾಗಿದೆ: ಅಣ್ಣಾಮಲೈ ಆರೋಪ
- Sports Rishabh Pant: ಟಿ20 ವಿಶ್ವಕಪ್ಗೆ ರಿಷಭ್ ಪಂತ್ ಭಾರತ ತಂಡದಲ್ಲಿರಬೇಕು
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುಶಾಂತ್ ಪ್ರಕರಣದ ತನಿಖೆ ಮಧ್ಯೆ ನಟಿ ಶ್ರೀದೇವಿ ಸಾವಿನ ಬಗ್ಗೆ CBI ತನಿಖೆಗೆ ನೆಟ್ಟಿಗರ ಒತ್ತಾಯ
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆ ನಡೆಯುತ್ತಿದೆ. ಸುಶಾಂತ್ ಸಿಂಗ್ ಅವರದ್ದು, ಆತ್ಮಹತ್ಯೆಯೋ ಅಥವಾ ಕೊಲೆಯೂ ಎನ್ನುವ ಚರ್ಚೆ ನಡೆಯುತ್ತಿದೆ. ನೆಟ್ಟಿಗರು ಸುಶಾಂತ್ ಸಿಂಗ್ ಅವರದ್ದು ಕೊಲೆ, ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕೆಂದು ಒತ್ತಾಯ ಮಾಡುತ್ತಿದ್ದರು. ಈಗ ಸುಶಾಂತ್ ಸಾವಿನ ಪ್ರಕರಣ ಸಿಬಿಐ ಅಂಗಳದಲ್ಲಿದೆ.
ಈ ನಡುವೆ ಇದೀಗ ನಟಿ ಶ್ರೀದೇವಿ ಸಾವಿನ ಪ್ರಕರಣ ಮತ್ತೆ ಸದ್ದು ಮಾಡುತ್ತಿದೆ. ನೆಟ್ಟಿಗರು ಶ್ರೀದೇವಿ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಒತ್ತಾಯ ಮಾಡುತ್ತಿದ್ದಾರೆ. ಟ್ವಿಟ್ಟರ್ ನಲ್ಲಿ #CBIEnquiryForSridevi ಎಂದು ಟ್ರೆಂಡ್ ಮಾಡುತ್ತಿದ್ದಾರೆ.
ರಿಯಾ ಕುಟುಂಬಕ್ಕೆ ED ಅಧಿಕಾರಿಗಳಿಂದ ಮತ್ತೊಂದು ಶಾಕ್: 4 ಮೊಬೈಲ್ ಫೋನ್ ಸೀಜ್
ನಟಿ ಶ್ರೀದೇವಿ ನಿಧನಹೊಂದಿ ಎರಡು ವರ್ಷಗಳಾಗಿದೆ. 2018 ಫೆಬ್ರವರಿ 25ರಂದು ದುಬೈನ ಹೋಟಲ್ ನಲ್ಲಿ ಶ್ರೀದೇವಿ ಸಾವನ್ನಪ್ಪಿದ್ದರು. ಹೋಟೆಲ್ ನ ಬಾತ್ ಟಬ್ ನಲ್ಲಿ ಶ್ರೀದೇವಿ ಶವವಾಗಿ ಪತ್ತೆಯಾಗಿದ್ದರು. ದುಬೈ ವಿಧಿ ವಿಜ್ಞಾನ ವರದಿ ಶ್ರೀದೇವಿ ಆಕಸ್ಮಿಕವಾಗಿ ಮುಳುಗಿ ಸಾವನ್ನಪ್ಪಿರುದಾಗಿ ವರದಿ ನೀಡಿತ್ತು. ಆದರೆ ಶ್ರೀದೇವಿ ಸಾವಿನ ಬಗ್ಗೆಯು ಸಾಕಷ್ಟು ಅನುಮಾನ ಮೂಡಿಸಿತ್ತು.
ಆದರೀಗ ಶ್ರೀದೇವಿ ಸಾವಿನ ಪ್ರಕರಣವನ್ನು ಸಿಬಿಐಗೆ ನೀಡಿ ಎಂದು ಸಾಮಾಜಿಕ ಜಾಲತಾಣದಲ್ಲಿ ಒತ್ತಾಯ ಮಾಡುತ್ತಿದ್ದಾರೆ. ಶ್ರೀದೇವಿ ಅವರದ್ದು ಕೊಲೆ, ಬಾತ್ ಟಬ್ ನಲ್ಲಿ ಮುಳುಗಿ ಸಾಯಲು ಹೇಗೆ ಸಾಧ್ಯ ಎಂದು ಪ್ರಶ್ನಿಸುತ್ತಿದ್ದಾರೆ. ಶ್ರೀದೇವಿ ಅವರದ್ದು ಕೊಲೆಯೋ ಅಥವಾ ಆಕಸ್ಮಿಕ ಸಾವೋ ಎನ್ನುವ ಅನುಮಾನ ಅಭಿಮಾನಿಗಳನ್ನು ಈಗಲು ಕಾಡುತ್ತಿದೆ.