Just In
Don't Miss!
- News
ಗೂಳಿಗೆ ಕೆಂಪು ಬಟ್ಟೆ ತೋರಿಸಿದಂತಾಗಿದೆ "ಜೈಶ್ರೀರಾಮ್" ಘೋಷಣೆ; ಹರಿಯಾಣ ಸಚಿವ
- Sports
ಐಎಸ್ಎಲ್: ಕೇರಳ ಬ್ಲಾಸ್ಟರ್ಸ್ vs ಎಫ್ಸಿ ಗೋವಾ, Live ಸ್ಕೋರ್
- Automobiles
2021ರ ಕ್ರೆಟಾ ಕಂಪ್ಯಾಕ್ಟ್ ಎಸ್ಯುವಿ ಕಾರಿನ ಬೆಲೆ ಹೆಚ್ಚಳ ಮಾಡಿದ ಹ್ಯುಂಡೈ
- Lifestyle
ಮಕರ ರಾಶಿಗೆ ಶುಕ್ರನ ಸಂಚಾರ: ಯಾವೆಲ್ಲಾ ರಾಶಿಗೆ ಶುಕ್ರದೆಸೆ
- Finance
ಮೂರನೇ ತ್ರೈಮಾಸಿಕದಲ್ಲಿ ಭಾರೀ ಲಾಭಗಳಿಸಿದ ರಿಲಯನ್ಸ್ ಇಂಡಸ್ಟ್ರೀಸ್
- Education
NIT Recruitment 2021: ಜ್ಯೂನಿಯರ್ ರಿಸರ್ಚ್ ಫೆಲೋ ಜೆಆರ್ಎಫ್ಹುದ್ದೆಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
'ಪದ್ಮಾವತಿ' ವಿವಾದಕ್ಕೆ ಟ್ವಿಸ್ಟ್: ರಿಲೀಸ್ ದಿನಾಂಕ ಮುಂದಕ್ಕೆ ಹೋಯ್ತು.!

ಎಲ್ಲ ಅಂದುಕೊಂಡಂತೆ ಆಗಿದ್ದರೇ ದೀಪಿಕಾ ಪಡುಕೋಣೆ ಅಭಿನಯದ 'ಪದ್ಮಾವತಿ' ಸಿನಿಮಾ ಡಿಸೆಂಬರ್ 1 ರಂದು ತೆರೆಕಾಣಬೇಕಿತ್ತು. ಆದ್ರೆ, ರಜಪೂತ ಕರಣಿ ಸೇನೆಯ ವಿರೋಧ ವ್ಯಕ್ತವಾದ ಹಿನ್ನೆಲೆ ದೇಶಾದ್ಯಂತ ದೊಡ್ಡ ವಿವಾದ ಸೃಷ್ಠಿಯಾಗಿದೆ. ಈ ವಿವಾದ ವಿಪರೀತವಾದ ಪರಿಣಾಮ 'ಪದ್ಮಾವತಿ' ಚಿತ್ರದ ಬಿಡುಗಡೆ ದಿನಾಂಕ ಬದಲಾಗಿದೆ ಎನ್ನಲಾಗುತ್ತಿದೆ.
'ಪದ್ಮಾವತಿ' ಚಿತ್ರಕ್ಕೆ ಸೆನ್ಸಾರ್ ಗಾಗಿ ಸಲ್ಲಿಸಿದ್ದ ಅರ್ಜಿ ಅಪೂರ್ಣವಾಗಿದೆ ಎಂಬ ಕಾರಣಕ್ಕೆ ಸೆನ್ಸಾರ್ ಮಂಡಳಿ ಚಿತ್ರದ ಬಿಡುಗಡೆಗೆ ತಾತ್ಕಲಿಕ ತಡೆ ನೀಡಿದೆ. ಪ್ರಮಾಣ ಪತ್ರಕ್ಕೆ ಸಹಿ ಹಾಕದೆ ಚಿತ್ರತಂಡಕ್ಕೆ ಅರ್ಜಿ ವಾಪಸ್ ನೀಡಿದೆ ಎನ್ನಲಾಗಿದೆ.
ಕರ್ನಾಟಕದಲ್ಲಿ 'ಪದ್ಮಾವತಿ' ರಿಲೀಸ್ ಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್
ಹೀಗಾಗಿ, ಮೊದಲು ನಿರ್ಧರಿಸಿದಂತೆ ಡಿಸೆಂಬರ್ 1 ಕ್ಕೆ 'ಪದ್ಮಾವತಿ' ಬರುವುದು ಅನುಮಾನವಾಗಿದೆ. ಮತ್ತೆ ಸೆನ್ಸಾರ್ ಮಂಡಳಿಗೆ ಹೊಸ ಅರ್ಜಿ ಸಲ್ಲಿಸಬೇಕು. ಅದಾದ ನಂತರ ಸೆನ್ಸಾರ್ ಮಂಡಳಿ ಮತ್ತೆ ವಿಮರ್ಶೆ ನೀಡಬೇಕು. ಆದ ಕಾರಣ ಚಿತ್ರದ ರಿಲೀಸ್ ದಿನಾಂಕವನ್ನ ಡಿಸೆಂಬರ್ ನಿಂದ ಜನವರಿಗೆ ಶಿಫ್ಟ್ ಮಾಡಲಾಗಿದೆಯಂತೆ.
ದೀಪಿಕಾ ಪಡುಕೋಣೆ ತಲೆ ಕತ್ತರಿಸಿದ್ರೆ 5 ಕೋಟಿ ಬಹುಮಾನ
ಮೂಲಗಳ ಪ್ರಕಾರ ಜನವರಿ 12 ರಂದು 'ಪದ್ಮಾವತಿ' ಸಿನಿಮಾ ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿದೆಯಂತೆ. ಮತ್ತೊಂದೆಡೆ ರಜಪೂತ ಕರಣಿ ಸೇನೆ ಸಿನಿಮಾ ಬಿಡುಗಡೆ ಮಾಡಬಾರದೆಂದು ಭಾರತ್ ಬಂದ್ ಗೆ ಕರೆ ನೀಡಿದೆ.