Don't Miss!
- News ಬಿಎಸ್ವೈ ಹಾಗೂ "ಆ" ಮಹಾನ್ ನಾಯಕನಿಂದಲೇ ಮಗನಿಗೆ ಚಿತ್ರದುರ್ಗ ಬಿಜೆಪಿ ಟಿಕೆಟ್ ತಪ್ತು: ಹೊಳಲ್ಕೆರೆ ಶಾಸಕ
- Automobiles Honda: ಭಾರತದಲ್ಲಿ ಹೋಂಡಾ ಹೊಸ ಮೈಲಿಗಲ್ಲು: ಎಷ್ಟು ಮಂದಿಯ ಬಳಿ ಆಕ್ಟೀವಾ, ಶೈನ್ ಇದೆ ಹೇಳಿ?
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಪಿಎಂ ನರೇಂದ್ರ ಮೋದಿ' ಬಯೋಪಿಕ್ ನಿರ್ಮಾಪಕರಿಗೆ ಜೀವ ಬೆದರಿಕೆ: ದೂರು ದಾಖಲು
ಕೊರೊನಾ ಲಾಕ್ ಡೌನ್ ಬಳಿಕ ರೀ ರಿಲೀಸ್ ಆಗಲು ಸಿದ್ಧವಾಗಿರುವ 'ಪಿಎಂ ನರೇಂದ್ರ ಮೋದಿ' ಬಯೋಪಿಕ್ ನಿರ್ಮಾಪಕರಿಗೆ ಜೀವ ಬೆದರಿಕೆ ಬಂದಿರುವ ಬಗ್ಗೆ ಸುದ್ದಿಯಾಗಿದೆ. ಈ ಬಗ್ಗೆ ಚಿತ್ರದ ಸಹ ನಿರ್ಮಾಪಕ ಅಮಿತಾ ಬಿ ವಾಧ್ವಾನಿ ಮುಂಬೈ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ.
'ಪಿಎಂ ನರೇಂದ್ರ ಮೋದಿ' ಬಯೋಪಿಕ್ ಕಳೆದ ವರ್ಷ ರಿಲೀಸ್ ಆಗಿತ್ತು. ನಿರೀಕ್ಷೆಯ ಮಟ್ಟಕ್ಕೆ ಸಿನಿಮಾ ಯಶಸ್ಸು ಕಂಡಿರಲಿಲ್ಲ. ಚಿತ್ರದಲ್ಲಿ ಮೋದಿ ಪಾತ್ರದಲ್ಲಿ ನಟ ವಿವೇಕ್ ಒಬೆರಾಯ್ ಕಾಣಿಸಿಕೊಂಡಿದ್ದರು. ಇದೀಗ ಈ ಸಿನಿಮಾವನ್ನು ಮತ್ತೆ ರಿಲೀಸ್ ಮಾಡಲು ಸಿನಿಮಾತಂಡ ನಿರ್ಧರಿಸಿ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ.
ಮತ್ತೆ ಥಿಯೇಟರ್ ಅಂಗಳಕ್ಕೆ ಮೋದಿ ಬಯೋಪಿಕ್ ಸಿನಿಮಾ
ಈ ನಡುವೆ ನಿರ್ಮಾಪಕರಿಗೆ ಸಾಮಾಜಿಕ ಜಾಲತಾಣದಲ್ಲಿ ಜೀವ ಬೆದರಿಕೆ ಬಂದಿದೆ. ಆಪ್ಟಿಮಿಸ್ಟಿಕ್ಸ್ ಹೆಸರಿನ ಫೇಸ್ ಬುಕ್ ಖಾತೆಯಿಂದ ಜೀವ ಬೆದರಿಕೆ ಬಂದಿರುವುದಾಗಿ ಸಹ ನಿರ್ಮಾಪಕ ಅಮಿತ್ ದೂರಿನಲ್ಲಿ ತಿಳಿಸಿದ್ದಾರೆ. 'ಸಿನಿಮಾ ರೀ ರಿಲೀಸ್ ಆಗುತ್ತಿದೆ ಎಂದು ಘೋಷಣೆ ಮಾಡಿದ್ದಕ್ಕಾಗಿ ಬೆದರಿಕೆ ಬಂದಿದೆ. ಅದೂ ಪ್ರಧಾನಮಂತ್ರಿ ಜೀವನಚರಿತ್ರೆ ಇದು ನನಗೆ ಆಘಾತವುಂಟುಮಾಡಿದೆ. ನನ್ನ ಸಿನಿಮಾ ರೀ ರಿಲೀಸ್ ಆಗುತ್ತಿದೆ ಎಂದು ಹೇಳುವುದರಲ್ಲಿ ಏನು ಅತಿರೇಕ ಇರಲಿಲ್ಲ. ಕೆಟ್ಟ ಪ್ರಚಾರಕ್ಕಾಗಿ ನಮ್ಮನ್ನು ಗುರಿ ಮಾಡುವುದು ದುರದೃಷ್ಟಕರ' ಎಂದು ಸಹ ನಿರ್ಮಾಪಕ ಅಮಿತ್ ಹೇಳಿದ್ದಾರೆ.
Recommended Video
ನಿರ್ದೇಶಕ ಓಮಂಗ್ ಕುಮಾರ್ ಸಾರಥ್ಯದಲ್ಲಿ ಸಿನಿಮಾ ಮೂಡಿಬಂದಿದೆ. ಕಳೆದ ವರ್ಷ ಮೇ 24ರಂದು ಸಿನಿಮಾ ರಿಲೀಸ್ ಆಗಿತ್ತು. ಇದೀಗ 7 ತಿಂಗಳುಗಳ ಬಳಿಕ ಚಿತ್ರಮಂದಿರಗಳು ಓಪನ್ ಆಗುತ್ತಿವೆ. ಪಿಎಂ ಮೋದಿ ಸಿನಿಮಾ ಪ್ರದರ್ಶನವಾಗುತ್ತಿದೆ. ಕೊರೊನಾ ಸಮಯದಲ್ಲಿ ಚಿತ್ರಮಂದಿರಕ್ಕೆ ಜನ ಬರ್ತಾರಾ, ಪಿಎಂ ಮೋದಿ ಸಿನಿಮಾಗೆ ಈ ಬಾರಿ ಯಾವ ರೀತಿ ಪ್ರತಿಕ್ರಿಯೆ ವ್ಯಕ್ತವಾಗಲಿದೆ ಎಂದು ಕಾದುನೋಡಬೇಕು.