Don't Miss!
- News ಅಧಿಕಾರಕ್ಕೆ ಬಂದ 2-3 ತಿಂಗಳಲ್ಲಿ ಕಾಡುಗೊಲ್ಲರಿಗೆ ನ್ಯಾಯ ದೊರಕಿಸಿ ಕೊಡುತ್ತೇವೆ-ಕುಮಾರಸ್ವಾಮಿ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಗಲಿದ ನಗುವಿನ ಒಡೆಯ ರಾಜು ಶ್ರೀವಾತ್ಸವ್ಗೆ ಗಣ್ಯರ ಸಂತಾಪ
ಭಾರತೀಯ ಚಿತ್ರರಂಗದ ಖ್ಯಾತ ಹಾಸ್ಯ ಕಲಾವಿದ ರಾಜು ಶ್ರೀವಾತ್ಸವ್ ಇಂದು(ಸಪ್ಟೆಂಬರ್ 21) ವಿಧಿವಶರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ದೆಹಲಿಯ ಏಮ್ಸ್ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಭಾರತೀಯ ಚಿತ್ರರಂಗದಲ್ಲಿ ನಾಯಕ ನಟ, ಹಾಸ್ಯ ನಟನಾಗಿ ಗುರುತಿಸಿಕೊಂಡಿದ್ದ ರಾಜು ಶ್ರೀವಾತ್ಸವ್ ಬಾಲಿವುಡ್ನ ಅನೇಕ ನಟ ದಿಗ್ಗಜರ ಜೊತೆ ನಟಿಸಿದ್ದಾರೆ. 'ಮೈನೆ ಪ್ಯಾರ್ ಕಿಯಾ', 'ಬಾಜಿಗರ್', 'ಬಾಂಬೆ ಟು ಗೋವಾ' ಸೇರಿದಂತೆ ಬಾಲಿವುಡ್ನ ಅನೇಕ ಜನಪ್ರಿಯ ಚಿತ್ರಗಳಲ್ಲಿ ನಟಿಸಿದ್ದಾರೆ. ತಮ್ಮ ಹಾಸ್ಯ ಪ್ರಜ್ಞೆ ಹಾಗೂ ಸರಳ ವ್ಯಕ್ತಿತ್ವದಿಂದಾಗಿ ರಾಜು ಶ್ರೀವಾತ್ಸವ್ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು.
Raju Srivastav passed away : ಹಾಸ್ಯನಟ ರಾಜು ಶ್ರೀವಾಸ್ತವ್ ನಿಧನ
ರಾಜು ಶ್ರೀವಾತ್ಸವ್ ಅವರು ಇತ್ತೀಚಿಗೆಗೆ ರಾಜಕೀಯದಲ್ಲೂ ಸಕ್ರಿಯರಾಗಿದ್ದರು. ಭಾರತೀಯ ಜನತಾ ಪಾರ್ಟಿಯ ಸದಸ್ಯನಾಗಿದ್ದು, ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದರು. ಅದ್ಭುತ ಹಾಸ್ಯ ನಟ ಹಾಗೂ ಪಕ್ಷದ ನಿಷ್ಟಾವಂತ ಸದಸ್ಯನ ಅಗಲಿಕೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ರಾಜು ಶ್ರೀವಾತ್ಸವ್ ನಮ್ಮ ಬದುಕನ್ನು ನಗು ಹಾಗೂ ಸಕರಾತ್ಮಕ ಆಲೋಚನೆಗಳಿಂದ ಬೆಳಗಿಸಿದರು. ಇಷ್ಟು ಬೇಗ ಅವರು ನಮ್ಮನ್ನಗಲಿದ್ದಾರೆ. ಆದರೆ ಅಪಾರ ಜನರ ಮನಸ್ಸಿನಲ್ಲಿ ಅಮರರಾಗಿದ್ದಾರೆ. ಅವರ ಸೇವೆಗಾಗಿ ನಾನು ಧನ್ಯವಾದ ಅರ್ಪಿಸುತ್ತೇನೆ ಎಂದು ಪ್ರಧಾನಿ ಮೋದಿ ಬೇಸರ ವ್ಯಕ್ತಪಡಿಸಿದ್ದಾರೆ.
Raju Srivastava brightened our lives with laughter, humour and positivity. He leaves us too soon but he will continue to live in the hearts of countless people thanks to his rich work over the years. His demise is saddening. Condolences to his family and admirers. Om Shanti. pic.twitter.com/U9UjGcfeBK
— Narendra Modi (@narendramodi) September 21, 2022
ಬಾಲಿವುಡ್ ನಟಿ ರವಿನಾ ಟಂಡನ್ ರಾಜು ಶ್ರೀವಾತ್ಸವ್ ನಿಧನಕ್ಕೆ ಸಂತಾಪ ಸೂಚಿಸಿದ್ದು, ಅವರು ಎಂದಿದೂ ನಗುವಿನ ಒಡೆಯ ಎಂದಿದ್ದಾರೆ.
ಇದು ದುಃಖದ ಸುದ್ದಿಯಾಗಿದ್ದು, ನಾವೆಲ್ಲರೂ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತಿದ್ದೆವು. ಆದರೆ, ದುರದೃಷ್ಟವಶಾತ್ ಅವರು ನಮ್ಮನ್ನಗಲಿದ್ದಾರೆ. ಅವರ ಕುಟುಂಬಕ್ಕೆ ಈ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನನ್ನು ದೇವರು ನೀಡಲಿ ಎಂದು ಸಂತಾಪ ಸೂಚಿದ್ದಾರೆ.
