Don't Miss!
- Automobiles ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- News ನಾಲ್ಕು ಗೋಡೆಗಳ ಮಧ್ಯೆ ಆಗಿರುವ ಚರ್ಚೆ ಬಹಿರಂಗವಾಗಿ ಹೇಳೋದಕ್ಕೆ ಆಗಲ್ಲ: ಎಂ.ಪಿ.ರೇಣುಕಾಚಾರ್ಯ ಹೀಗೆ ಹೇಳಿದ್ಯಾಕೆ?
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದಯವಿಟ್ಟು ನನ್ನ ಸಿನಿಮಾ ನೋಡಿ, ನಾನು ತಪ್ಪು ಮಾಡಿಲ್ಲ: ಶಾರುಖ್
ನಿರ್ದೇಶಕ ರೋಹಿತ್ ಶೆಟ್ಟಿ ಆಕ್ಷನ್-ಕಟ್ ಹೇಳಿರುವ 'ದಿಲ್ವಾಲೆ' ಸಿನಿಮಾಕ್ಕೆ ತಡೆ ಒಡ್ಡಿದ್ದು, ಮಾತ್ರವಲ್ಲದೇ ಸಿನಿಮಾ ನೋಡಲು ಪ್ರೇಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಬಾರದೇ ಇರೋದನ್ನು ನೋಡಿ ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ ಅವರು ಭಾರಿ ಬೇಸರ ವ್ಯಕ್ತಪಡಿಸಿದ್ದಾರೆ.
'ನಾನು ಕ್ಷಮೆ ಕೋರಬೇಕಾದಂತಹ ಯಾವುದೇ ಹೇಳಿಕೆ ನೀಡಿಲ್ಲ. 'ಸಹಿಷ್ಣುತೆ' ಕುರಿತ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡವರು ಹಾಗೂ ತಪ್ಪಾಗಿ ಗ್ರಹಿಸಿದವರು ನಡೆಸಿದ ಪ್ರತಿಭಟನೆಯಿಂದ ಚಿತ್ರಕ್ಕೆ ಹೊಡೆತ ಬಿದ್ದಿದೆ' ಎಂದು ಬಾಲಿವುಡ್ ನಟ ಶಾರುಖ್ ಖಾನ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.[ದಿಲ್ವಾಲೆ: ಶಾರುಖ್ ಚಿತ್ರಕ್ಕೆ ವಿಮರ್ಶಕರಿಂದ ಚಾಟಿಯೇಟು]
'ಒಂದು ವೇಳೆ ನಾನು ಕ್ಷಮೆ ಕೋರುವಂತ ಹೇಳಿಕೆ ನೀಡಿದಿದ್ದರೆ, ನನ್ನ ತಪ್ಪಿನ ಅರಿವು ಮೊದಲು ನನಗೆ ಆಗುತ್ತಿತ್ತು. ಹಾಗೊಂದು ವೇಳೆ ನಾನಾಡಿದ ಮಾತಿನಿಂದ ಯಾರಿಗಾದರೂ ಬೇಸರ ಆಗಿದ್ದರೆ, ನಾನು ಕ್ಷಮೆ ಯಾಚಿಸುತ್ತೇನೆ.
ದಯವಿಟ್ಟು ಚಿತ್ರ ನೋಡಿ ಆನಂದಿಸಿ. ಚಿತ್ರ ನನ್ನೊಬ್ಬನದಲ್ಲ. ಸಾವಿರಾರು ಮಂದಿ ಬೆವರು ಸುರಿಸಿದ ಪರಿಶ್ರಮ ಈ ಚಿತ್ರದಲ್ಲಿದೆ. ಎಂದು ಕಿಂಗ್ ಖಾನ್ ಮನವಿ ಮಾಡಿದ್ದಾರೆ.['ಬೆಂಗಳೂರಿನಲ್ಲಿ ನನಗೆ ಬದುಕಲು ತುಂಬಾ ಆಸೆ' ಎಂದವರು ಯಾರು?]
'ಸುಮಾರು 25 ವರ್ಷಗಳಿಂದ ಚಿತ್ರರಂಗ ಕ್ಷೇತ್ರದಲ್ಲಿದ್ದೇನೆ, ಜಾತಿ, ಧರ್ಮ, ಪ್ರಾಂತ್ಯ, ವರ್ಗ, ಲಿಂಗ, ಭೇದವಿಲ್ಲದೆ ಈ ದೇಶದ ಜನ ನನಗೆ ಅಪಾರ ಪ್ರೀತಿ, ವಿಶ್ವಾಸ ತೋರಿದ್ದಾರೆ. ನನ್ನ ಚಿತ್ರ ಜನರನ್ನು ತಲುಪದಿದ್ದಾಗ ಬಹಳ ಬೇಸರ ಆಗುತ್ತದೆ'.
'ಜನರ ಪ್ರೀತಿಯನ್ನು ಹಿಂದಿರುಗಿಸಲು ಇರುವ ಏಕೈಕ ಮಾರ್ಗ ಎಂದರೆ ಅದು ಸಿನಿಮಾ ಒಂದೇ, ದಯವಿಟ್ಟು ಚಿತ್ರ ನೋಡಿ ಗೆಲ್ಲಿಸಿ ಎಂದು ಶಾರುಖ್ ಖಾನ್ ಅವರು ತಮ್ಮ ಅಭಿಮಾನಿಗಳಲ್ಲಿ ಮತ್ತು ಪ್ರೇಕ್ಷಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.