Don't Miss!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Automobiles 20 ವರ್ಷದ ಬಳಿಕ ಲ್ಯಾಂಬೋರ್ಗಿನಿ ಲೋಗೋಗೆ ಹೊಸ ಟಚ್: ಈ ಕಂಪನಿಯ ಕಾರುಗಳು ಯಾಕೆ ಫೇಮಸ್?
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಪದ್ಮಾವತಿ' ಸಿನಿಮಾ ವಿರುದ್ಧ ಬೆಂಗಳೂರಿನಲ್ಲಿ ಪ್ರತಿಭಟನೆ
ಬಾಲಿವುಡ್ ನ ಬಹು ನಿರೀಕ್ಷಿತ ಸಿನಿಮಾ 'ಪದ್ಮಾವತಿ' ಬಿಡುಗಡೆಗೆ ವಿರೋಧಿಸಿ ಶ್ರೀ ರಾಷ್ಟ್ರೀಯ ರಜಪೂತ್ ಕರಣಿ ಸೇನಾ ಕರ್ನಾಟಕ ಸಂಘಟನೆ ಹಾಗೂ ಹಿಂದೂ ಸಂಘಟನೆ ವತಿಯಿಂದ ಬೆಂಗಳೂರಿನಲ್ಲಿ ಪ್ರತಿಭಟನೆ ಪ್ರಾರಂಭವಾಗಿದೆ.
ಭಾರತೀಯ ಇತಿಹಾಸವನ್ನ ತಿರುಚಿ 'ಪದ್ಮಾವತಿ' ಸಿನಿಮಾ ಮಾಡಲಾಗಿದೆ. ಹಿಂದೂ ಸಂಸ್ಕೃತಿಯ ಉಡುಗೆ ತೊಡುಗೆಯನ್ನ ಮತ್ತು ಅಂಗ ಪ್ರದರ್ಶನವನ್ನ ತಿರುಚಿ ತೋರಿಸಲಾಗಿದೆ. ಅಲ್ಲಾವುದ್ದೀನ್ ಖಿಲ್ಜಿ ಒಬ್ಬ ದಾಳಿಕೋರ, ಅಷ್ಟೇ ಯಾಕೆ ಅತ್ಯಾಚಾರಿ ಹಾಗೂ ವ್ಯಾಮೋಹಿ ಕೂಡ. ಇತನನ್ನ ಮುಖ್ಯ ನಾಯಕನನ್ನಾಗಿ ತೋರಿಸಿದ್ದಾರೆ. ಈ ಹಿನ್ನಲೆಯಲ್ಲಿ ಸಿನಿಮಾ ಬಿಡುಗಡೆ ಮಾಡಬಾರದೆಂದು ಪ್ರತಿಭಟನಾಕಾರರು ವಿರೋಧಿಸಿದ್ದಾರೆ.
ಟೌನ್ ಹಾಲ್ ನಿಂದ ಪ್ರಾರಂಭವಾಗಿರುವ ಸ್ವಾಭಿಮಾನಿ ಯಾತ್ರೆ ಫ್ರೀಡಂ ಪಾರ್ಕ್ ವರೆಗೆ ನಡೆಯಲಿದೆ. ರಾಷ್ಟ್ರೀಯ ರಜಪೂತ್ ಕರಣಿ ಸೇನಾ ಅಧ್ಯಕ್ಷ ಸುಖದೇವ್ ಸಿಂಗ್ ಜೊತೆ 500ಕ್ಕೂ ಹೆಚ್ಷು ಜನ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
ಪದ್ಮಾವತಿ ರಾಣಿ ಯಾವತ್ತೂ ನೃತ್ಯ ಮಾಡಿರಲಿಲ್ಲ. ಕೇವಲ ಸಖಿಯರು ನೃತ್ಯ ಮಾಡೋದನ್ನ ಪರದೆ ಸರಿಸಿ ನೋಡುತ್ತಿದ್ರು. ರಾಣಿ ಪದ್ಮಾವತಿ ಅವತಾರದಲ್ಲಿ ನೃತ್ಯ ಮಾಡಿಸಿರೋದು ರಜಪೂತ ಸಮುದಾಯಕ್ಕೆ ಅವಮಾನ ಮಾಡುವಂತಿದೆ ಎಂದು ರಾಷ್ಟ್ರೀಯ ರಜಪೂತ್ ಕರಣಿ ಸೇನಾ ಅಧ್ಯಕ್ಷ ಸುಖದೇವ್ ಸಿಂಗ್ ಆರೋಪಿಸಿದ್ದಾರೆ.
ಮೊದಲು ನಮಗೆ ಸಿನಿಮಾ ತೋರಿಸಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ದೊಡ್ಡ ಹೋರಾಟ ಮಾಡುವುದಾಗಿ ತಿಳಿಸಿರೋ ಸಂಘಟನಾಕಾರರು, ಕರ್ನಾಟಕದಲ್ಲಿ ಈ ಸಿನಿಮಾ ರಿಲೀಸ್ ಆಗದಂತೆ ತಡೆಯಲು ಪ್ರತಿಭಟನೆ ಮಾಡುತ್ತಿದ್ದೇವೆ ಎಂದಿದ್ದಾರೆ. ಒಟ್ಟಾರೆ ಆರಂಭದಿಂದಲೂ 'ಪದ್ಮಾವತಿ' ಸಿನಿಮಾಗೆ ಒಂದಲ್ಲಾ ಒಂದು ತೊಂದರೆ ಆಗುತ್ತಲೇ ಇದೇ. ಡಿಸೆಂಬರ್ ಒಂದರಂದು ಸಿನಿಮಾ ದೇಶದಾದ್ಯಂತ ತೆರೆಗೆ ಬರಬೇಕಾಗಿದೆ. ಆದ್ರೆ ಪ್ರತಿಭಟನೆ ಹೀಗೆ ಮುಂದುವರೆದರೆ ಚಿತ್ರ ಬಿಡುಗಡೆಗೆ ಮತ್ತಷ್ಟು ಸಂಕಷ್ಟ ಎದುರಾಗುವುದು ಗ್ಯಾರೆಂಟಿ.