You will be missed …. 🙏🏻🕉🙏🏻🌺 ॐशांति #rajusrivastava #laughterking https://t.co/BunXAHj8Uy
— Raveena Tandon (@TandonRaveena) September 21, 2022
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ರಾಜು ಶ್ರೀವಾತ್ಸವ್ ಅವರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ರಾಜು ಜೀ ನೀವು ಬಹುಬೇಗ ನಮ್ಮನ್ನಗಲಿದ್ದೀರಿ, ದಶಕಗಳಿಂದ ನಮ್ಮನ್ನು ನಗಿಸಿರುವುದಕ್ಕಾಗಿ ಧನ್ಯವಾದಗಳು. ನಿಮ್ಮನ್ನು ಪ್ರೀತಿಸುವ ಲಕ್ಷಾಂತರ ಅಭಿಮಾನಿಗಳಿಗೂ ಹಾಗೂ ನಿಮ್ಮ ಕುಟುಂಬಸ್ಥರಿಗೂ ದೇವರು ದುಃಖ ಸಹಿಸುವ ಶಕ್ತಿ ನೀಡಲಿ ಎಂದು ಬರೆದುಕೊಂಡಿದ್ದಾರೆ.
ॐ शांति🙏🌼
— SHILPA SHETTY KUNDRA (@TheShilpaShetty) September 21, 2022
My heart goes out to his family and millions of his fans who loved him so dearly🙏
Thank you for making us laugh for decades, Raju ji!♥️
You went too soon… #RajuSrivastava pic.twitter.com/9I3ukIGWvx
ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ರಾಜು ಶ್ರೀವಾತ್ಸವ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ರಾಜು ಶ್ರೀವಾತ್ಸವ್ ಅವರ ಫೋಟೋವನ್ನು ತಮ್ಮ ಟ್ಟಿಟರ್ ಖಾತೆಯಲ್ಲಿ ಹಂಚಿಕೊಂಡಿರುವ ವೀರೇಂದ್ರ ಸೆಹ್ವಾಗ್, ಶುದ್ಧ ಹಾಸ್ಯ ಮತ್ತು ತೀಕ್ಷ್ಣವಾದ ಅವಲೋಕನದಿಂದ ಜನರನ್ನು ನಗಿಸಿದ ಅಪ್ಪಟ ಹಾಸ್ಯಗಾರ. ನಿಮ್ಮ ಅಭಿಮಾನಿಗಳಿಗೂ ಹಾಗೂ ಕುಟುಂಬಸ್ಥರಿಗೂ ದೇವರು ದುಃಖ ಸಹಿಸುವ ಶಕ್ತಿ ನೀಡಲಿ ಎಂದು ಬರೆದುಕೊಂಡಿದ್ದಾರೆ.
Om Shanti, Raju Bhai. A genuine comedian who made people laugh with clean humour and sharp observation. Condolences to his family and fans. #RajuSrivastav pic.twitter.com/HUzaWfhwgi
— Virender Sehwag (@virendersehwag) September 21, 2022
ಬಾಲಿವುಡ್ ನಟ ರಿತೇಶ್ ದೇಶಮುಖ್, ತಮ್ಮ ಸೋಶಿಯಲ್ ಮೀಡಿಯಾದಲ್ಲಿ ರಾಜು ಶ್ರೀವಾತ್ಸವ್ ಅವರ ಬಗ್ಗೆ ಬರೆದುಕೊಂಡಿದ್ದಾರೆ. ವೇದಿಕೆಯ ಮೇಲೂ, ವೇದಿಕೆಯಾಚೆಗೂ ನೀವು ನಗುವಿನ ರಾಜ. ನಮ್ಮನ್ನು ನಗಿಸಿರುವುದಕ್ಕಾಗಿ ಧನ್ಯವಾದಗಳು. ನಿಮ್ಮ ಅಭಿಮಾನಿಗಳಿಗೂ ಹಾಗೂ ಕುಟುಂಬಸ್ಥರಿಗೂ ದೇವರು ದುಃಖ ಸಹಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.
Gone too soon.. King of humour on stage and off stage too. Thank you Dearest #RajuSrivastav for filling our lives with laughter & joy..your legacy will love on. Condolences & prayers to the family and loved ones. Om Shanti pic.twitter.com/qI54VLm75H
— Riteish Deshmukh (@Riteishd) September 21, 2022
'ಕಾಶ್ಮೀರಿ ಫೈಲ್ಸ್' ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರ, ರಾಜು ಶ್ರೀವಾತ್ಸವ್ ಅವರ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ. ನನ್ನ ಸಹೋದರ, ಸ್ನೇಹಿತ ಮತ್ತು ದೇಶದ ಸಂತೋಷದ ಅಲೆ, ರಾಜು ಶ್ರೀವಾಸ್ತವ ನಮ್ಮನ್ನಗಲಿದ್ದಾರೆ. ಈ ವಿಚಾರ ತಿಳಿದು ನಾನು ತೀವ್ರ ದುಃಖಿತನಾಗಿದ್ದೇನೆ. ಅವರಂತಹ ಕಲಾವಿದರು ಅಪರೂಪ. ಅವರಂತಹ ಕಲಾವಿದರನ್ನು ಭಾರತ ಕಂಡಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಇನ್ನು ಗೃಹ ಸಚಿವ ಅಮಿತ್ ಶಾ,ರಕ್ಷಣಾ ಸಚಿವ ರಾಜ್ನಾಥ್ ಸಿಂಗ್, ಸಿಎಂ ಯೋಗಿ ಆಧಿತ್ಯನಾಥ್ ಬಾಲಿವುಡ್ ನಟ ಸೋನು ಸೂದ್ ಸೇರಿದಂತೆ ಅನೇಕ ಗಣ್ಯರು ರಾಜು ಶ್ರೀವಾತ್ಸವ್ ಅವರ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.