Don't Miss!
- News ಸಿನಿಮಾದಲ್ಲಿ ರೀಲ್ ಬಿಟ್ಟಂತೆ ರಾಜಕೀಯದಲ್ಲೂ ರೀಲ್ ಬಿಟ್ಟರೆ ಜನ ಒಪ್ಪಲ್ಲ: ಡಿ ಕೆ ಸುರೇಶ್ ಹೀಗೆ ಹೇಳಿದ್ದು ಯಾರಿಗೆ?
- Automobiles ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಣ್ವೀರ್ ಸಿಂಗ್ 'ತಖ್ತ್' ಸಿನಿಮಾ ವಿರುದ್ಧ ಭುಗಿಲೆದ್ದ ಆಕ್ರೋಶ
ಬಾಲಿವುಡ್ ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ಕರಣ್ ಜೋಹರ್ ಕನಸಿನ ತಖ್ತ್ ಸಿನಿಮಾಗೆ ಸಂಕಷ್ಟ ಎದುರಾಗಿದೆ. ಬಾಲಿವುಡ್ ನ ದೊಡ್ಡ ದೊಡ್ಡ ಕಲಾವಿದರು ಅಭಿನಯಿಸುತ್ತಿರುವ ತಖ್ತ್ ಸಿನಿಮಾ ಬ್ಯಾನ್ ಮಾಡುವಂತೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
BoycottTakht ಎಂದು ಹ್ಯಾಶ್ ಟ್ಯಾಗ್ ಹಾಕಿ ಟ್ವಿಟ್ಟರ್ ನಲ್ಲಿ ಟ್ರೆಂಡ್ ಮಾಡುತ್ತಿದ್ದಾರೆ. ಅಂದ್ಹಾಗೆ ನೆಟ್ಟಿಗರು ರೊಚ್ಚಿಗೇಳಲು ಕಾರಣ ತಖ್ತ್ ಸಿನಿಮಾದ ಬರಹಗಾರ ಹುಸೇನ್ ಹೈಡ್ರಿ ಟ್ವೀಟ್. ಹೌದು, ಹುಸೇನ್ ಮಾಡಿರುವ ವಿವಾದಾತ್ಮಕ ಟ್ವೀಟ್ ಈಗ ಇಡೀ ಸಿನಿಮಾ ತಂಡಕ್ಕೆ ಸಂಕಷ್ಟ ತಂದೊಡ್ಡಿದೆ.
ಫೋಟೋಗ್ರಫರ್ ಜೊತೆ ದಿಶಾ ಪಟಾನಿ ಬಾಡಿಗಾರ್ಡ್ ಫೈಟ್
ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಹುಸೇನ್ ಹೈಡ್ರಿ "ಈ ಎರಡು ಪದಗಳನ್ನು ಬಳಸಿ. ಈ ಎರಡು ಪದಗಳು ತುಂಬ ಮುಖ್ಯ" ಎಂದು ಹೇಳಿ, "ಹಿಂದೂ ಭಯೋತ್ಪಾದಕರು" ಎನ್ನುವ ಪದವನ್ನು ಬಳಿಸಿದ್ದಾರೆ. ಈ ಪದವನ್ನು 9 ಬಾರಿ ಬರೆದಿದ್ದಾರೆ.
ಹುಸೇನ್ ಮಾಡಿರುವ ಈ ಟ್ವೀಟ್ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ತಖ್ತ್ ಸಿನಿಮಾ ವಿರುದ್ಧ ರೊಚ್ಚಿಗೆದ್ದಿದ್ದಾರೆ. ಸಿನಿಮಾದಿಂದ ಹುಸೇನ್ ಅವರನ್ನು ಕೈಬಿಡುವಂತೆ ಒತ್ತಾಯಿಸುತ್ತಿದ್ದಾರೆ. ಇಂಥವರ ಜೊತೆ ಸಿನಿಮಾ ಮಾಡಬೇಕಿ ಎಂದು ಕರಣ್ ಗೆ ಹೇಳುತ್ತಿದ್ದಾರೆ. ಆದರೆ ಈ ಬಗ್ಗೆ ಚಿತ್ರತಂಡದವರಾಗಲಿ ಅಥವಾ ನಿರ್ದೇಶಕ ಕರಣ್ ಜೋಹರ್ ಯಾವುದೆ ಪ್ರತಿಕ್ರಿಯೆ ನೀಡಿಲ್ಲ.
ಅಂದ್ಹಾಗೆ ಹುಸೇನ್ ಅವರ ಟ್ವಿಟ್ಟರ್ ಅಕೌಂಟ್ ಬ್ಲಾಕ್ ಆಗಿದೆ. ಹುಸೇನ್ ಮಾಡಿರುವ ಈ ಟ್ವೀಟ್ ನ ಸ್ಕ್ರೀನ್ ಶಾಟ್ ಮಾತ್ರ ಎಲ್ಲಾ ಕಡೆ ಹರಿದಾಡುತ್ತಿದೆ. ನೆಟ್ಟಿಗರು ಈ ಸ್ಕ್ರೀನ್ ಶಾಕ್ ಅನ್ನೆ ಬಳಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುವ ಮೂಲಕ ಇಂಥವರ ಸಿನಿಮಾ ನೋಡಬೇಕಾ? ಎಂದು ಸಿನಿಮಾ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈ ಸಿನಿಮಾದಲ್ಲಿ ನಟ ರಣ್ವೀರ್ ಸಿಂಗ್ ಮತ್ತು ನಟಿ ಅಲಿಯಾ ಭಟ್ ಕೂಡ ಪ್ರಮುಖ ಪಾತ್ರದಲ್ಲಿ ಮಿಂಚುತ್ತಿದ್ದಾರೆ. ಈ ಸ್ಟಾರ್ ನಟರ ಅಭಿಮಾನಿಗಳು ಸಹ ಸಿನಿಮಾ ಬ್ಯಾನ್ ಮಾಡುವಂತೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ತಖ್ತ್ ಬಾಲಿವುಡ್ ನಲ್ಲಿ ತಾಯಾರಾಗುತ್ತಿರುವ ಹಿಸ್ಟಾರಿಕಲ್ ಸಿನಿಮಾ. ಮೊಘಲರ ಕಾಲದಲ್ಲಿ ಸಿಂಹಾಸಕ್ಕಾಗಿ ನಡೆದ ಒಂದು ಘಟನೆಯನ್ನು ಇಟ್ಟುಕೊಂಡು ಸಿನಿಮಾ ರೂಪ ಕೊಡುತ್ತಿದ್ದಾರೆ ಕರಣ್ ಜೋಹರ್. ರಣ್ವೀರ್ ಸಿಂಗ್, ವಿಕ್ಕಿ ಕೌಸಲ್, ಅಲಿಯಾ ಭಟ್, ಕರೀನಾ ಕಪೂರ್, ಭೂಮಿ ಪಡ್ನೇಕರ್, ಜಾಹ್ನವಿ ಕಪೂರ್ ಮತ್ತು ಅನಿಲ್ ಕಪೂರ್ ಸೇರಿದಂತೆ ದೊಡ್ಡ ಕಲಾವಿದರ ಬಳಗವೆ ಸಿನಮಾದಲ್ಲಿದೆ.