Don't Miss!
- News RCB: ಆರ್ಸಿಬಿ ಫ್ರಾಂಚೈಸ್ನಿಂದ ಬೆಂಗಳೂರಿನ ಮೂರು ಕೆರೆಗಳ ಪುನಶ್ಚೇತನ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Lifestyle ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಪದ್ಮಾವತ್' ಬಿಡುಗಡೆಗೆ ಸೆನ್ಸಾರ್ ಒಪ್ಪಿದ್ರು, ಸರ್ಕಾರ ಒಪ್ಪುತ್ತಿಲ್ಲ
ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ 'ಪದ್ಮಾವತ್' ಸಿನಿಮಾದ ವಿವಾದ ಬಗೆಹರಿಯಿತು ಎನ್ನುವಷ್ಟರಲ್ಲಿ ಮತ್ತೊಂದು ಸಂಕಟ ಎದುರಾಗಿದೆ. 'ಪದ್ಮಾವತಿ' ಚಿತ್ರದ ಟೈಟಲ್ ಬದಲಾಯಿಸಿ, 26 ದೃಶ್ಯಗಳಿಗೆ ಕತ್ತರಿ ಹಾಕಿದ್ರೆ, 'ಯು/ಎ' ಸರ್ಟಿಫಿಕೇಟ್ ನೀಡುವುದಾಗಿ ಷರತ್ತು ವಿಧಿಸಿದ್ದ ಸೆನ್ಸಾರ್ ಬೋರ್ಡ್ ಸಿನಿಮಾ ಬಿಡುಗಡೆ ಮಾಡಲು ಒಪ್ಪಿಗೆ ಸೂಚಿಸಿತ್ತು. ಆದ್ರೀಗ, ರಾಜಾಸ್ತಾನ ಸರ್ಕಾರ ಚಿತ್ರಕ್ಕೆ ವಿಲನ್ ಆಗಿದೆ.
ಹೌದು, 'ಪದ್ಮಾವತಿ'ಯಿಂದ 'ಪದ್ಮಾವತ್' ಆಗಿರುವ ಬನ್ಸಾಲಿ ಸಿನಿಮಾವನ್ನ ರಾಜಾಸ್ತಾನದಲ್ಲಿ ಬಿಡುಗಡೆ ಮಾಡದಿರಲು ರಾಜಾಸ್ತಾನದಲ್ಲಿರುವ ಬಿಜೆಪಿ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಕಚೇರಿಯಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ. ಚಿತ್ರದಲ್ಲಿ ರಾಣಿಪದ್ಮಾವತಿ ಬಗ್ಗೆ ಅಪಮಾನ ಮಾಡಲಾಗಿದೆ. ಇದರಿಂದ ಜನರ ಭಾವನೆಗೆ ಧಕ್ಕೆ ತರಲಿದೆ ಎಂಬ ಕಾರಣ ನೀಡಿ ಚಿತ್ರವನ್ನ ನಿಷೇಧಿಸಲು ಚಿಂತಿಸಿದೆ.
ಮೂಲಗಳ ಪ್ರಕಾರ ಜನವರಿ 25 ರಂದು 'ಪದ್ಮಾವತ್' ಸಿನಿಮಾ ಜಗತ್ತಿನಾದ್ಯಂತ ಬಿಡುಗಡೆಯಾಗಲಿದೆ. ದೀಪಿಕಾ ಪಡುಕೋಣೆ, ರಣ್ವೀರ್ ಸಿಂಗ್, ಶಾಹೀದ್ ಕಪೂರ್ ಚಿತ್ರದಲ್ಲಿ ಅಭಿನಯಿಸಿದ್ದಾರೆ.
'ಪದ್ಮಾವತಿ' ಚಿತ್ರಕ್ಕೆ ಸಿಗಲಿದೆ ಬಿಡುಗಡೆ ಭಾಗ್ಯ.?
'ಪದ್ಮಾವತ್' ಚಿತ್ರದಲ್ಲಿ ಇತಿಹಾಸವನ್ನು ತಿರುಚಲಾಗಿದೆ ಎಂದು ರಾಜಸ್ತಾನದ ಕೆಲ ಸಂಘಟನೆಗಳು ಆರೋಪಿಸಿದ ಕಾರಣ ವಿವಾದ ಸೃಷ್ಟಿಯಾಗಿತ್ತು. ಚಿತ್ರದ ಕತೆಯು ರಜಪೂತ ರಾಣಿ ಪದ್ಮಾವತಿ ಹಾಗೂ ದೆಹಲಿ ಸುಲ್ತಾನ ಅಲ್ಲಾವುದ್ದೀನ್ ಖಿಲ್ಜಿ ಸುತ್ತ ಸುತ್ತುತ್ತದೆ. ಈ ಚಿತ್ರದ ಪ್ರದರ್ಶನವನ್ನು ನಿಷೇಧಿಸುವಂತೆ ಒತ್ತಾಯಿಸಿ ಗುಜರಾತ್, ಮಹಾರಾಷ್ಟ್ರ, ಬಿಹಾರ, ರಾಜಸ್ತಾನ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರತಿಭಟನೆಗಳು ನಡೆದಿದ್ದವು.
'ಪದ್ಮಾವತಿ' ಚಿತ್ರದ ವಿವಾದ ಏನಿದು? ವಿರೋಧ ಯಾಕೆ?